ಬ್ರೇಕಿಂಗ್ ನ್ಯೂಸ್
            
                        03-02-21 05:08 pm Mangalore Correspondent ಕರಾವಳಿ
            ಮಂಗಳೂರು, ಫೆ.3: ಕನ್ನಡ ಕಿರುತೆರೆ ಮತ್ತು ತುಳು ಸಿನಿಮಾಗಳಲ್ಲಿ ನಟಿಸುತ್ತಿರುವ ಶೋಭರಾಜ್ ಪಾವೂರು ವಿರುದ್ಧ ಮೋದಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಪೆಟ್ರೋಲ್ ದರ ವಿಪರೀತ ಏರಿಕೆಯಾಗಿರುವ ಬಗ್ಗೆ ಶೋಭರಾಜ್ ಫೇಸ್ಬುಕ್ ನಲ್ಲಿ ಮಾಡಿದ್ದ ಪೋಸ್ಟಿಗೆ ವಿರುದ್ಧವಾಗಿ ಮೋದಿ ಅಭಿಮಾನಿಗಳು ಬೆದರಿಕೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮೋ, ನಮಗೆ ಮೋಸ, ಪೆಟ್ರೋಲ್ ಧಗ ಧಗ ಎಂದು ಶೋಭರಾಜ್ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿ, ಬಜೆಟ್ ನಲ್ಲಿ ಮತ್ತೆ ತೈಲ ದರದ ಮೇಲೆ ಸೆಸ್ ವಿಧಿಸಿರುವುದನ್ನು ವಿರೋಧಿಸಿದ್ದರು. ಈ ಬಗ್ಗೆ ಕರಾವಳಿಯ ಮೋದಿ ಅಭಿಮಾನಿಗಳು ಮೈಪರಚಿಕೊಂಡವರ ರೀತಿ ವರ್ತಿಸಿದ್ದಾರೆ.

ಆಕ್ರೋಶ ಕೇಳಿಬರುತ್ತಿದ್ದಂತೆ, ತನ್ನ ಹಳೆಯ ಪೋಸ್ಟನ್ನು ಡಿಲೀಟ್ ಮಾಡಿದ್ದ ಶೋಭರಾಜ್ ತುಳುವಿನಲ್ಲಿ ಮತ್ತೆ ಪೋಸ್ಟ್ ಮಾಡಿದ್ದರು. ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಅಷ್ಟಕ್ಕೂ ನನ್ನ ಪೋಸ್ಟ್ ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಆದರೆ, ಮೋದಿ ಅಭಿಮಾನಿಗಳ ಆಕ್ರೋಶ ಕಡಿಮೆಯಾಗಿಲ್ಲ. ಕೆಲವರು ನೇರವಾಗಿ ನೋಡಿಕೊಳ್ಳುತ್ತೇವೆಂದು ಬೆದರಿಕೆ ಹಾಕಿದರೆ, ಇನ್ನು ಕೆಲವರು ನಿನ್ನ ಸಿನಿಮಾ ಏನಾಗುತ್ತದೆ ನೋಡುತ್ತಿರು ಅಂತ ಟೀಕೆ ಮಾಡಿದ್ದಾರೆ. ಮತ್ತೆ ಕೆಲವರು ವ್ಯಂಗ್ಯವಾಗಿ ಅಣಕಿಸಿಯೂ ಟೀಕೆ ಮಾಡಿದ್ದಾರೆ.

ಇವೆಲ್ಲ ಆಕ್ರೋಶ ಕೇಳಿಬಂದ ಬಳಿಕ ಶೋಭರಾಜ್ ಫೇಸ್ಬುಕ್ ನಲ್ಲಿ ತಣ್ಣಗಾಗಿದ್ದಾರೆ. ಮಂಗಳೂರು ಮೂಲದ ಪ್ರತಿಭಾವಂತ ನಟನಾಗಿರುವ ಶೋಭರಾಜ್, ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿದ್ದಾರೆ. ಜೊತೆಗೆ ತುಳು ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಹುಬ್ಲಿ ಹುಡ್ಗ , ಮಂಗಳೂರು ಹುಡ್ಗಿ ಧಾರಾವಾಹಿಯಲ್ಲಿ ಹುಡುಗಿಯ ತಂದೆಯ ಪಾತ್ರ ಶೋಭರಾಜ್ ಗೆ ಖ್ಯಾತಿ ತಂದುಕೊಟ್ಟಿತ್ತು.
            
            
            Mangalore Tulu Actor and Director Shobraj Pavoor Lands into Controversy after his post on Fuel Prices and PM Modi turns into Controversy.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm