ಬ್ರೇಕಿಂಗ್ ನ್ಯೂಸ್
06-02-21 04:55 pm Mangalore Correspondent ಕರಾವಳಿ
ಮಂಗಳೂರು, ಫೆ.6: ಭಾರತ ಹಿಂದು ರಾಷ್ಟ್ರವೆಂದು ಘೋಷಣೆಯಾಗಬೇಕು ಅನ್ನೋದು ನಮ್ಮ ಹಳೆಯ ಬೇಡಿಕೆ. ಈಗ ಹೊಸತಾಗಿ ನಿರ್ಮಾಣಗೊಳ್ಳುತ್ತಿರುವ ಪ್ರಜಾಪ್ರಭುತ್ವದ ದೇಗುಲವಾಗಿರುವ ಸಂಸತ್ ಭವನಕ್ಕೆ ಹಿಂದು ರಾಷ್ಟ್ರ ಭವನ ಎಂದು ಹೆಸರಿಡಬೇಕೆಂದು ಅಖಿಲ ಭಾರತ ಹಿಂದು ಮಹಾಸಭಾ ಆಗ್ರಹಿಸಿದೆ.
ಮಂಗಳೂರಿನ ಆರ್ಯ ಸಮಾಜದಲ್ಲಿ ಸುದ್ದಿಗೋಷ್ಠಿ ನಡೆಸಿದ ಅಖಿಲ ಭಾರತ ಹಿಂದು ಮಹಾಸಭಾ ದಕ್ಷಿಣ ಭಾರತ ವಲಯ ಕಾರ್ಯದರ್ಶಿ ಶ್ರೀ ಸ್ವಾಮಿ ದತ್ತಾತ್ರೇಯ ಸ್ವಾಮಿ ಸ್ವರೂಪನಾಥ, ಹಿಂದು ರಾಷ್ಟ್ರ ಭವನ ಎಂದು ಹೆಸರಿಡಲು ಒತ್ತಾಯಿಸಿ ಈಗಾಗ್ಲೇ ಸಹಿ ಸಂಗ್ರಹ ಆರಂಭಿಸಲಾಗಿದೆ. ಫೆ.7ರಂದು ಚಿಕ್ಕಮಗಳೂರಿನಲ್ಲಿ ರಾಜ್ಯದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಹಿಂದು ವಿರೋಧಿ ಹೇಳಿಕೆ ನೀಡುತ್ತಿದ್ದ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣದಲ್ಲಿ ವಕೀಲೆ ಮೀರಾ ರಾಘವೇಂದ್ರ ಅವರನ್ನು ಅಭಿನಂದಿಸುವುದಾಗಿ ಹೇಳಿದ ಅವರು, ಈ ಬಗ್ಗೆ ಬೆಂಗಳೂರಿನ ಹಲಸೂರು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಕೂಡಲೇ ಹಿಂಪಡೆಯಬೇಕು. ಇದು ಹಿಂದುತ್ವಕ್ಕಾಗಿ ನಡೆದ ಹೋರಾಟ. ಅಂಥ ಕೇಸನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆಯಬೇಕು ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷನಾಗಿರುವ ಜಗದೀಶ ಅಧಿಕಾರಿ ಬಿಲ್ಲವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇವೆ. ಕೋಟಿ ಚೆನ್ನಯರು ಮತ್ತು ಬಿಲ್ಲವ ಸಮುದಾಯಕ್ಕೆ ಅವಹೇಳನ ಮಾಡಿದ ಅಧಿಕಾರಿಯನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಬಿಲ್ಲವ ಸಮುದಾಯ ಹಿಂದುತ್ವಕ್ಕಾಗಿ ಅಗಾಧ ಕೊಡುಗೆ ನೀಡಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಿಂದು ಮಹಾಸಭಾ ಸಮಿತಿಯ ರಾಜ್ಯಾಧ್ಯಕ್ಷ ಡಾ.ಎಲ್. ಕೆ. ಸುವರ್ಣ, ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ, ಕಾರ್ಯದರ್ಶಿ ನವೀನ್ ಕುಮಾರ್ ಸುರತ್ಕಲ್, ದ.ಕ. ಜಿಲ್ಲಾಧ್ಯಕ್ಷ ಲೋಕೇಶ್ ಉಳ್ಳಾಲ, ದ.ಕ ಜಿಲ್ಲಾ ಶ್ರಮಿಕ ಸಭಾ ಕಾರ್ಯದರ್ಶಿ ಪ್ರಕಾಶ್ ಭಟ್ ಉಪಸ್ಥಿತರಿದ್ದರು.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm