ಬ್ರೇಕಿಂಗ್ ನ್ಯೂಸ್
04-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಇಲ್ಲಿನ ಬೈಕಂಪಾಡಿಯಲ್ಲಿ ಇರುವ ಮಂಗಳೂರು ಎಪಿಎಂಸಿ ಯಾರ್ಡಿನ ಗೋದಾಮು ಹಂಚಿಕೆಯ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮಂಗಳೂರು ಸೆಂಟ್ರಲ್ ಮಾರ್ಕೆಟ್ನಲ್ಲಿದ್ದ ಹಣ್ಣು ಮತ್ತು ತರಕಾರಿ ಸಹಿತ ಸುಮಾರು 200ಕ್ಕೂ ಅಧಿಕ ವ್ಯಾಪಾರಿಗಳಿಗೆ 390 ಗೋದಾಮುಗಳನ್ನು ಹಂಚಿಕೆ ಮಾಡಲಾಗಿತ್ತು. ಜೇಷ್ಠತೆಯ ಆಧಾರದ ಹಂಚಿಕೆಯಲ್ಲಿ ಆಗಿರುವ ಲೋಪಗಳು ಮತ್ತು ವ್ಯಾಪಾರಕ್ಕೆ ಯೋಗ್ಯವಲ್ಲದ ಗೋದಾಮುಗಳನ್ನು ಹಂಚಿಕೆ ಮಾಡಿರುವುದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿಟ್ಟಿರುವ ಗೋದಾಮುಗಳನ್ನು ನಿಯಮಬಾಹಿರವಾಗಿ ಸಾಮಾನ್ಯ ವರ್ಗದ ಬಲಾಢ್ಯ ವರ್ತಕರಿಗೆ ಹಂಚಿಕೆ ಮಾಡಿರುವುದು, ಕಾರ್ನರ್ ಅಂಗಡಿಗಳನ್ನು ಹರಾಜಿಗಿಡದೆ ನೇರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದ ಮಂಗಳೂರು ಎಪಿಎಂಸಿ ವರ್ತಕರ ಸಂಘವು ಮಂಗಳೂರು ಎಪಿಎಂಸಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ದಾವೆ ಹೂಡಿತ್ತು.

ಅದಲ್ಲದೆ ಎಪಿಎಂಸಿಯ ಸುಮಾರು 170ಕ್ಕೂ ಅಧಿಕ ವರ್ತಕರು, ನಿಗದಿತ ಡಿಡಿ ಪಾವತಿಸದೆ ಗೋದಾಮು ಹಂಚಿಕೆ ಪ್ರಕ್ರಿಯೆಯನ್ನು ವಿರೋಧಿಸಿ ಕಾನೂನು ಹೋರಾಟ ನಡೆಸುವ ತೀರ್ಮಾನ ಕೈಗೊಂಡಿದ್ದರು.
ದೂರಿನಂತೆ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ಮಂಗಳೂರು ಎಪಿಎಂಸಿ ಅಧಿಕಾರಿಗಳ ಲೋಪವನ್ನು ಗುರುತಿಸಿ ಗೋದಾಮು ಹಂಚಿಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.
ಗೋದಾಮು ಹಂಚಿಕೆ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ನೀಡಿದ ತೀರ್ಪನ್ನು ಮಂಗಳೂರು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಭರತ್ ರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಕೆ.ಇಮ್ತಿಯಾಝ್ ಸ್ವಾಗತಿಸಿದ್ದಾರೆ. ವರ್ತಕರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
Mangalore Irregularities in distribution of cashews by ampc the district court issues stay order on Apmc.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm