ಬ್ರೇಕಿಂಗ್ ನ್ಯೂಸ್
03-02-21 06:13 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಫೆ.3: ಕೊನೆಗೂ ಅರಣ್ಯಾಧಿಕಾರಿಗಳ ಆಪರೇಶನ್ ಚಿರತೆ ಠುಸ್ಸಾಯ್ತು. ಬೆಳಗ್ಗಿನಿಂದ ಬೋನು, ಬಲೆ ಹಿಡಿದು ಕಾರ್ಯಾಚರಣೆ ಮಾಡಿದ್ದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿಯೇ ಚಿರತೆ ಪರಾರಿಯಾಗಿದೆ.
ಬೆಳಗ್ಗಿನಿಂದಲೇ ಅರಣ್ಯಾಧಿಕಾರಿಗಳು ಒಂದೆಡೆ ಬೋನು, ಮತ್ತೊಂದು ಕಡೆ ಬಲೆ ಹಿಡಿದು ಚಿರತೆಯನ್ನು ಹಿಡಿಯಲು ಹರಸಾಹಸ ಮಾಡಿದ್ದರು. ಚಿರತೆ ಇನ್ನೇನು ಕೈಗೆ ಸಿಕ್ಕೇಬಿಡ್ತು ಎನ್ನುವಾಗಲೇ ಒಮ್ಮೆಗೆ ಹೊರಗೆ ಬಂದಿದ್ದ ಚಿರತೆ ಬಲೆಯೊಳಗೆ ಸಿಲುಕುತ್ತಲೇ ಎಗರಾಡಿದೆ. ಬಲೆಯನ್ನು ಕಚ್ಚಿ ಹೊರಗೆ ಓಡುವ ಪ್ರಯತ್ನದಲ್ಲಿದ್ದಾಗಲೇ ಬಲೆ ತುಂಡಾಯಿತೋ ಏನೋ ಗೊತ್ತಿಲ್ಲ. ಬಲೆಯ ಅಡಿಭಾಗದಿಂದ ಚಿರತೆ ಹೊರಬಂದಿದ್ದು ಜನರನ್ನು ನೋಡಿ ಬೆದರಿ ಓಟಕ್ಕಿತ್ತಿದ್ದು ಪೊದೆಗಳ ನಡುವೆ ಓಡಿ ಪರಾರಿಯಾಗಿದೆ.


ಒಮ್ಮೆಗೆ ಚಿರತೆ ಹೊರಗೆ ಬಂದಿದ್ದು ಗೊತ್ತಾಗುತ್ತಲೇ ಅಲ್ಲಿ ಸೇರಿದ್ದ ಪರಿಸರ ಜನರು, ಪೊಲೀಸರು, ಮಾಧ್ಯಮದ ವ್ಯಕ್ತಿಗಳು ಕೂಡ ಚಿರತೆಯ ಬಗ್ಗೆ ಹೆದರಿ ಓಟಕ್ಕಿತ್ತಿದ್ದಾರೆ. ಅತ್ತ ಚಿರತೆಯೂ ಓಡಿದ್ದು, ಅದಾಗಲೇ ಕಾಡಿನಲ್ಲಿ ಮರೆಯಾಗಿತ್ತು. ಇಂದು ಮುಂಜಾವಿನ ವೇಳೆಗೆ, ಸುಬ್ರಹ್ಮಣ್ಯ ಬಳಿಯ ಕೈಕಂಬದ ರೇಗಪ್ಪ ಎಂಬವರ ಮನೆ ಆವರಣಕ್ಕೆ ಬಂದಿದ್ದ ಚಿರತೆ ನಾಯಿಯನ್ನು ಹಿಡಿಯಲೆಂದು ಬೆನ್ನಟ್ಟಿ ಬಂದಿತ್ತು. ನಾಯಿ ಪ್ರಾಣ ಭಯದಲ್ಲಿ ಮನೆಯ ಟಾಯ್ಲೆಟ್ ಕೋಣೆಗೆ ಹೊಕ್ಕಿತ್ತು. ಇದೇ ವೇಳೆ, ನಾಯಿಯನ್ನು ಹುಡುಕುತ್ತಾ ಹಿಂದೆ ಓಡಿದ್ದ ಮನೆಯಲ್ಲಿದ್ದ ಮಹಿಳೆ ಒಳಗೆ ಚಿರತೆ ಇರುವುದನ್ನು ಕಂಡು ಟಾಯ್ಲೆಟಿಗೆ ಬಾಗಿಲು ಹಾಕಿದ್ದಾರೆ.


ಆಬಳಿಕ ಸ್ಥಳೀಯರು ಸೇರಿದ್ದು ಅರಣ್ಯಾಧಿಕಾರಿಗಳು ಮತ್ತು ಸುಬ್ರಹ್ಮಣ್ಯ ಪೊಲೀಸರನ್ನು ಕರೆಸಿದ್ದಾರೆ. ಚಿರತೆ ಹಿಡಿಯಲೆಂದು ಬೋನು, ಹಗ್ಗ, ಬಲೆ ಎಲ್ಲವನ್ನೂ ಸ್ಥಳಕ್ಕೆ ತಂದು ಏನೋ ಆಪರೇಶನ್ ಮಾಡಲು ಪ್ಲಾನ್ ಹಾಕಿದ್ದರು. ಆದರೆ, ಮಧ್ಯಾಹ್ನ ಮೂರು ಗಂಟೆ ವೇಳೆಗೆ ಬಲೆಯ ನಡುವಿನಿಂದಲೇ ತಪ್ಪಿಸಿಕೊಂಡು ಮೇಲ್ಛಾವಣಿ ಹಾರಿ ತಪ್ಪಿಸಿಕೊಂಡಿದ್ದು ಸುಬ್ರಹ್ಮಣ್ಯದಲ್ಲಿ ಜನರ ಬಾಯಲ್ಲಿ ಹಾಸ್ಯದ ನಗೆ ಉಗ್ಗಿಸಿದೆ.
Read: ಸುಬ್ರಹ್ಮಣ್ಯ ; ನಾಯಿ ಅಟ್ಟಿಸಿ ಬಂದು ಟಾಯ್ಲೆಟ್ ಒಳಗೆ ಸಿಕ್ಕಿಬಿದ್ದ ಚಿರತೆ !
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am