ಬ್ರೇಕಿಂಗ್ ನ್ಯೂಸ್
03-02-21 05:08 pm Mangalore Correspondent ಕರಾವಳಿ
ಮಂಗಳೂರು, ಫೆ.3: ಕನ್ನಡ ಕಿರುತೆರೆ ಮತ್ತು ತುಳು ಸಿನಿಮಾಗಳಲ್ಲಿ ನಟಿಸುತ್ತಿರುವ ಶೋಭರಾಜ್ ಪಾವೂರು ವಿರುದ್ಧ ಮೋದಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಪೆಟ್ರೋಲ್ ದರ ವಿಪರೀತ ಏರಿಕೆಯಾಗಿರುವ ಬಗ್ಗೆ ಶೋಭರಾಜ್ ಫೇಸ್ಬುಕ್ ನಲ್ಲಿ ಮಾಡಿದ್ದ ಪೋಸ್ಟಿಗೆ ವಿರುದ್ಧವಾಗಿ ಮೋದಿ ಅಭಿಮಾನಿಗಳು ಬೆದರಿಕೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮೋ, ನಮಗೆ ಮೋಸ, ಪೆಟ್ರೋಲ್ ಧಗ ಧಗ ಎಂದು ಶೋಭರಾಜ್ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿ, ಬಜೆಟ್ ನಲ್ಲಿ ಮತ್ತೆ ತೈಲ ದರದ ಮೇಲೆ ಸೆಸ್ ವಿಧಿಸಿರುವುದನ್ನು ವಿರೋಧಿಸಿದ್ದರು. ಈ ಬಗ್ಗೆ ಕರಾವಳಿಯ ಮೋದಿ ಅಭಿಮಾನಿಗಳು ಮೈಪರಚಿಕೊಂಡವರ ರೀತಿ ವರ್ತಿಸಿದ್ದಾರೆ.

ಆಕ್ರೋಶ ಕೇಳಿಬರುತ್ತಿದ್ದಂತೆ, ತನ್ನ ಹಳೆಯ ಪೋಸ್ಟನ್ನು ಡಿಲೀಟ್ ಮಾಡಿದ್ದ ಶೋಭರಾಜ್ ತುಳುವಿನಲ್ಲಿ ಮತ್ತೆ ಪೋಸ್ಟ್ ಮಾಡಿದ್ದರು. ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಅಷ್ಟಕ್ಕೂ ನನ್ನ ಪೋಸ್ಟ್ ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಆದರೆ, ಮೋದಿ ಅಭಿಮಾನಿಗಳ ಆಕ್ರೋಶ ಕಡಿಮೆಯಾಗಿಲ್ಲ. ಕೆಲವರು ನೇರವಾಗಿ ನೋಡಿಕೊಳ್ಳುತ್ತೇವೆಂದು ಬೆದರಿಕೆ ಹಾಕಿದರೆ, ಇನ್ನು ಕೆಲವರು ನಿನ್ನ ಸಿನಿಮಾ ಏನಾಗುತ್ತದೆ ನೋಡುತ್ತಿರು ಅಂತ ಟೀಕೆ ಮಾಡಿದ್ದಾರೆ. ಮತ್ತೆ ಕೆಲವರು ವ್ಯಂಗ್ಯವಾಗಿ ಅಣಕಿಸಿಯೂ ಟೀಕೆ ಮಾಡಿದ್ದಾರೆ.

ಇವೆಲ್ಲ ಆಕ್ರೋಶ ಕೇಳಿಬಂದ ಬಳಿಕ ಶೋಭರಾಜ್ ಫೇಸ್ಬುಕ್ ನಲ್ಲಿ ತಣ್ಣಗಾಗಿದ್ದಾರೆ. ಮಂಗಳೂರು ಮೂಲದ ಪ್ರತಿಭಾವಂತ ನಟನಾಗಿರುವ ಶೋಭರಾಜ್, ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿದ್ದಾರೆ. ಜೊತೆಗೆ ತುಳು ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಹುಬ್ಲಿ ಹುಡ್ಗ , ಮಂಗಳೂರು ಹುಡ್ಗಿ ಧಾರಾವಾಹಿಯಲ್ಲಿ ಹುಡುಗಿಯ ತಂದೆಯ ಪಾತ್ರ ಶೋಭರಾಜ್ ಗೆ ಖ್ಯಾತಿ ತಂದುಕೊಟ್ಟಿತ್ತು.
Mangalore Tulu Actor and Director Shobraj Pavoor Lands into Controversy after his post on Fuel Prices and PM Modi turns into Controversy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm