ಬ್ರೇಕಿಂಗ್ ನ್ಯೂಸ್
06-02-21 01:24 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಛಲವಾದಿ ಆಯ್ಕೆಯಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಮಂಗಳಮುಖಿ ಒಬ್ಬರಿಗೆ ರಾಜಕೀಯ ಪಕ್ಷದಲ್ಲಿ ಪದಾಧಿಕಾರಿ ಸ್ಥಾನ ದೊರಕಿದೆ.
ಮಂಗಳೂರಿನಲ್ಲಿ ಬ್ಯೂಟಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪರಿವರ್ತನ್ ಟ್ರಾನ್ಸ್ ಕ್ವೀನ್-2018 ಸಂಜನಾ ಚಲವಾದಿಯವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನಡೆಸಿರುವ ಯುವ ಕಾಂಗ್ರೆಸ್ ಮಂಗಳೂರು ದಕ್ಷಿಣ ಬ್ಲಾಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಮಹಿಳಾ ವಿಭಾಗದಿಂದ ಸ್ಪರ್ಧಿಸಿದ್ದರು. ಜನವರಿ 10, 11 ಮತ್ತು 12 ರಂದು ಆನ್ಲೈನ್ ಮೂಲಕ ಮತದಾನ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್, ದೀಕ್ಷಿತ್ ಪೂಜಾರಿ ಮತ್ತು ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಜನಾ ಛಲವಾದಿ, ಯೂತ್ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ. ಮಂಗಳಮುಖಿಯರೆಂದರೆ ಬೇಡಿ ಬದುಕುವವರು, ಲೈಂಗಿಕ ಕಾರ್ಯಕರ್ತರು ಎಂಬ ಭಾವನೆಯಿದೆ. ಅವರಿಗೆ ಯಾವ ಸ್ಥಾನಮಾನವೂ ಸಿಗುತ್ತಿಲ್ಲ ಎಂಬ ಬೇಸರ ಕಾಡುತ್ತಲೇ ಇತ್ತು. ನಾನು ಇದನ್ನೆಲ್ಲಾ ದಾಟಿ ಮುಂದೆ ಬರುತ್ತೇನೆಂಬ ಛಲದಿಂದ ಹೋರಾಟ ನಡೆಸಿದ್ದರ ಫಲವಾಗಿ ರಾಜಕೀಯದಲ್ಲಿ ಸ್ಥಾನ ದೊರಕಿದೆ. ನನ್ನ ಊರಲ್ಲಿ ದೊರಕದ ಗೌರವವನ್ನು ನನಗೆ ಮಂಗಳೂರಿಗರು ನೀಡಿದ್ದಾರೆ. ಇದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಸಂಜನಾ ಸಂತಸ ವ್ಯಕ್ತಪಡಿಸಿದ್ದಾರೆ.
ನನ್ನನ್ನು ಸೇರಿಸಿ ಮಂಗಳಮುಖಿಯರಿಗೆ ಉದ್ಯೋಗ ಹಾಗೂ ವಸತಿಯ ಅಭದ್ರತೆ ಕಾಡುತ್ತಿದ್ದು, ಸಮಾಜದಲ್ಲಿ ಎಲ್ಲರಂತೆ ಮಂಗಳಮುಖಿಯರಿಗೂ ಸಮಾನ ಅವಕಾಶ, ಸ್ಥಾನಮಾನ ದೊರೆಯುವಂತೆ ಹೋರಾಟ ಮಾಡುತ್ತೇನೆ ಎಂದು ಹೇಳಿದರು.
Congress gives position of Block Congress Secretary to Sanjana a Transgender which is first in Dakshina Kannada.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm