ಬ್ರೇಕಿಂಗ್ ನ್ಯೂಸ್
04-02-21 07:44 pm Mangaluru Correspondent ಕರಾವಳಿ
ಮಂಗಳೂರು, ಫೆ.4: ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳನ್ನು ಹೊರತುಪಡಿಸಿ ಉಳಿದ ಖಾಸಗಿ ಹಿಂದು ದೇವಸ್ಥಾನಗಳನ್ನು ಕಲಂ 53ರ ಅಡಿಯಲ್ಲಿ ನೋಂದಣಿ ಮಾಡಿಸಲು ಸರಕಾರ ಮುಂದಾಗಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಎಲ್ಲ ಖಾಸಗಿ ದೇವಸ್ಥಾನಗಳಿಗೆ ನೋಟೀಸ್ ಜಾರಿ ಮಾಡಲಾಗಿದ್ದು, ಇದನ್ನು ತಕ್ಷಣದಿಂದಲೇ ಹಿಂಪಡೆಯಬೇಕೆಂದು ವಿಶ್ವ ಹಿಂದು ಪರಿಷತ್ ಆಗ್ರಹಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ವಿಹಿಂಪ ಪ್ರಾಂತ ಸಂಚಾಲಕ ಎಂ.ಬಿ.ಪುರಾಣಿಕ್, ಈ ರೀತಿಯ ಸುತ್ತೋಲೆ ಹೊರಡಿಸಿದ್ದು ಸರಕಾರದ ಹಿಂದು ವಿರೋಧಿ ನಿಲುವಾಗಿದ್ದು, ಖಾಸಗಿ ದೇವಸ್ಥಾನಗಳ ವಾರ್ಷಿಕ ಲೆಕ್ಕಪತ್ರ, ಅಲ್ಲಿ ಏನೆಲ್ಲ ಸೊತ್ತುಗಳಿವೆ ಎಂಬ ಬಗ್ಗೆ ಲೆಕ್ಕ ಕೊಡಲು ಸೂಚಿಸಲಾಗಿದೆ. ಇದು ಹಿಂದು ದೇವಸ್ಥಾನಗಳಿಗೆ ಮಾತ್ರ ಸೀಮಿತ ಮಾಡಿದ್ದು ಯಾಕೆ ? ಇಂಥದ್ದೇ ನಿಲುವು ಕ್ರಿಸ್ತಿಯನ್ನರ ಚರ್ಚ್ ಮತ್ತು ಮುಸ್ಲಿಮರ ಮಸೀದಿಗಳಿಗೆ ಯಾಕೆ ಅನ್ವಯ ಮಾಡಿಲ್ಲ ಎಂದು ಪ್ರಶ್ನಿಸಿದರು.

ಕಳೆದ ಬಾರಿ ಕಾಂಗ್ರೆಸ್ ಸರಕಾರ ಇದ್ದಾಗ 2015ರ ಆಗಸ್ಟ್ ತಿಂಗಳಲ್ಲಿ ಈ ರೀತಿಯ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಹೊರಡಿಸಲಾಗಿತ್ತು. ಅದನ್ನು ಮಾರ್ಪಾಡುಗೊಳಿಸಿ ಈಗಿನ ಬಿಜೆಪಿ ಸರಕಾರ 2020ರ ನವೆಂಬರ್ ತಿಂಗಳಲ್ಲಿ ಜಾರಿ ಮಾಡಿದ್ದು, ಅನುಷ್ಠಾನಕ್ಕೆ ತರುತ್ತಿದೆ. ಖಾಸಗಿ ಹಿಂದು ದೇವಸ್ಥಾನಗಳಿಗೆ ಅಧಿಕಾರಿಗಳು ನೋಟೀಸ್ ನೀಡಿ, ಚರಾಸ್ತಿ, ಸ್ಥಿರಾಸ್ತಿ ಮತ್ತು ವಾರ್ಷಿಕ ಆದಾಯದ ಬಗ್ಗೆ ಮಾಹಿತಿ ನೀಡಲು ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ತಿಂಗಳಲ್ಲಿ ಲೆಕ್ಕಪತ್ರ ನೀಡದಿದ್ದರೆ ತಾವೇ ಬಂದು ಆ ಕೆಲಸವನ್ನು ಮಾಡಬೇಕಾಗುತ್ತದೆ ಎಂದು ಬೆದರಿಸುತ್ತಿದ್ದಾರೆ. ಮಾಹಿತಿ ನೀಡದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ. ಈ ರೀತಿಯ ಒತ್ತಡವನ್ನು ಚರ್ಚ್, ಮಸೀದಿಗಳಿಗೂ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದರು.
ಮುಜರಾಯಿ ಇಲಾಖೆಯ ದೇವಸ್ಥಾನಗಳಿಗಿಂತ ಹೆಚ್ಚು ಜನಸ್ನೇಹಿಯಾಗಿ ಸೇವಾ ಚಟುವಟಿಕೆಗಳನ್ನು ಖಾಸಗಿ ದೇವಸ್ಥಾನಗಳು ನಡೆಸಿಕೊಂಡು ಬಂದಿವೆ. ರಾಜ್ಯದಲ್ಲಿ ಈ ರೀತಿಯ ಸಾವಿರಾರು ದೇವಸ್ಥಾನಗಳಿದ್ದು, ಇಂಥ ನೋಟೀಸ್ ನೀಡಿ ಹಿಂದು ಶ್ರದ್ಧಾಕೇಂದ್ರಗಳನ್ನು ಸರಕಾರೀಕರಣಗೊಳಿಸಲು ಹುನ್ನಾರ ನಡೆಸುತ್ತಿದೆ. ಸರಕಾರಕ್ಕೆ ತೆಗೆದುಕೊಳ್ಳುವ ಪ್ರಯತ್ನದ ಮೊದಲ ಹೆಜ್ಜೆ. ತಕ್ಷಣದಿಂದಲೇ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ನಾವು ಯಾವುದೇ ಹೋರಾಟಕ್ಕೂ ಸಿದ್ಧವಾಗಿದ್ದೇವೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಇದ್ದರು.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm