ಬ್ರೇಕಿಂಗ್ ನ್ಯೂಸ್
03-02-21 05:08 pm Mangalore Correspondent ಕರಾವಳಿ
ಮಂಗಳೂರು, ಫೆ.3: ಕನ್ನಡ ಕಿರುತೆರೆ ಮತ್ತು ತುಳು ಸಿನಿಮಾಗಳಲ್ಲಿ ನಟಿಸುತ್ತಿರುವ ಶೋಭರಾಜ್ ಪಾವೂರು ವಿರುದ್ಧ ಮೋದಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಪೆಟ್ರೋಲ್ ದರ ವಿಪರೀತ ಏರಿಕೆಯಾಗಿರುವ ಬಗ್ಗೆ ಶೋಭರಾಜ್ ಫೇಸ್ಬುಕ್ ನಲ್ಲಿ ಮಾಡಿದ್ದ ಪೋಸ್ಟಿಗೆ ವಿರುದ್ಧವಾಗಿ ಮೋದಿ ಅಭಿಮಾನಿಗಳು ಬೆದರಿಕೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮೋ, ನಮಗೆ ಮೋಸ, ಪೆಟ್ರೋಲ್ ಧಗ ಧಗ ಎಂದು ಶೋಭರಾಜ್ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿ, ಬಜೆಟ್ ನಲ್ಲಿ ಮತ್ತೆ ತೈಲ ದರದ ಮೇಲೆ ಸೆಸ್ ವಿಧಿಸಿರುವುದನ್ನು ವಿರೋಧಿಸಿದ್ದರು. ಈ ಬಗ್ಗೆ ಕರಾವಳಿಯ ಮೋದಿ ಅಭಿಮಾನಿಗಳು ಮೈಪರಚಿಕೊಂಡವರ ರೀತಿ ವರ್ತಿಸಿದ್ದಾರೆ.

ಆಕ್ರೋಶ ಕೇಳಿಬರುತ್ತಿದ್ದಂತೆ, ತನ್ನ ಹಳೆಯ ಪೋಸ್ಟನ್ನು ಡಿಲೀಟ್ ಮಾಡಿದ್ದ ಶೋಭರಾಜ್ ತುಳುವಿನಲ್ಲಿ ಮತ್ತೆ ಪೋಸ್ಟ್ ಮಾಡಿದ್ದರು. ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಅಷ್ಟಕ್ಕೂ ನನ್ನ ಪೋಸ್ಟ್ ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಆದರೆ, ಮೋದಿ ಅಭಿಮಾನಿಗಳ ಆಕ್ರೋಶ ಕಡಿಮೆಯಾಗಿಲ್ಲ. ಕೆಲವರು ನೇರವಾಗಿ ನೋಡಿಕೊಳ್ಳುತ್ತೇವೆಂದು ಬೆದರಿಕೆ ಹಾಕಿದರೆ, ಇನ್ನು ಕೆಲವರು ನಿನ್ನ ಸಿನಿಮಾ ಏನಾಗುತ್ತದೆ ನೋಡುತ್ತಿರು ಅಂತ ಟೀಕೆ ಮಾಡಿದ್ದಾರೆ. ಮತ್ತೆ ಕೆಲವರು ವ್ಯಂಗ್ಯವಾಗಿ ಅಣಕಿಸಿಯೂ ಟೀಕೆ ಮಾಡಿದ್ದಾರೆ.

ಇವೆಲ್ಲ ಆಕ್ರೋಶ ಕೇಳಿಬಂದ ಬಳಿಕ ಶೋಭರಾಜ್ ಫೇಸ್ಬುಕ್ ನಲ್ಲಿ ತಣ್ಣಗಾಗಿದ್ದಾರೆ. ಮಂಗಳೂರು ಮೂಲದ ಪ್ರತಿಭಾವಂತ ನಟನಾಗಿರುವ ಶೋಭರಾಜ್, ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿದ್ದಾರೆ. ಜೊತೆಗೆ ತುಳು ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಹುಬ್ಲಿ ಹುಡ್ಗ , ಮಂಗಳೂರು ಹುಡ್ಗಿ ಧಾರಾವಾಹಿಯಲ್ಲಿ ಹುಡುಗಿಯ ತಂದೆಯ ಪಾತ್ರ ಶೋಭರಾಜ್ ಗೆ ಖ್ಯಾತಿ ತಂದುಕೊಟ್ಟಿತ್ತು.
Mangalore Tulu Actor and Director Shobraj Pavoor Lands into Controversy after his post on Fuel Prices and PM Modi turns into Controversy.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm