ಬ್ರೇಕಿಂಗ್ ನ್ಯೂಸ್
03-02-21 06:13 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಫೆ.3: ಕೊನೆಗೂ ಅರಣ್ಯಾಧಿಕಾರಿಗಳ ಆಪರೇಶನ್ ಚಿರತೆ ಠುಸ್ಸಾಯ್ತು. ಬೆಳಗ್ಗಿನಿಂದ ಬೋನು, ಬಲೆ ಹಿಡಿದು ಕಾರ್ಯಾಚರಣೆ ಮಾಡಿದ್ದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿಯೇ ಚಿರತೆ ಪರಾರಿಯಾಗಿದೆ.
ಬೆಳಗ್ಗಿನಿಂದಲೇ ಅರಣ್ಯಾಧಿಕಾರಿಗಳು ಒಂದೆಡೆ ಬೋನು, ಮತ್ತೊಂದು ಕಡೆ ಬಲೆ ಹಿಡಿದು ಚಿರತೆಯನ್ನು ಹಿಡಿಯಲು ಹರಸಾಹಸ ಮಾಡಿದ್ದರು. ಚಿರತೆ ಇನ್ನೇನು ಕೈಗೆ ಸಿಕ್ಕೇಬಿಡ್ತು ಎನ್ನುವಾಗಲೇ ಒಮ್ಮೆಗೆ ಹೊರಗೆ ಬಂದಿದ್ದ ಚಿರತೆ ಬಲೆಯೊಳಗೆ ಸಿಲುಕುತ್ತಲೇ ಎಗರಾಡಿದೆ. ಬಲೆಯನ್ನು ಕಚ್ಚಿ ಹೊರಗೆ ಓಡುವ ಪ್ರಯತ್ನದಲ್ಲಿದ್ದಾಗಲೇ ಬಲೆ ತುಂಡಾಯಿತೋ ಏನೋ ಗೊತ್ತಿಲ್ಲ. ಬಲೆಯ ಅಡಿಭಾಗದಿಂದ ಚಿರತೆ ಹೊರಬಂದಿದ್ದು ಜನರನ್ನು ನೋಡಿ ಬೆದರಿ ಓಟಕ್ಕಿತ್ತಿದ್ದು ಪೊದೆಗಳ ನಡುವೆ ಓಡಿ ಪರಾರಿಯಾಗಿದೆ.


ಒಮ್ಮೆಗೆ ಚಿರತೆ ಹೊರಗೆ ಬಂದಿದ್ದು ಗೊತ್ತಾಗುತ್ತಲೇ ಅಲ್ಲಿ ಸೇರಿದ್ದ ಪರಿಸರ ಜನರು, ಪೊಲೀಸರು, ಮಾಧ್ಯಮದ ವ್ಯಕ್ತಿಗಳು ಕೂಡ ಚಿರತೆಯ ಬಗ್ಗೆ ಹೆದರಿ ಓಟಕ್ಕಿತ್ತಿದ್ದಾರೆ. ಅತ್ತ ಚಿರತೆಯೂ ಓಡಿದ್ದು, ಅದಾಗಲೇ ಕಾಡಿನಲ್ಲಿ ಮರೆಯಾಗಿತ್ತು. ಇಂದು ಮುಂಜಾವಿನ ವೇಳೆಗೆ, ಸುಬ್ರಹ್ಮಣ್ಯ ಬಳಿಯ ಕೈಕಂಬದ ರೇಗಪ್ಪ ಎಂಬವರ ಮನೆ ಆವರಣಕ್ಕೆ ಬಂದಿದ್ದ ಚಿರತೆ ನಾಯಿಯನ್ನು ಹಿಡಿಯಲೆಂದು ಬೆನ್ನಟ್ಟಿ ಬಂದಿತ್ತು. ನಾಯಿ ಪ್ರಾಣ ಭಯದಲ್ಲಿ ಮನೆಯ ಟಾಯ್ಲೆಟ್ ಕೋಣೆಗೆ ಹೊಕ್ಕಿತ್ತು. ಇದೇ ವೇಳೆ, ನಾಯಿಯನ್ನು ಹುಡುಕುತ್ತಾ ಹಿಂದೆ ಓಡಿದ್ದ ಮನೆಯಲ್ಲಿದ್ದ ಮಹಿಳೆ ಒಳಗೆ ಚಿರತೆ ಇರುವುದನ್ನು ಕಂಡು ಟಾಯ್ಲೆಟಿಗೆ ಬಾಗಿಲು ಹಾಕಿದ್ದಾರೆ.


ಆಬಳಿಕ ಸ್ಥಳೀಯರು ಸೇರಿದ್ದು ಅರಣ್ಯಾಧಿಕಾರಿಗಳು ಮತ್ತು ಸುಬ್ರಹ್ಮಣ್ಯ ಪೊಲೀಸರನ್ನು ಕರೆಸಿದ್ದಾರೆ. ಚಿರತೆ ಹಿಡಿಯಲೆಂದು ಬೋನು, ಹಗ್ಗ, ಬಲೆ ಎಲ್ಲವನ್ನೂ ಸ್ಥಳಕ್ಕೆ ತಂದು ಏನೋ ಆಪರೇಶನ್ ಮಾಡಲು ಪ್ಲಾನ್ ಹಾಕಿದ್ದರು. ಆದರೆ, ಮಧ್ಯಾಹ್ನ ಮೂರು ಗಂಟೆ ವೇಳೆಗೆ ಬಲೆಯ ನಡುವಿನಿಂದಲೇ ತಪ್ಪಿಸಿಕೊಂಡು ಮೇಲ್ಛಾವಣಿ ಹಾರಿ ತಪ್ಪಿಸಿಕೊಂಡಿದ್ದು ಸುಬ್ರಹ್ಮಣ್ಯದಲ್ಲಿ ಜನರ ಬಾಯಲ್ಲಿ ಹಾಸ್ಯದ ನಗೆ ಉಗ್ಗಿಸಿದೆ.
Read: ಸುಬ್ರಹ್ಮಣ್ಯ ; ನಾಯಿ ಅಟ್ಟಿಸಿ ಬಂದು ಟಾಯ್ಲೆಟ್ ಒಳಗೆ ಸಿಕ್ಕಿಬಿದ್ದ ಚಿರತೆ !
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm