ಬ್ರೇಕಿಂಗ್ ನ್ಯೂಸ್
03-02-21 12:53 pm Mangalore Correspondent ಕರಾವಳಿ
ಮಂಗಳೂರು, ಫೆ.3 : ನಗರದ ಪಡೀಲ್ ಸಮೀಪದ ಅಡ್ಯಾರ್ ಎಂಬ ಊರಿನ ಮೂಲ ಹೆಸರು ಅಡಿಯಾರ ಎಂಬುದಾಗಿತ್ತು. ಹಿಂದಿನ ಕಾಲದಲ್ಲಿ ಅತ್ಯಂತ ಫಲವತ್ತಾದ ಭೂಮಿಯಾಗಿತ್ತು ಎನ್ನುವ ಅಂಶ ಅಲ್ಲಿ ಪತ್ತೆಯಾದ ಶಾಸನವೊಂದರಿಂದ ತಿಳಿದುಬಂದಿದೆ.
ಅಡ್ಯಾರ್ ಗ್ರಾಮದ ಸೋಮನಾಥ ಕಟ್ಟೆ ಎಂಬ ಸ್ಥಳದಲ್ಲಿ ಆಳುಪ ದೊರೆ ಮೂರನೇ ಕುಲಶೇಖರನಿಗೆ ಸೇರಿದ್ದು ಎನ್ನಲಾದ ಶಾಸನ ಕಲ್ಲನ್ನು ಸ್ಥಳೀಯ ಯುವಕರು ಪತ್ತೆ ಮಾಡಿದ್ದಾರೆ. ಸಂಶೋಧನಾರ್ಥಿ
ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಈ ಶಾಸನವನ್ನು ಓದಿ, ಹಿಂದೆ ಮಂಗಳೂರು ರಾಜ್ಯವನ್ನು ಆಳುತ್ತಿದ್ದ ಆಳುಪ ರಾಜ ಕುಲಶೇಖರನ ಕಾಲದಲ್ಲಿ ಆಗಿರುವ ಶಾಸನ ಎಂದು ಹೇಳಿದ್ದಾರೆ. ಮಣ್ಣಿನಲ್ಲಿ ಹುದುಗಿ ಹೋಗಿದ್ದ ಶಾಸನವನ್ನು ಸ್ಥಳೀಯ ಯುವಕರು ಮತ್ತು ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳಬೆಟ್ಟು ಸಹಕಾರದಿಂದ ಮಣ್ಣಿನಿಂದ ಹೊರತೆಗೆದು ನೇರವಾಗಿ ನಿಲ್ಲಿಸಲಾಗಿದೆ.

ನಾಲ್ಕು ಅಡಿ ಎತ್ತರ ಮತ್ತು ಎರಡು ಅಡಿ ಅಗಲ ಇದ್ದು ಗ್ರಾನೈಟ್ ಶಿಲೆಯಲ್ಲಿ ಕೆತ್ತಲಾದ ಶಾಸನ ಕಲ್ಲಿನಲ್ಲಿ ಅಚ್ಚ ಕನ್ನಡ ಲಿಪಿಯಲ್ಲಿ ಬರೆಯಲಾಗಿದೆ. ಶಾಸನವು 19 ಸಾಲುಗಳನ್ನು ಹೊಂದಿದ್ದು , ಆ ಕಾಲದಲ್ಲಿ ಕನ್ನಡ ಲಿಪಿ ಮತ್ತು ಕನ್ನಡ ಭಾಷೆ ಪ್ರಚಲಿತದಲ್ಲಿತ್ತು ಎಂಬುದನ್ನು ಸೂಚಿಸುತ್ತದೆ.

ಶಾಸನದಲ್ಲಿ ಮೂರನೇ ಕುಲಶೇಖರನನ್ನು ಶ್ರೀ ಮತ್ಸ್ಯಾಂಡ್ಯ ಚಕ್ರವರ್ತಿರಾಯ ಗಜಾಂಕುಶ ವೀರ ಕುಲಶೇಖರ ಎಂದು ಸಂಭೋದಿಸಲಾಗಿದೆ. ಶಾಸನದಲ್ಲಿ ಸಾಧಾರಣ ಸಂವತ್ಸರದ ಧನು ಮಾಸ ೨ ನೆಯ ಆದಿತ್ಯವಾರ ಎಂಬುದಾಗಿ ಕಾಲಮಾನದ ಉಲ್ಲೇಖವನ್ನು ಮಾಡಲಾಗಿದೆ. ವೀರ ಕುಲಶೇಖರ ಮಂಗಳೂರ ರಾಜ್ಯವನ್ನು ಆಳುತ್ತಿದ್ದ ಸಂದರ್ಭದಲ್ಲಿ ಅಡಿಯಾರ ಪ್ರದೇಶದ ಬೆದೆಕಾರು (ಮಳೆಗಾಲದಲ್ಲಿ ಬೆಳೆಯುವ ತರಿ ಭೂಮಿ) ಭೂಮಿಗಳನ್ನು ದಾನ ಕೊಟ್ಟಿರುವ ಉಲ್ಲೇಖವನ್ನು ಈ ಶಾಸನದಲ್ಲಿ ಮಾಡಲಾಗಿದೆ. ಶಾಸನದ ಕೊನೆಯಲ್ಲಿ ಈ ಶಾಸನವನ್ನು ಯಾರು ಹಾಳು ಮಾಡುವರೋ ಅವರು ಗಂಗೆ ಮತ್ತು ವಾರಣಾಸಿಯಲ್ಲಿ ಸಹಸ್ರ ಗೋವುಗಳನ್ನು ಕೊಂದ ದೋಷಕ್ಕೆ ಹೋಗುವರು ಎಂಬ ಶಾಪ ವಾಕ್ಯವನ್ನು ಬರೆಯಲಾಗಿದೆ. ಈ ದಾನವನ್ನು ಗುರುವಣಪ್ಪ ಒಡೆಯನು ಮಾಡಿದ ಎಂಬುದನ್ನು ಶಾಸನದಲ್ಲಿ ತಿಳಿಸಲಾಗಿದೆ.

ಮುಖ್ಯವಾಗಿ ಶಾಸನದಲ್ಲಿ ಉಲ್ಲೇಖಗೊಂಡ ಅಡಿಯಾರ ಎಂಬ ಹೆಸರಿನ ಊರು ಪ್ರಸ್ತುತ ಚಾಲ್ತಿಯಲ್ಲಿರುವ ಅಡ್ಯಾರ್ ಆಗಿರುವ ಸಾಧ್ಯತೆಯಿದೆ. ಅಲ್ಲದೆ, ಅಡ್ಯಾರ್ ಹೆಸರಿನ ಪೂರ್ವದ ಹೆಸರಾಗಿರಬಹುದು ಎಂದು ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬುಧವಾರ ಬೆಳಗ್ಗೆ ಕ್ಷೇತ್ರಕಾರ್ಯ ಶೋಧನೆ ಕೆಲಸ ನಡೆದಿದ್ದು ಈ ಸಂದರ್ಭದಲ್ಲಿ ವಿಶ್ವಾಸ್, ವಿನೀತ್, ರಿಖಿಲ್, ಪ್ರಸನ್ನ, ರತನ್, ಸುಜಿತ್, ಸುರೇಶ್ ಶೆಟ್ಟಿ ಅವರು ಸಹಕಾರ ನೀಡಿದ್ದರು.
Historic Monument Stone of Veera Kulashekara found at Adyar in Mangalore. A large crowd has gathered to see the Historic Stone.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am