ಬ್ರೇಕಿಂಗ್ ನ್ಯೂಸ್
            
                        03-02-21 11:19 pm Mangaluru Correspondent ಕರಾವಳಿ
            ಉಡುಪಿ, ಫೆ. 3: ಶಿರ್ವದ ಮುಲ್ಕಿ ಸುಂದರರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಇತ್ತೀಚೆಗೆ ನಡೆಸಿದ ಪುರಾತತ್ವ ಅನ್ವೇಷಣೆಯಲ್ಲಿ ಸುಮಾರು 12ನೇ ಶತಮಾನಕ್ಕೆ ಸೇರಿದ ಅತ್ಯಾಕರ್ಷಕ ವಿಷ್ಣುಮೂರ್ತಿ ದೇವರ ಭಗ್ನ ಶಿಲ್ಪ ಪತ್ತೆಯಾಗಿದೆ ಎಂದು ವಿಭಾಗ ಮುಖ್ಯಸ್ಥ ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ.
ಉಡುಪಿ ತಾಲೂಕಿನ 80 ಬಡಗಬೆಟ್ಟು ಪಂಚಾಯಿತಿ ಕಚೇರಿಯ ಹಿಂಭಾಗದ ಕಾಡಿನಲ್ಲಿ ಪಾಳು ಬಿದ್ದ ದೇಗುಲವೊಂದಿದ್ದು, ದೇವಾಲಯದ ಪಕ್ಕದಲ್ಲಿ ಇರುವ ಹಾಳು ಬಾವಿಯಲ್ಲಿ ಪುರಾತತ್ವ ಅನ್ವೇಷಣೆ ವೇಳೆ ಸುಂದರವಾದ ಶಿಲ್ಪ ಪತ್ತೆಯಾಗಿದೆ ಎಂದವರು ತಿಳಿಸಿದ್ದಾರೆ.
ಶಿಲ್ಪದ ಮುಂದಿನ ಬಲಗೈಯಲ್ಲಿ ಪಿಂಡ, ಎಡಗೈ ಸೊಂಟದ ಮೇಲಿದ್ದು ತುಂಡಾದ ಗದೆ ದೊರೆತಿದೆ. ಬಲ ಹಿಂಬದಿಯ ಕೈ ಭಾಗ ಸಹ ತುಂಡಾಗಿದ್ದು ಅದು ದೊರೆತಿಲ್ಲ. ಎಡ ಹಿಂಬದಿಯ ಕೈಯಲ್ಲಿ ಆಕರ್ಷಕ ಶಂಖವಿದೆ. ಕಿವಿಯಲ್ಲಿ ಮಕರ ಕುಂಡಲವಿದೆ. ಕೊರಳಲ್ಲಿ ಕಂಠಾಭರಣ, ಆಕರ್ಷಕ ಉಪವೀತ, ಉದರಾಭರಣ ಹಾಗು ಮೊಳಕಾಲಿನ ವರೆಗೆ ಇಳಿಬಿದ್ದ ಕೌಸ್ತುಭ ಹಾರವಿದೆ.
ಚಿತ್ತಾಕರ್ಷಕವಾದ ಈ ಶಿಲ್ಪ ಕರಂಡ ಮುಕುಟಧಾರಿಯಾಗಿದ್ದು, ತೋಳಲ್ಲಿ ತೋಳ್ಬಂದಿ, ಕಡಗಗಳಿಂದ ಸಿಂಗರಿಸಲ್ಪಟ್ಟಿದೆ. ಸೊಂಟಪಟ್ಟಿ, ಸೊಂಟದ ಕೆಳಭಾಗದಲ್ಲಿ ವಸ್ತ್ರ, ವಡ್ಯಾಣಗಳಿವೆ. ಪಾದಗಳು ತುಂಡಾಗಿದ್ದು, ತುಂಡಾದ ಪಾದದ ಭಾಗಗಳು ಪಾಳು ಬಿದ್ದ ದೇವಾಲಯದ ಗರ್ಭಗುಡಿಯಲ್ಲಿ ಪಾಣಿ ಪೀಠದಲ್ಲಿವೆ. ಮುಖದ ಹಿಂಭಾಗದಲ್ಲಿ ಪ್ರಭಾವಳಿಯಿದ್ದು ಇಡೀ ಶಿಲ್ಪ 4 ಅಡಿ ಎತ್ತರವಿದೆ. ಶಿಲ್ಪದ ಶೈಲಿ ಮತ್ತು ಲಕ್ಷಣದ ಆಧಾರದ ಮೇಲೆ ಈ ಶಿಲ್ಪವನ್ನು 12-13ನೇ ಶತಮಾನದ ಶಿಲ್ಪವೆಂದು ನಿರ್ಧರಿಸಲಾಗಿದೆ. ಆಚಾರ್ಯ ಮಧ್ವರಿಗಿಂತ ಮೊದಲೇ ಭಾಗವತ ಪಂಥ ತುಳುನಾಡಿನಲ್ಲಿ ಜನಪ್ರಿಯವಾಗಿತ್ತು ಎಂಬುದಕ್ಕೆ ಈ ಶಿಲ್ಪ ಸಾಕ್ಷಿಯಾಗಿದೆ. ಅತೀವ ಸೌಂದರ್ಯ ದಿಂದ ಕಂಗೊಳಿಸುವ ಈ ಶಿಲ್ಪ, ಕರ್ನಾಟಕ ಕರಾವಳಿಯ ಒಂದು ಮಾಸ್ಟರ್ ಪೀಸ್ ಎಂಬುದರಲ್ಲಿ ಸಂಶಯವಿಲ್ಲ. ಅನ್ವೇಷಣೆ ಇನ್ನೂ ಮುಂದುವರಿದಿದೆ ಎಂದು ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ.
ಪ್ರೊ.ಮುರುಗೇಶಿ ಅವರ ಈ ಸಂಶೋಧನೆಯಲ್ಲಿ ಕಾಲೇಜಿನ ಅಂತಿಮ ಬಿ.ಎ. ಪುರಾತತ್ವ ವಿಭಾಗದ ಕಾವ್ಯ, ಭವ್ಯಾ, ಶ್ರೇಯಸ್, ನಾಗರಾಜ, ರಾಜೇಶ್, ಗೌತಮ್ ಹಾಗೂ ಸ್ಥಳೀಯರಾದ ಗಣೇಶ್ ಆಚಾರ್ಯ ಮತ್ತು ಗಣೇಶ್ ಸರಳೇಬೆಟ್ಟು ಸಹಕರಿಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Also Read: "ಅಡ್ಯಾರ್" ಮೂಲ ಹೆಸರು ಅಡಿಯಾರ ಆಗಿತ್ತೇ..? ಆಳುಪ ದೊರೆ ವೀರ ಕುಲಶೇಖರನ ಶಾಸನ ಕಲ್ಲು ಪತ್ತೆ !
            
            
            12th-century Statue of Vishnu Murthy idol has been found in Udupi. The Idol was found inside an empty well right next to a very old temple.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm