ಬ್ರೇಕಿಂಗ್ ನ್ಯೂಸ್
04-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಇಲ್ಲಿನ ಬೈಕಂಪಾಡಿಯಲ್ಲಿ ಇರುವ ಮಂಗಳೂರು ಎಪಿಎಂಸಿ ಯಾರ್ಡಿನ ಗೋದಾಮು ಹಂಚಿಕೆಯ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮಂಗಳೂರು ಸೆಂಟ್ರಲ್ ಮಾರ್ಕೆಟ್ನಲ್ಲಿದ್ದ ಹಣ್ಣು ಮತ್ತು ತರಕಾರಿ ಸಹಿತ ಸುಮಾರು 200ಕ್ಕೂ ಅಧಿಕ ವ್ಯಾಪಾರಿಗಳಿಗೆ 390 ಗೋದಾಮುಗಳನ್ನು ಹಂಚಿಕೆ ಮಾಡಲಾಗಿತ್ತು. ಜೇಷ್ಠತೆಯ ಆಧಾರದ ಹಂಚಿಕೆಯಲ್ಲಿ ಆಗಿರುವ ಲೋಪಗಳು ಮತ್ತು ವ್ಯಾಪಾರಕ್ಕೆ ಯೋಗ್ಯವಲ್ಲದ ಗೋದಾಮುಗಳನ್ನು ಹಂಚಿಕೆ ಮಾಡಿರುವುದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿಟ್ಟಿರುವ ಗೋದಾಮುಗಳನ್ನು ನಿಯಮಬಾಹಿರವಾಗಿ ಸಾಮಾನ್ಯ ವರ್ಗದ ಬಲಾಢ್ಯ ವರ್ತಕರಿಗೆ ಹಂಚಿಕೆ ಮಾಡಿರುವುದು, ಕಾರ್ನರ್ ಅಂಗಡಿಗಳನ್ನು ಹರಾಜಿಗಿಡದೆ ನೇರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದ ಮಂಗಳೂರು ಎಪಿಎಂಸಿ ವರ್ತಕರ ಸಂಘವು ಮಂಗಳೂರು ಎಪಿಎಂಸಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ದಾವೆ ಹೂಡಿತ್ತು.

ಅದಲ್ಲದೆ ಎಪಿಎಂಸಿಯ ಸುಮಾರು 170ಕ್ಕೂ ಅಧಿಕ ವರ್ತಕರು, ನಿಗದಿತ ಡಿಡಿ ಪಾವತಿಸದೆ ಗೋದಾಮು ಹಂಚಿಕೆ ಪ್ರಕ್ರಿಯೆಯನ್ನು ವಿರೋಧಿಸಿ ಕಾನೂನು ಹೋರಾಟ ನಡೆಸುವ ತೀರ್ಮಾನ ಕೈಗೊಂಡಿದ್ದರು.
ದೂರಿನಂತೆ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ಮಂಗಳೂರು ಎಪಿಎಂಸಿ ಅಧಿಕಾರಿಗಳ ಲೋಪವನ್ನು ಗುರುತಿಸಿ ಗೋದಾಮು ಹಂಚಿಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.
ಗೋದಾಮು ಹಂಚಿಕೆ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ನೀಡಿದ ತೀರ್ಪನ್ನು ಮಂಗಳೂರು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಭರತ್ ರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಕೆ.ಇಮ್ತಿಯಾಝ್ ಸ್ವಾಗತಿಸಿದ್ದಾರೆ. ವರ್ತಕರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
Mangalore Irregularities in distribution of cashews by ampc the district court issues stay order on Apmc.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm