ಬ್ರೇಕಿಂಗ್ ನ್ಯೂಸ್
04-02-21 07:44 pm Mangaluru Correspondent ಕರಾವಳಿ
ಮಂಗಳೂರು, ಫೆ.4: ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳನ್ನು ಹೊರತುಪಡಿಸಿ ಉಳಿದ ಖಾಸಗಿ ಹಿಂದು ದೇವಸ್ಥಾನಗಳನ್ನು ಕಲಂ 53ರ ಅಡಿಯಲ್ಲಿ ನೋಂದಣಿ ಮಾಡಿಸಲು ಸರಕಾರ ಮುಂದಾಗಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಎಲ್ಲ ಖಾಸಗಿ ದೇವಸ್ಥಾನಗಳಿಗೆ ನೋಟೀಸ್ ಜಾರಿ ಮಾಡಲಾಗಿದ್ದು, ಇದನ್ನು ತಕ್ಷಣದಿಂದಲೇ ಹಿಂಪಡೆಯಬೇಕೆಂದು ವಿಶ್ವ ಹಿಂದು ಪರಿಷತ್ ಆಗ್ರಹಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ವಿಹಿಂಪ ಪ್ರಾಂತ ಸಂಚಾಲಕ ಎಂ.ಬಿ.ಪುರಾಣಿಕ್, ಈ ರೀತಿಯ ಸುತ್ತೋಲೆ ಹೊರಡಿಸಿದ್ದು ಸರಕಾರದ ಹಿಂದು ವಿರೋಧಿ ನಿಲುವಾಗಿದ್ದು, ಖಾಸಗಿ ದೇವಸ್ಥಾನಗಳ ವಾರ್ಷಿಕ ಲೆಕ್ಕಪತ್ರ, ಅಲ್ಲಿ ಏನೆಲ್ಲ ಸೊತ್ತುಗಳಿವೆ ಎಂಬ ಬಗ್ಗೆ ಲೆಕ್ಕ ಕೊಡಲು ಸೂಚಿಸಲಾಗಿದೆ. ಇದು ಹಿಂದು ದೇವಸ್ಥಾನಗಳಿಗೆ ಮಾತ್ರ ಸೀಮಿತ ಮಾಡಿದ್ದು ಯಾಕೆ ? ಇಂಥದ್ದೇ ನಿಲುವು ಕ್ರಿಸ್ತಿಯನ್ನರ ಚರ್ಚ್ ಮತ್ತು ಮುಸ್ಲಿಮರ ಮಸೀದಿಗಳಿಗೆ ಯಾಕೆ ಅನ್ವಯ ಮಾಡಿಲ್ಲ ಎಂದು ಪ್ರಶ್ನಿಸಿದರು.

ಕಳೆದ ಬಾರಿ ಕಾಂಗ್ರೆಸ್ ಸರಕಾರ ಇದ್ದಾಗ 2015ರ ಆಗಸ್ಟ್ ತಿಂಗಳಲ್ಲಿ ಈ ರೀತಿಯ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಹೊರಡಿಸಲಾಗಿತ್ತು. ಅದನ್ನು ಮಾರ್ಪಾಡುಗೊಳಿಸಿ ಈಗಿನ ಬಿಜೆಪಿ ಸರಕಾರ 2020ರ ನವೆಂಬರ್ ತಿಂಗಳಲ್ಲಿ ಜಾರಿ ಮಾಡಿದ್ದು, ಅನುಷ್ಠಾನಕ್ಕೆ ತರುತ್ತಿದೆ. ಖಾಸಗಿ ಹಿಂದು ದೇವಸ್ಥಾನಗಳಿಗೆ ಅಧಿಕಾರಿಗಳು ನೋಟೀಸ್ ನೀಡಿ, ಚರಾಸ್ತಿ, ಸ್ಥಿರಾಸ್ತಿ ಮತ್ತು ವಾರ್ಷಿಕ ಆದಾಯದ ಬಗ್ಗೆ ಮಾಹಿತಿ ನೀಡಲು ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ತಿಂಗಳಲ್ಲಿ ಲೆಕ್ಕಪತ್ರ ನೀಡದಿದ್ದರೆ ತಾವೇ ಬಂದು ಆ ಕೆಲಸವನ್ನು ಮಾಡಬೇಕಾಗುತ್ತದೆ ಎಂದು ಬೆದರಿಸುತ್ತಿದ್ದಾರೆ. ಮಾಹಿತಿ ನೀಡದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ. ಈ ರೀತಿಯ ಒತ್ತಡವನ್ನು ಚರ್ಚ್, ಮಸೀದಿಗಳಿಗೂ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದರು.
ಮುಜರಾಯಿ ಇಲಾಖೆಯ ದೇವಸ್ಥಾನಗಳಿಗಿಂತ ಹೆಚ್ಚು ಜನಸ್ನೇಹಿಯಾಗಿ ಸೇವಾ ಚಟುವಟಿಕೆಗಳನ್ನು ಖಾಸಗಿ ದೇವಸ್ಥಾನಗಳು ನಡೆಸಿಕೊಂಡು ಬಂದಿವೆ. ರಾಜ್ಯದಲ್ಲಿ ಈ ರೀತಿಯ ಸಾವಿರಾರು ದೇವಸ್ಥಾನಗಳಿದ್ದು, ಇಂಥ ನೋಟೀಸ್ ನೀಡಿ ಹಿಂದು ಶ್ರದ್ಧಾಕೇಂದ್ರಗಳನ್ನು ಸರಕಾರೀಕರಣಗೊಳಿಸಲು ಹುನ್ನಾರ ನಡೆಸುತ್ತಿದೆ. ಸರಕಾರಕ್ಕೆ ತೆಗೆದುಕೊಳ್ಳುವ ಪ್ರಯತ್ನದ ಮೊದಲ ಹೆಜ್ಜೆ. ತಕ್ಷಣದಿಂದಲೇ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ನಾವು ಯಾವುದೇ ಹೋರಾಟಕ್ಕೂ ಸಿದ್ಧವಾಗಿದ್ದೇವೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಇದ್ದರು.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm