ಬ್ರೇಕಿಂಗ್ ನ್ಯೂಸ್
            
                        06-02-21 01:24 pm Mangalore Correspondent ಕರಾವಳಿ
            ಮಂಗಳೂರು, ಫೆ.6 : ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಛಲವಾದಿ ಆಯ್ಕೆಯಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಮಂಗಳಮುಖಿ ಒಬ್ಬರಿಗೆ ರಾಜಕೀಯ ಪಕ್ಷದಲ್ಲಿ ಪದಾಧಿಕಾರಿ ಸ್ಥಾನ ದೊರಕಿದೆ.
ಮಂಗಳೂರಿನಲ್ಲಿ ಬ್ಯೂಟಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪರಿವರ್ತನ್ ಟ್ರಾನ್ಸ್ ಕ್ವೀನ್-2018 ಸಂಜನಾ ಚಲವಾದಿಯವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನಡೆಸಿರುವ ಯುವ ಕಾಂಗ್ರೆಸ್ ಮಂಗಳೂರು ದಕ್ಷಿಣ ಬ್ಲಾಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಮಹಿಳಾ ವಿಭಾಗದಿಂದ ಸ್ಪರ್ಧಿಸಿದ್ದರು. ಜನವರಿ 10, 11 ಮತ್ತು 12 ರಂದು ಆನ್ಲೈನ್ ಮೂಲಕ ಮತದಾನ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್, ದೀಕ್ಷಿತ್ ಪೂಜಾರಿ ಮತ್ತು ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಜನಾ ಛಲವಾದಿ, ಯೂತ್ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ. ಮಂಗಳಮುಖಿಯರೆಂದರೆ ಬೇಡಿ ಬದುಕುವವರು, ಲೈಂಗಿಕ ಕಾರ್ಯಕರ್ತರು ಎಂಬ ಭಾವನೆಯಿದೆ. ಅವರಿಗೆ ಯಾವ ಸ್ಥಾನಮಾನವೂ ಸಿಗುತ್ತಿಲ್ಲ ಎಂಬ ಬೇಸರ ಕಾಡುತ್ತಲೇ ಇತ್ತು. ನಾನು ಇದನ್ನೆಲ್ಲಾ ದಾಟಿ ಮುಂದೆ ಬರುತ್ತೇನೆಂಬ ಛಲದಿಂದ ಹೋರಾಟ ನಡೆಸಿದ್ದರ ಫಲವಾಗಿ ರಾಜಕೀಯದಲ್ಲಿ ಸ್ಥಾನ ದೊರಕಿದೆ. ನನ್ನ ಊರಲ್ಲಿ ದೊರಕದ ಗೌರವವನ್ನು ನನಗೆ ಮಂಗಳೂರಿಗರು ನೀಡಿದ್ದಾರೆ. ಇದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಸಂಜನಾ ಸಂತಸ ವ್ಯಕ್ತಪಡಿಸಿದ್ದಾರೆ.
ನನ್ನನ್ನು ಸೇರಿಸಿ ಮಂಗಳಮುಖಿಯರಿಗೆ ಉದ್ಯೋಗ ಹಾಗೂ ವಸತಿಯ ಅಭದ್ರತೆ ಕಾಡುತ್ತಿದ್ದು, ಸಮಾಜದಲ್ಲಿ ಎಲ್ಲರಂತೆ ಮಂಗಳಮುಖಿಯರಿಗೂ ಸಮಾನ ಅವಕಾಶ, ಸ್ಥಾನಮಾನ ದೊರೆಯುವಂತೆ ಹೋರಾಟ ಮಾಡುತ್ತೇನೆ ಎಂದು ಹೇಳಿದರು.
            
            
            Congress gives position of Block Congress Secretary to Sanjana a Transgender which is first in Dakshina Kannada.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm