ಬ್ರೇಕಿಂಗ್ ನ್ಯೂಸ್
            
                        05-02-21 08:29 pm Mangaluru Correspondent ಕರಾವಳಿ
            ಕೊಣಾಜೆ, ಫೆ.5: ಪೆಟ್ರೋಲ್, ಡಿಸೇಲ್, ಎಲ್ ಪಿಜಿ ವಿಪರೀತ ದರ ಏರಿಕೆ ಖಂಡಿಸಿ ಆಟೋ ರಾಜಕನ್ಮಾರ್ ಸಂಘಟನೆಯ ಆಶ್ರಯದಲ್ಲಿ ಶುಕ್ರವಾರ ದೇರಳಕಟ್ಟೆ ಜಂಕ್ಷನ್ ನಲ್ಲಿ ಅಟೋ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, ತೈಲ ಏರಿಕೆಯೆಂದರೆ ರಿಕ್ಷಾ ಚಾಲಕರಿಗೆ ಮಾತ್ರವಲ್ಲ ಪ್ರತಿಯೊಂದರ ಮೇಲೂ ದರ ಏರಿಕೆಯ ಬಿಸಿ ತಟ್ಟುತ್ತದೆ. ದುಡಿಯುತ್ತಿರುವ ಹಲವರ ಹಕ್ಕುಗಳನ್ನು ಕೇಂದ್ರ ಸರಕಾರ ಕಸಿದುಕೊಳ್ಳುತ್ತಿದೆ. ಬಡವರಿಂದ ಕಸಿದುಕೊಂಡು ಅಂಬಾನಿ, ಅದಾನಿಯಂತವರ ಜೇಬು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ತೈಲ ದರ ಏರಿಕೆಯ ವಿರುದ್ದ ಎಲ್ಲರೂ ಐಕ್ಯತೆಯೊಂದಿಗೆ ಹೋರಾಡೋಣ ಎಂದರು.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಶಕೀಲ್ ಮಾತನಾಡಿ ಕೇಂದ್ರ ಸರಕಾರದ ದರ ಏರಿಕೆ ನೀತಿಯನ್ನು ಖಂಡಿಸಿ ಎಲ್ಲರೂ ಪಕ್ಷಭೇದ ಮರೆತು ಕೆಂಪುಕೋಟೆಗೆ ಲಗ್ಗೆ ಹಾಕುವ ದಿನ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಟೋ ರಾಜಕನ್ಮಾರ್ ಸಂಘಟನೆಯ ಅಬ್ದುಲ್ ಜಲೀಲ್ ಪ್ರಾಸ್ತಾವಿಕ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಪಾತಾಳಕ್ಕೆ ಇಳಿದರೂ ಇಲ್ಲಿ ಮಾತ್ರ ಏರಿಕೆಯಾಗುತ್ತಲೇ ಇದೆ. ಶ್ರೀಮಂತರಿಂದ ಬೇಕಾದರೆ ಕಸಿದುಕೊಳ್ಳಿ. ಆದರೆ ಬಡ ಜನರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಬೇಡಿ. ಇವತ್ತು ನಾವು ದೇರಳಕಟ್ಟೆಯವರೆಗೆ ರಿಕ್ಷಾ ಚಲೋ ಮಾಡಿದ್ದೇವೆ. ಮುಂದೊಂದು ದಿನ ದೆಹಲಿಯ ಪ್ರಧಾನಿ ಕಚೇರಿಗೂ ರಿಕ್ಷಾ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘಟನೆಯ ಸೇಸಪ್ಪ ಬೆದ್ರಕಾಡು, ಸಿ.ಎಂ.ರವೂಫ್, ಅರುಣ್ ಕುಮಾರ್, ರಫೀಕ್ ಹರೇಕಳ, ಮೋನು ಟಿಸ್ಕೋ, ಇಸ್ಮತ್ ಪಜೀರ್, ಸತ್ತಾರ್ ಸಿ.ಎಂ, ನಾಗೇಶ್, ಚಂದ್ರಶೇಖರ್ , ನೌಷಾದ್, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
            
            
            Auto Drivers in Konaje, Mangalore staged a protest against the steep rise in petrol and diesel prices blaming the BJP-led Central government.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm