ಬ್ರೇಕಿಂಗ್ ನ್ಯೂಸ್
06-02-21 01:24 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಛಲವಾದಿ ಆಯ್ಕೆಯಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಮಂಗಳಮುಖಿ ಒಬ್ಬರಿಗೆ ರಾಜಕೀಯ ಪಕ್ಷದಲ್ಲಿ ಪದಾಧಿಕಾರಿ ಸ್ಥಾನ ದೊರಕಿದೆ.
ಮಂಗಳೂರಿನಲ್ಲಿ ಬ್ಯೂಟಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪರಿವರ್ತನ್ ಟ್ರಾನ್ಸ್ ಕ್ವೀನ್-2018 ಸಂಜನಾ ಚಲವಾದಿಯವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನಡೆಸಿರುವ ಯುವ ಕಾಂಗ್ರೆಸ್ ಮಂಗಳೂರು ದಕ್ಷಿಣ ಬ್ಲಾಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಮಹಿಳಾ ವಿಭಾಗದಿಂದ ಸ್ಪರ್ಧಿಸಿದ್ದರು. ಜನವರಿ 10, 11 ಮತ್ತು 12 ರಂದು ಆನ್ಲೈನ್ ಮೂಲಕ ಮತದಾನ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್, ದೀಕ್ಷಿತ್ ಪೂಜಾರಿ ಮತ್ತು ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಜನಾ ಛಲವಾದಿ, ಯೂತ್ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ. ಮಂಗಳಮುಖಿಯರೆಂದರೆ ಬೇಡಿ ಬದುಕುವವರು, ಲೈಂಗಿಕ ಕಾರ್ಯಕರ್ತರು ಎಂಬ ಭಾವನೆಯಿದೆ. ಅವರಿಗೆ ಯಾವ ಸ್ಥಾನಮಾನವೂ ಸಿಗುತ್ತಿಲ್ಲ ಎಂಬ ಬೇಸರ ಕಾಡುತ್ತಲೇ ಇತ್ತು. ನಾನು ಇದನ್ನೆಲ್ಲಾ ದಾಟಿ ಮುಂದೆ ಬರುತ್ತೇನೆಂಬ ಛಲದಿಂದ ಹೋರಾಟ ನಡೆಸಿದ್ದರ ಫಲವಾಗಿ ರಾಜಕೀಯದಲ್ಲಿ ಸ್ಥಾನ ದೊರಕಿದೆ. ನನ್ನ ಊರಲ್ಲಿ ದೊರಕದ ಗೌರವವನ್ನು ನನಗೆ ಮಂಗಳೂರಿಗರು ನೀಡಿದ್ದಾರೆ. ಇದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಸಂಜನಾ ಸಂತಸ ವ್ಯಕ್ತಪಡಿಸಿದ್ದಾರೆ.
ನನ್ನನ್ನು ಸೇರಿಸಿ ಮಂಗಳಮುಖಿಯರಿಗೆ ಉದ್ಯೋಗ ಹಾಗೂ ವಸತಿಯ ಅಭದ್ರತೆ ಕಾಡುತ್ತಿದ್ದು, ಸಮಾಜದಲ್ಲಿ ಎಲ್ಲರಂತೆ ಮಂಗಳಮುಖಿಯರಿಗೂ ಸಮಾನ ಅವಕಾಶ, ಸ್ಥಾನಮಾನ ದೊರೆಯುವಂತೆ ಹೋರಾಟ ಮಾಡುತ್ತೇನೆ ಎಂದು ಹೇಳಿದರು.
Congress gives position of Block Congress Secretary to Sanjana a Transgender which is first in Dakshina Kannada.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am