ಬ್ರೇಕಿಂಗ್ ನ್ಯೂಸ್
06-02-21 01:24 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಛಲವಾದಿ ಆಯ್ಕೆಯಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಮಂಗಳಮುಖಿ ಒಬ್ಬರಿಗೆ ರಾಜಕೀಯ ಪಕ್ಷದಲ್ಲಿ ಪದಾಧಿಕಾರಿ ಸ್ಥಾನ ದೊರಕಿದೆ.
ಮಂಗಳೂರಿನಲ್ಲಿ ಬ್ಯೂಟಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪರಿವರ್ತನ್ ಟ್ರಾನ್ಸ್ ಕ್ವೀನ್-2018 ಸಂಜನಾ ಚಲವಾದಿಯವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನಡೆಸಿರುವ ಯುವ ಕಾಂಗ್ರೆಸ್ ಮಂಗಳೂರು ದಕ್ಷಿಣ ಬ್ಲಾಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಮಹಿಳಾ ವಿಭಾಗದಿಂದ ಸ್ಪರ್ಧಿಸಿದ್ದರು. ಜನವರಿ 10, 11 ಮತ್ತು 12 ರಂದು ಆನ್ಲೈನ್ ಮೂಲಕ ಮತದಾನ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್, ದೀಕ್ಷಿತ್ ಪೂಜಾರಿ ಮತ್ತು ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಜನಾ ಛಲವಾದಿ, ಯೂತ್ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ. ಮಂಗಳಮುಖಿಯರೆಂದರೆ ಬೇಡಿ ಬದುಕುವವರು, ಲೈಂಗಿಕ ಕಾರ್ಯಕರ್ತರು ಎಂಬ ಭಾವನೆಯಿದೆ. ಅವರಿಗೆ ಯಾವ ಸ್ಥಾನಮಾನವೂ ಸಿಗುತ್ತಿಲ್ಲ ಎಂಬ ಬೇಸರ ಕಾಡುತ್ತಲೇ ಇತ್ತು. ನಾನು ಇದನ್ನೆಲ್ಲಾ ದಾಟಿ ಮುಂದೆ ಬರುತ್ತೇನೆಂಬ ಛಲದಿಂದ ಹೋರಾಟ ನಡೆಸಿದ್ದರ ಫಲವಾಗಿ ರಾಜಕೀಯದಲ್ಲಿ ಸ್ಥಾನ ದೊರಕಿದೆ. ನನ್ನ ಊರಲ್ಲಿ ದೊರಕದ ಗೌರವವನ್ನು ನನಗೆ ಮಂಗಳೂರಿಗರು ನೀಡಿದ್ದಾರೆ. ಇದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಸಂಜನಾ ಸಂತಸ ವ್ಯಕ್ತಪಡಿಸಿದ್ದಾರೆ.
ನನ್ನನ್ನು ಸೇರಿಸಿ ಮಂಗಳಮುಖಿಯರಿಗೆ ಉದ್ಯೋಗ ಹಾಗೂ ವಸತಿಯ ಅಭದ್ರತೆ ಕಾಡುತ್ತಿದ್ದು, ಸಮಾಜದಲ್ಲಿ ಎಲ್ಲರಂತೆ ಮಂಗಳಮುಖಿಯರಿಗೂ ಸಮಾನ ಅವಕಾಶ, ಸ್ಥಾನಮಾನ ದೊರೆಯುವಂತೆ ಹೋರಾಟ ಮಾಡುತ್ತೇನೆ ಎಂದು ಹೇಳಿದರು.
Congress gives position of Block Congress Secretary to Sanjana a Transgender which is first in Dakshina Kannada.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm