ಬ್ರೇಕಿಂಗ್ ನ್ಯೂಸ್
05-02-21 08:29 pm Mangaluru Correspondent ಕರಾವಳಿ
ಕೊಣಾಜೆ, ಫೆ.5: ಪೆಟ್ರೋಲ್, ಡಿಸೇಲ್, ಎಲ್ ಪಿಜಿ ವಿಪರೀತ ದರ ಏರಿಕೆ ಖಂಡಿಸಿ ಆಟೋ ರಾಜಕನ್ಮಾರ್ ಸಂಘಟನೆಯ ಆಶ್ರಯದಲ್ಲಿ ಶುಕ್ರವಾರ ದೇರಳಕಟ್ಟೆ ಜಂಕ್ಷನ್ ನಲ್ಲಿ ಅಟೋ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, ತೈಲ ಏರಿಕೆಯೆಂದರೆ ರಿಕ್ಷಾ ಚಾಲಕರಿಗೆ ಮಾತ್ರವಲ್ಲ ಪ್ರತಿಯೊಂದರ ಮೇಲೂ ದರ ಏರಿಕೆಯ ಬಿಸಿ ತಟ್ಟುತ್ತದೆ. ದುಡಿಯುತ್ತಿರುವ ಹಲವರ ಹಕ್ಕುಗಳನ್ನು ಕೇಂದ್ರ ಸರಕಾರ ಕಸಿದುಕೊಳ್ಳುತ್ತಿದೆ. ಬಡವರಿಂದ ಕಸಿದುಕೊಂಡು ಅಂಬಾನಿ, ಅದಾನಿಯಂತವರ ಜೇಬು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ತೈಲ ದರ ಏರಿಕೆಯ ವಿರುದ್ದ ಎಲ್ಲರೂ ಐಕ್ಯತೆಯೊಂದಿಗೆ ಹೋರಾಡೋಣ ಎಂದರು.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಶಕೀಲ್ ಮಾತನಾಡಿ ಕೇಂದ್ರ ಸರಕಾರದ ದರ ಏರಿಕೆ ನೀತಿಯನ್ನು ಖಂಡಿಸಿ ಎಲ್ಲರೂ ಪಕ್ಷಭೇದ ಮರೆತು ಕೆಂಪುಕೋಟೆಗೆ ಲಗ್ಗೆ ಹಾಕುವ ದಿನ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಟೋ ರಾಜಕನ್ಮಾರ್ ಸಂಘಟನೆಯ ಅಬ್ದುಲ್ ಜಲೀಲ್ ಪ್ರಾಸ್ತಾವಿಕ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಪಾತಾಳಕ್ಕೆ ಇಳಿದರೂ ಇಲ್ಲಿ ಮಾತ್ರ ಏರಿಕೆಯಾಗುತ್ತಲೇ ಇದೆ. ಶ್ರೀಮಂತರಿಂದ ಬೇಕಾದರೆ ಕಸಿದುಕೊಳ್ಳಿ. ಆದರೆ ಬಡ ಜನರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಬೇಡಿ. ಇವತ್ತು ನಾವು ದೇರಳಕಟ್ಟೆಯವರೆಗೆ ರಿಕ್ಷಾ ಚಲೋ ಮಾಡಿದ್ದೇವೆ. ಮುಂದೊಂದು ದಿನ ದೆಹಲಿಯ ಪ್ರಧಾನಿ ಕಚೇರಿಗೂ ರಿಕ್ಷಾ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘಟನೆಯ ಸೇಸಪ್ಪ ಬೆದ್ರಕಾಡು, ಸಿ.ಎಂ.ರವೂಫ್, ಅರುಣ್ ಕುಮಾರ್, ರಫೀಕ್ ಹರೇಕಳ, ಮೋನು ಟಿಸ್ಕೋ, ಇಸ್ಮತ್ ಪಜೀರ್, ಸತ್ತಾರ್ ಸಿ.ಎಂ, ನಾಗೇಶ್, ಚಂದ್ರಶೇಖರ್ , ನೌಷಾದ್, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Auto Drivers in Konaje, Mangalore staged a protest against the steep rise in petrol and diesel prices blaming the BJP-led Central government.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm