ಬ್ರೇಕಿಂಗ್ ನ್ಯೂಸ್
04-02-21 07:44 pm Mangaluru Correspondent ಕರಾವಳಿ
ಮಂಗಳೂರು, ಫೆ.4: ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳನ್ನು ಹೊರತುಪಡಿಸಿ ಉಳಿದ ಖಾಸಗಿ ಹಿಂದು ದೇವಸ್ಥಾನಗಳನ್ನು ಕಲಂ 53ರ ಅಡಿಯಲ್ಲಿ ನೋಂದಣಿ ಮಾಡಿಸಲು ಸರಕಾರ ಮುಂದಾಗಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಎಲ್ಲ ಖಾಸಗಿ ದೇವಸ್ಥಾನಗಳಿಗೆ ನೋಟೀಸ್ ಜಾರಿ ಮಾಡಲಾಗಿದ್ದು, ಇದನ್ನು ತಕ್ಷಣದಿಂದಲೇ ಹಿಂಪಡೆಯಬೇಕೆಂದು ವಿಶ್ವ ಹಿಂದು ಪರಿಷತ್ ಆಗ್ರಹಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ವಿಹಿಂಪ ಪ್ರಾಂತ ಸಂಚಾಲಕ ಎಂ.ಬಿ.ಪುರಾಣಿಕ್, ಈ ರೀತಿಯ ಸುತ್ತೋಲೆ ಹೊರಡಿಸಿದ್ದು ಸರಕಾರದ ಹಿಂದು ವಿರೋಧಿ ನಿಲುವಾಗಿದ್ದು, ಖಾಸಗಿ ದೇವಸ್ಥಾನಗಳ ವಾರ್ಷಿಕ ಲೆಕ್ಕಪತ್ರ, ಅಲ್ಲಿ ಏನೆಲ್ಲ ಸೊತ್ತುಗಳಿವೆ ಎಂಬ ಬಗ್ಗೆ ಲೆಕ್ಕ ಕೊಡಲು ಸೂಚಿಸಲಾಗಿದೆ. ಇದು ಹಿಂದು ದೇವಸ್ಥಾನಗಳಿಗೆ ಮಾತ್ರ ಸೀಮಿತ ಮಾಡಿದ್ದು ಯಾಕೆ ? ಇಂಥದ್ದೇ ನಿಲುವು ಕ್ರಿಸ್ತಿಯನ್ನರ ಚರ್ಚ್ ಮತ್ತು ಮುಸ್ಲಿಮರ ಮಸೀದಿಗಳಿಗೆ ಯಾಕೆ ಅನ್ವಯ ಮಾಡಿಲ್ಲ ಎಂದು ಪ್ರಶ್ನಿಸಿದರು.

ಕಳೆದ ಬಾರಿ ಕಾಂಗ್ರೆಸ್ ಸರಕಾರ ಇದ್ದಾಗ 2015ರ ಆಗಸ್ಟ್ ತಿಂಗಳಲ್ಲಿ ಈ ರೀತಿಯ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಹೊರಡಿಸಲಾಗಿತ್ತು. ಅದನ್ನು ಮಾರ್ಪಾಡುಗೊಳಿಸಿ ಈಗಿನ ಬಿಜೆಪಿ ಸರಕಾರ 2020ರ ನವೆಂಬರ್ ತಿಂಗಳಲ್ಲಿ ಜಾರಿ ಮಾಡಿದ್ದು, ಅನುಷ್ಠಾನಕ್ಕೆ ತರುತ್ತಿದೆ. ಖಾಸಗಿ ಹಿಂದು ದೇವಸ್ಥಾನಗಳಿಗೆ ಅಧಿಕಾರಿಗಳು ನೋಟೀಸ್ ನೀಡಿ, ಚರಾಸ್ತಿ, ಸ್ಥಿರಾಸ್ತಿ ಮತ್ತು ವಾರ್ಷಿಕ ಆದಾಯದ ಬಗ್ಗೆ ಮಾಹಿತಿ ನೀಡಲು ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ತಿಂಗಳಲ್ಲಿ ಲೆಕ್ಕಪತ್ರ ನೀಡದಿದ್ದರೆ ತಾವೇ ಬಂದು ಆ ಕೆಲಸವನ್ನು ಮಾಡಬೇಕಾಗುತ್ತದೆ ಎಂದು ಬೆದರಿಸುತ್ತಿದ್ದಾರೆ. ಮಾಹಿತಿ ನೀಡದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ. ಈ ರೀತಿಯ ಒತ್ತಡವನ್ನು ಚರ್ಚ್, ಮಸೀದಿಗಳಿಗೂ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದರು.
ಮುಜರಾಯಿ ಇಲಾಖೆಯ ದೇವಸ್ಥಾನಗಳಿಗಿಂತ ಹೆಚ್ಚು ಜನಸ್ನೇಹಿಯಾಗಿ ಸೇವಾ ಚಟುವಟಿಕೆಗಳನ್ನು ಖಾಸಗಿ ದೇವಸ್ಥಾನಗಳು ನಡೆಸಿಕೊಂಡು ಬಂದಿವೆ. ರಾಜ್ಯದಲ್ಲಿ ಈ ರೀತಿಯ ಸಾವಿರಾರು ದೇವಸ್ಥಾನಗಳಿದ್ದು, ಇಂಥ ನೋಟೀಸ್ ನೀಡಿ ಹಿಂದು ಶ್ರದ್ಧಾಕೇಂದ್ರಗಳನ್ನು ಸರಕಾರೀಕರಣಗೊಳಿಸಲು ಹುನ್ನಾರ ನಡೆಸುತ್ತಿದೆ. ಸರಕಾರಕ್ಕೆ ತೆಗೆದುಕೊಳ್ಳುವ ಪ್ರಯತ್ನದ ಮೊದಲ ಹೆಜ್ಜೆ. ತಕ್ಷಣದಿಂದಲೇ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ನಾವು ಯಾವುದೇ ಹೋರಾಟಕ್ಕೂ ಸಿದ್ಧವಾಗಿದ್ದೇವೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಇದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm