ಬ್ರೇಕಿಂಗ್ ನ್ಯೂಸ್
06-02-21 01:24 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಛಲವಾದಿ ಆಯ್ಕೆಯಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಮಂಗಳಮುಖಿ ಒಬ್ಬರಿಗೆ ರಾಜಕೀಯ ಪಕ್ಷದಲ್ಲಿ ಪದಾಧಿಕಾರಿ ಸ್ಥಾನ ದೊರಕಿದೆ.
ಮಂಗಳೂರಿನಲ್ಲಿ ಬ್ಯೂಟಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪರಿವರ್ತನ್ ಟ್ರಾನ್ಸ್ ಕ್ವೀನ್-2018 ಸಂಜನಾ ಚಲವಾದಿಯವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನಡೆಸಿರುವ ಯುವ ಕಾಂಗ್ರೆಸ್ ಮಂಗಳೂರು ದಕ್ಷಿಣ ಬ್ಲಾಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಮಹಿಳಾ ವಿಭಾಗದಿಂದ ಸ್ಪರ್ಧಿಸಿದ್ದರು. ಜನವರಿ 10, 11 ಮತ್ತು 12 ರಂದು ಆನ್ಲೈನ್ ಮೂಲಕ ಮತದಾನ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್, ದೀಕ್ಷಿತ್ ಪೂಜಾರಿ ಮತ್ತು ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಜನಾ ಛಲವಾದಿ, ಯೂತ್ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ. ಮಂಗಳಮುಖಿಯರೆಂದರೆ ಬೇಡಿ ಬದುಕುವವರು, ಲೈಂಗಿಕ ಕಾರ್ಯಕರ್ತರು ಎಂಬ ಭಾವನೆಯಿದೆ. ಅವರಿಗೆ ಯಾವ ಸ್ಥಾನಮಾನವೂ ಸಿಗುತ್ತಿಲ್ಲ ಎಂಬ ಬೇಸರ ಕಾಡುತ್ತಲೇ ಇತ್ತು. ನಾನು ಇದನ್ನೆಲ್ಲಾ ದಾಟಿ ಮುಂದೆ ಬರುತ್ತೇನೆಂಬ ಛಲದಿಂದ ಹೋರಾಟ ನಡೆಸಿದ್ದರ ಫಲವಾಗಿ ರಾಜಕೀಯದಲ್ಲಿ ಸ್ಥಾನ ದೊರಕಿದೆ. ನನ್ನ ಊರಲ್ಲಿ ದೊರಕದ ಗೌರವವನ್ನು ನನಗೆ ಮಂಗಳೂರಿಗರು ನೀಡಿದ್ದಾರೆ. ಇದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಸಂಜನಾ ಸಂತಸ ವ್ಯಕ್ತಪಡಿಸಿದ್ದಾರೆ.
ನನ್ನನ್ನು ಸೇರಿಸಿ ಮಂಗಳಮುಖಿಯರಿಗೆ ಉದ್ಯೋಗ ಹಾಗೂ ವಸತಿಯ ಅಭದ್ರತೆ ಕಾಡುತ್ತಿದ್ದು, ಸಮಾಜದಲ್ಲಿ ಎಲ್ಲರಂತೆ ಮಂಗಳಮುಖಿಯರಿಗೂ ಸಮಾನ ಅವಕಾಶ, ಸ್ಥಾನಮಾನ ದೊರೆಯುವಂತೆ ಹೋರಾಟ ಮಾಡುತ್ತೇನೆ ಎಂದು ಹೇಳಿದರು.
Congress gives position of Block Congress Secretary to Sanjana a Transgender which is first in Dakshina Kannada.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm