ಬ್ರೇಕಿಂಗ್ ನ್ಯೂಸ್
06-02-21 04:55 pm Mangalore Correspondent ಕರಾವಳಿ
ಮಂಗಳೂರು, ಫೆ.6: ಭಾರತ ಹಿಂದು ರಾಷ್ಟ್ರವೆಂದು ಘೋಷಣೆಯಾಗಬೇಕು ಅನ್ನೋದು ನಮ್ಮ ಹಳೆಯ ಬೇಡಿಕೆ. ಈಗ ಹೊಸತಾಗಿ ನಿರ್ಮಾಣಗೊಳ್ಳುತ್ತಿರುವ ಪ್ರಜಾಪ್ರಭುತ್ವದ ದೇಗುಲವಾಗಿರುವ ಸಂಸತ್ ಭವನಕ್ಕೆ ಹಿಂದು ರಾಷ್ಟ್ರ ಭವನ ಎಂದು ಹೆಸರಿಡಬೇಕೆಂದು ಅಖಿಲ ಭಾರತ ಹಿಂದು ಮಹಾಸಭಾ ಆಗ್ರಹಿಸಿದೆ.
ಮಂಗಳೂರಿನ ಆರ್ಯ ಸಮಾಜದಲ್ಲಿ ಸುದ್ದಿಗೋಷ್ಠಿ ನಡೆಸಿದ ಅಖಿಲ ಭಾರತ ಹಿಂದು ಮಹಾಸಭಾ ದಕ್ಷಿಣ ಭಾರತ ವಲಯ ಕಾರ್ಯದರ್ಶಿ ಶ್ರೀ ಸ್ವಾಮಿ ದತ್ತಾತ್ರೇಯ ಸ್ವಾಮಿ ಸ್ವರೂಪನಾಥ, ಹಿಂದು ರಾಷ್ಟ್ರ ಭವನ ಎಂದು ಹೆಸರಿಡಲು ಒತ್ತಾಯಿಸಿ ಈಗಾಗ್ಲೇ ಸಹಿ ಸಂಗ್ರಹ ಆರಂಭಿಸಲಾಗಿದೆ. ಫೆ.7ರಂದು ಚಿಕ್ಕಮಗಳೂರಿನಲ್ಲಿ ರಾಜ್ಯದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಹಿಂದು ವಿರೋಧಿ ಹೇಳಿಕೆ ನೀಡುತ್ತಿದ್ದ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣದಲ್ಲಿ ವಕೀಲೆ ಮೀರಾ ರಾಘವೇಂದ್ರ ಅವರನ್ನು ಅಭಿನಂದಿಸುವುದಾಗಿ ಹೇಳಿದ ಅವರು, ಈ ಬಗ್ಗೆ ಬೆಂಗಳೂರಿನ ಹಲಸೂರು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಕೂಡಲೇ ಹಿಂಪಡೆಯಬೇಕು. ಇದು ಹಿಂದುತ್ವಕ್ಕಾಗಿ ನಡೆದ ಹೋರಾಟ. ಅಂಥ ಕೇಸನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆಯಬೇಕು ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷನಾಗಿರುವ ಜಗದೀಶ ಅಧಿಕಾರಿ ಬಿಲ್ಲವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇವೆ. ಕೋಟಿ ಚೆನ್ನಯರು ಮತ್ತು ಬಿಲ್ಲವ ಸಮುದಾಯಕ್ಕೆ ಅವಹೇಳನ ಮಾಡಿದ ಅಧಿಕಾರಿಯನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಬಿಲ್ಲವ ಸಮುದಾಯ ಹಿಂದುತ್ವಕ್ಕಾಗಿ ಅಗಾಧ ಕೊಡುಗೆ ನೀಡಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಿಂದು ಮಹಾಸಭಾ ಸಮಿತಿಯ ರಾಜ್ಯಾಧ್ಯಕ್ಷ ಡಾ.ಎಲ್. ಕೆ. ಸುವರ್ಣ, ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ, ಕಾರ್ಯದರ್ಶಿ ನವೀನ್ ಕುಮಾರ್ ಸುರತ್ಕಲ್, ದ.ಕ. ಜಿಲ್ಲಾಧ್ಯಕ್ಷ ಲೋಕೇಶ್ ಉಳ್ಳಾಲ, ದ.ಕ ಜಿಲ್ಲಾ ಶ್ರಮಿಕ ಸಭಾ ಕಾರ್ಯದರ್ಶಿ ಪ್ರಕಾಶ್ ಭಟ್ ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm