ಬ್ರೇಕಿಂಗ್ ನ್ಯೂಸ್
05-02-21 08:29 pm Mangaluru Correspondent ಕರಾವಳಿ
ಕೊಣಾಜೆ, ಫೆ.5: ಪೆಟ್ರೋಲ್, ಡಿಸೇಲ್, ಎಲ್ ಪಿಜಿ ವಿಪರೀತ ದರ ಏರಿಕೆ ಖಂಡಿಸಿ ಆಟೋ ರಾಜಕನ್ಮಾರ್ ಸಂಘಟನೆಯ ಆಶ್ರಯದಲ್ಲಿ ಶುಕ್ರವಾರ ದೇರಳಕಟ್ಟೆ ಜಂಕ್ಷನ್ ನಲ್ಲಿ ಅಟೋ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, ತೈಲ ಏರಿಕೆಯೆಂದರೆ ರಿಕ್ಷಾ ಚಾಲಕರಿಗೆ ಮಾತ್ರವಲ್ಲ ಪ್ರತಿಯೊಂದರ ಮೇಲೂ ದರ ಏರಿಕೆಯ ಬಿಸಿ ತಟ್ಟುತ್ತದೆ. ದುಡಿಯುತ್ತಿರುವ ಹಲವರ ಹಕ್ಕುಗಳನ್ನು ಕೇಂದ್ರ ಸರಕಾರ ಕಸಿದುಕೊಳ್ಳುತ್ತಿದೆ. ಬಡವರಿಂದ ಕಸಿದುಕೊಂಡು ಅಂಬಾನಿ, ಅದಾನಿಯಂತವರ ಜೇಬು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ತೈಲ ದರ ಏರಿಕೆಯ ವಿರುದ್ದ ಎಲ್ಲರೂ ಐಕ್ಯತೆಯೊಂದಿಗೆ ಹೋರಾಡೋಣ ಎಂದರು.
ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಶಕೀಲ್ ಮಾತನಾಡಿ ಕೇಂದ್ರ ಸರಕಾರದ ದರ ಏರಿಕೆ ನೀತಿಯನ್ನು ಖಂಡಿಸಿ ಎಲ್ಲರೂ ಪಕ್ಷಭೇದ ಮರೆತು ಕೆಂಪುಕೋಟೆಗೆ ಲಗ್ಗೆ ಹಾಕುವ ದಿನ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಟೋ ರಾಜಕನ್ಮಾರ್ ಸಂಘಟನೆಯ ಅಬ್ದುಲ್ ಜಲೀಲ್ ಪ್ರಾಸ್ತಾವಿಕ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಪಾತಾಳಕ್ಕೆ ಇಳಿದರೂ ಇಲ್ಲಿ ಮಾತ್ರ ಏರಿಕೆಯಾಗುತ್ತಲೇ ಇದೆ. ಶ್ರೀಮಂತರಿಂದ ಬೇಕಾದರೆ ಕಸಿದುಕೊಳ್ಳಿ. ಆದರೆ ಬಡ ಜನರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಬೇಡಿ. ಇವತ್ತು ನಾವು ದೇರಳಕಟ್ಟೆಯವರೆಗೆ ರಿಕ್ಷಾ ಚಲೋ ಮಾಡಿದ್ದೇವೆ. ಮುಂದೊಂದು ದಿನ ದೆಹಲಿಯ ಪ್ರಧಾನಿ ಕಚೇರಿಗೂ ರಿಕ್ಷಾ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘಟನೆಯ ಸೇಸಪ್ಪ ಬೆದ್ರಕಾಡು, ಸಿ.ಎಂ.ರವೂಫ್, ಅರುಣ್ ಕುಮಾರ್, ರಫೀಕ್ ಹರೇಕಳ, ಮೋನು ಟಿಸ್ಕೋ, ಇಸ್ಮತ್ ಪಜೀರ್, ಸತ್ತಾರ್ ಸಿ.ಎಂ, ನಾಗೇಶ್, ಚಂದ್ರಶೇಖರ್ , ನೌಷಾದ್, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Auto Drivers in Konaje, Mangalore staged a protest against the steep rise in petrol and diesel prices blaming the BJP-led Central government.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
22-05-25 05:53 pm
HK News Desk
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
22-05-25 10:29 pm
Mangalore Correspondent
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
Kishor Kumar Puttur; ಸರ್ಕಾರಿ ಆಸ್ಪತ್ರೆ ಬಳಿಯ ಜನ...
21-05-25 11:09 pm
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
23-05-25 01:25 pm
HK News Desk
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm