ಬ್ರೇಕಿಂಗ್ ನ್ಯೂಸ್
05-02-21 08:51 pm Mangaluru Correspondent ಕರಾವಳಿ
ಮಂಗಳೂರು, ಫೆ.5: ಪೆಟ್ರೋಲ್, ಡೀಸೆಲ್ ಬೆಲೆ ವಿಪರೀತ ಏರಿಕೆ ಆಗಿರುವುದನ್ನು ವಿರೋಧಿಸಿ ಮಂಗಳೂರಿನಲ್ಲಿ ಡಿವೈಎಫ್ಐ ವತಿಯಿಂದ ಸ್ಕೂಟರನ್ನು ತಳ್ಳುಗಾಡಿಯಿಂದ ಎಳೆದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಎ.ಬಿ.ಶೆಟ್ಟಿ ಸರ್ಕಲ್ ಬಳಿಯಿಂದ ಕ್ಲಾಕ್ ಟವರ್ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ಪ್ರತಿಭಟನೆಯಲ್ಲಿ ಮಾತನಾಡಿದ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಬಿಜೆಪಿಯವರು 2013ರಲ್ಲಿ ಪೆಟ್ರೋಲ್ ದರ 80 ರೂ. ಆಗಿದ್ದಾಗ ಭಾರತ್ ಬಂದ್ ನಡೆಸಿದ್ದರು. ತಾವು ಅಧಿಕಾರಕ್ಕೆ ಬಂದಲ್ಲಿ ಪೆಟ್ರೋಲಿಗೆ 50 ರೂ. ಮಾಡ್ತೇವೆ ಎಂದಿದ್ದರು. ಈಗ ಅಧಿಕಾರಕ್ಕೆ ಬಂದು ಆರು ವರ್ಷ ಕಳೆದಿದೆ. ಯಾಕೆ ಪೆಟ್ರೋಲ್ ದರ ಇಳಿಸಿಲ್ಲ ಎಂದು ಪ್ರಶ್ನೆ ಮಾಡಿದರು.


ಈಗಂತೂ ವಿಪರೀತವಾಗಿ ದರ ಏರಿಕೆ ಮಾಡಿದ್ದಾರೆ. ಜೊತೆಗೆ ಡೀಸೆಲ್, ಎಲ್ಪಿಜಿ ದರವನ್ನೂ ಏರಿಸಿ ಜನಸಾಮಾನ್ಯರ ಮೇಲೆ ಬರೆ ಹಾಕಿದ್ದಾರೆ. ಇವರಿಗೆ ಅಂಬಾನಿ, ಅದಾನಿಯಂತಹ ಕಂಪನಿ ಧಣಿಗಳು ಅಷ್ಟೇ ಮುಖ್ಯವಾಗಿದ್ದಾರೆ. ಕಂಪನಿಗಳ ಸಾಲಮನ್ನಾ ಮಾಡುತ್ತಾರೆ. ಕಳೆದ ಬಾರಿ 1.90 ಲಕ್ಷ ಕೋಟಿ ಸಾಲಮನ್ನಾ ಮಾಡಿದ್ದಾರೆ. ಇವರಿಗೆ ಸಾಮಾನ್ಯ ಜನರ ಮೇಲೆ ಕಾಳಜಿಯೇ ಇಲ್ಲ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತೈಲ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ವಿಪರೀತ ಇಳಿಕೆಯಾಗಿತ್ತು. ಆದರೆ, ಜನರಿಗೆ ಅದರ ಲಾಭ ಸಿಕ್ಕಿಲ್ಲ. ಈಗಲೂ 45 ಡಾಲರಿಗೆ ತೈಲ ಬ್ಯಾರೆಲ್ ಸಿಗುತ್ತಿದೆ. ಇವರು ಇತಿಹಾಸದಲ್ಲೇ ಅತಿ ಹೆಚ್ಚು ದರ ಪೀಕಿಸುತ್ತಿದ್ದಾರೆ ಎಂದು ಸಂತೋಷ್ ಹೇಳಿದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ದ.ಕ ಜಿಲ್ಲಾದ್ಯಕ್ಷ ಬಿ.ಕೆ ಇಮ್ತಿಯಾಜ್ , ಜೆಎಮ್ಎಸ್ ಜಿಲ್ಲಾ ಮುಖಂಡರಾದ ಜಯಂತಿ ಬಿ ಶೆಟ್ಟಿ, ಭಾರತಿ ಬೋಳಾರ್, ಅಸುಂತ ಡಿಸೋಜಾ, ಪ್ರಮಿಳಾ ದೇವಾಡಿಗ, ಡಿವೈಎಫ್ಐ ನಗರ ಸಮಿತಿ ಮುಖಂಡರಾದ ಎ.ಬಿ ನೌಶದ್ , ರಫೀಕ್ ಪಿ.ಜಿ, ದೀಪಕ್ ಬಜಾಲ್, ಚರಣ್ ಶೆಟ್ಟಿ ಪಂಜಿಮೊಗರು, ಹನೀಫ್ ಮುಂತಾದವರು ಉಪಸ್ಥಿತರಿದ್ದರು.
Activists today staged a protest against the steep rise in petrol and diesel prices near in Mangalore city by carrying their two-wheelers in procession, blaming the BJP-led Centre for the same.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm