ಬ್ರೇಕಿಂಗ್ ನ್ಯೂಸ್
06-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ. 6: ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಬಿಲ್ಲವರು ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು ಅಧಿಕಾರಿ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿದೆ. ಮೂಡುಬಿದ್ರಿಯ ಬಿಲ್ಲವ ಮುಖಂಡರು ಜಗದೀಶ ಅಧಿಕಾರಿ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಬಗ್ಗೆ ಅವಹೇಳನ ಆಗುವ ರೀತಿ ಮಾತನಾಡಿದ್ದರು. ಪಟ್ಟ ಆದವರ ಕಾಲು ಹಿಡಿಯುತ್ತೇನೆ, ಜನಾರ್ದನ ಪೂಜಾರಿ ಅವರ ಕಾಲು ಹಿಡಿಯುವುದಿಲ್ಲ ಎನ್ನುವ ಮೂಲಕ ಜಗದೀಶ್ ಅಧಿಕಾರಿ ಬಿಲ್ಲವರು ಮತ್ತು ಕಾಂಗ್ರೆಸ್ ಪ್ರಮುಖರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತು ಸ್ಪಷ್ಟನೆ ಕೇಳಲು ಬಿಲ್ಲವ ಸಮುದಾಯ ಮುಖಂಡರೊಬ್ಬರು ಜಗದೀಶ ಅಧಿಕಾರಿಗೆ ಕರೆ ಮಾಡಿದ್ದರು.

ಮಾತುಕತೆ ಬಳಿಕ ಕರೆ ಕಟ್ ಮಾಡದೆ, ತನ್ನ ಒಟ್ಟಿಗೆ ಇದ್ದವರ ಜೊತೆ ಜಗದೀಶ್ ಅಧಿಕಾರಿ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಫೋನ್ನಲ್ಲಿ ರೆಕಾರ್ಡ್ ಆಗಿದ್ದು ಅದೀಗ ವೈರಲ್ ಆಗಿದೆ. ಬಿಲ್ಲವರನ್ನು ಯಾವತ್ತೂ ನಂಬುವಂತಿಲ್ಲ. ಅವರಿಗಿಂತ ಬ್ಯಾರಿಗಳನ್ನು ನಂಬಬಹುದು. ಕೋಟಿ ಚೆನ್ನಯರು ಕೂಡ ಪೆರ್ಮಲೆ ಬಲ್ಲಾಳರಿಗೆ ಅನ್ಯಾಯ ಮಾಡಿದರು. ಮತ್ತೊಂದು ರಾಜನಲ್ಲಿಗೆ ಹೋಗಿ ಅಲ್ಲಿಯ ಮಂತ್ರಿಯನ್ನು ಕೊಂದರು. ಇನ್ನೊಂದು ಕಡೆ ಹೋಗಿ ಅಲ್ಲಿಯ ರಾಜನನ್ನೇ ಸೋಲಿಸಿದರು.
ಕೊನೆಗೆ ಆಸುಪಾಸಿನ ಎಲ್ಲ ರಾಜರು ಸೇರಿ ಕೋಟಿ ಚೆನ್ನಯರನ್ನು ಕೊಲ್ಲುತ್ತಾರೆ. ಆಗಲೂ ಕೋಟಿ ಚೆನ್ನಯರು ಒಳ್ಳೆದು ಮಾಡಿಲ್ಲ. ಅವರ ಸಂತಾನದವರೂ ಅಷ್ಟೇ. ಜನಾರ್ದನ ಪೂಜಾರಿಯ ಕಾಲಿಗೆ ಬೀಳುವುದು ಯಾಕೆ ? ನಂಗೇನು ಅಂಥ ಗತಿ ಬಂದಿದೆ ಎಂದು ಬಿಲ್ಲವರ ಬಗ್ಗೆ ಮೂದಲಿಸಿ ಮಾತನಾಡಿದ್ದ ಆಡಿಯೋ ಈಗ ವೈರಲ್ ಆಗಿದ್ದು ಬಿಲ್ಲವ ಸಮುದಾಯದ ಮುಖಂಡರು ಬಿಜೆಪಿ ಮುಖಂಡನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Leaders of different units of Moodbidri Billawa Sangha, on Friday, February 5, filed a complaint at Moodbidri police station against BJP leader Jagadish Adhikari.
26-03-26 12:31 pm
HK News Staffer
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
26-03-26 09:28 am
HK News Staffer
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am