ಬ್ರೇಕಿಂಗ್ ನ್ಯೂಸ್
05-02-21 08:29 pm Mangaluru Correspondent ಕರಾವಳಿ
ಕೊಣಾಜೆ, ಫೆ.5: ಪೆಟ್ರೋಲ್, ಡಿಸೇಲ್, ಎಲ್ ಪಿಜಿ ವಿಪರೀತ ದರ ಏರಿಕೆ ಖಂಡಿಸಿ ಆಟೋ ರಾಜಕನ್ಮಾರ್ ಸಂಘಟನೆಯ ಆಶ್ರಯದಲ್ಲಿ ಶುಕ್ರವಾರ ದೇರಳಕಟ್ಟೆ ಜಂಕ್ಷನ್ ನಲ್ಲಿ ಅಟೋ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, ತೈಲ ಏರಿಕೆಯೆಂದರೆ ರಿಕ್ಷಾ ಚಾಲಕರಿಗೆ ಮಾತ್ರವಲ್ಲ ಪ್ರತಿಯೊಂದರ ಮೇಲೂ ದರ ಏರಿಕೆಯ ಬಿಸಿ ತಟ್ಟುತ್ತದೆ. ದುಡಿಯುತ್ತಿರುವ ಹಲವರ ಹಕ್ಕುಗಳನ್ನು ಕೇಂದ್ರ ಸರಕಾರ ಕಸಿದುಕೊಳ್ಳುತ್ತಿದೆ. ಬಡವರಿಂದ ಕಸಿದುಕೊಂಡು ಅಂಬಾನಿ, ಅದಾನಿಯಂತವರ ಜೇಬು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ತೈಲ ದರ ಏರಿಕೆಯ ವಿರುದ್ದ ಎಲ್ಲರೂ ಐಕ್ಯತೆಯೊಂದಿಗೆ ಹೋರಾಡೋಣ ಎಂದರು.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಶಕೀಲ್ ಮಾತನಾಡಿ ಕೇಂದ್ರ ಸರಕಾರದ ದರ ಏರಿಕೆ ನೀತಿಯನ್ನು ಖಂಡಿಸಿ ಎಲ್ಲರೂ ಪಕ್ಷಭೇದ ಮರೆತು ಕೆಂಪುಕೋಟೆಗೆ ಲಗ್ಗೆ ಹಾಕುವ ದಿನ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಟೋ ರಾಜಕನ್ಮಾರ್ ಸಂಘಟನೆಯ ಅಬ್ದುಲ್ ಜಲೀಲ್ ಪ್ರಾಸ್ತಾವಿಕ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಪಾತಾಳಕ್ಕೆ ಇಳಿದರೂ ಇಲ್ಲಿ ಮಾತ್ರ ಏರಿಕೆಯಾಗುತ್ತಲೇ ಇದೆ. ಶ್ರೀಮಂತರಿಂದ ಬೇಕಾದರೆ ಕಸಿದುಕೊಳ್ಳಿ. ಆದರೆ ಬಡ ಜನರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಬೇಡಿ. ಇವತ್ತು ನಾವು ದೇರಳಕಟ್ಟೆಯವರೆಗೆ ರಿಕ್ಷಾ ಚಲೋ ಮಾಡಿದ್ದೇವೆ. ಮುಂದೊಂದು ದಿನ ದೆಹಲಿಯ ಪ್ರಧಾನಿ ಕಚೇರಿಗೂ ರಿಕ್ಷಾ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘಟನೆಯ ಸೇಸಪ್ಪ ಬೆದ್ರಕಾಡು, ಸಿ.ಎಂ.ರವೂಫ್, ಅರುಣ್ ಕುಮಾರ್, ರಫೀಕ್ ಹರೇಕಳ, ಮೋನು ಟಿಸ್ಕೋ, ಇಸ್ಮತ್ ಪಜೀರ್, ಸತ್ತಾರ್ ಸಿ.ಎಂ, ನಾಗೇಶ್, ಚಂದ್ರಶೇಖರ್ , ನೌಷಾದ್, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Auto Drivers in Konaje, Mangalore staged a protest against the steep rise in petrol and diesel prices blaming the BJP-led Central government.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm