ಬ್ರೇಕಿಂಗ್ ನ್ಯೂಸ್
06-02-21 04:55 pm Mangalore Correspondent ಕರಾವಳಿ
ಮಂಗಳೂರು, ಫೆ.6: ಭಾರತ ಹಿಂದು ರಾಷ್ಟ್ರವೆಂದು ಘೋಷಣೆಯಾಗಬೇಕು ಅನ್ನೋದು ನಮ್ಮ ಹಳೆಯ ಬೇಡಿಕೆ. ಈಗ ಹೊಸತಾಗಿ ನಿರ್ಮಾಣಗೊಳ್ಳುತ್ತಿರುವ ಪ್ರಜಾಪ್ರಭುತ್ವದ ದೇಗುಲವಾಗಿರುವ ಸಂಸತ್ ಭವನಕ್ಕೆ ಹಿಂದು ರಾಷ್ಟ್ರ ಭವನ ಎಂದು ಹೆಸರಿಡಬೇಕೆಂದು ಅಖಿಲ ಭಾರತ ಹಿಂದು ಮಹಾಸಭಾ ಆಗ್ರಹಿಸಿದೆ.
ಮಂಗಳೂರಿನ ಆರ್ಯ ಸಮಾಜದಲ್ಲಿ ಸುದ್ದಿಗೋಷ್ಠಿ ನಡೆಸಿದ ಅಖಿಲ ಭಾರತ ಹಿಂದು ಮಹಾಸಭಾ ದಕ್ಷಿಣ ಭಾರತ ವಲಯ ಕಾರ್ಯದರ್ಶಿ ಶ್ರೀ ಸ್ವಾಮಿ ದತ್ತಾತ್ರೇಯ ಸ್ವಾಮಿ ಸ್ವರೂಪನಾಥ, ಹಿಂದು ರಾಷ್ಟ್ರ ಭವನ ಎಂದು ಹೆಸರಿಡಲು ಒತ್ತಾಯಿಸಿ ಈಗಾಗ್ಲೇ ಸಹಿ ಸಂಗ್ರಹ ಆರಂಭಿಸಲಾಗಿದೆ. ಫೆ.7ರಂದು ಚಿಕ್ಕಮಗಳೂರಿನಲ್ಲಿ ರಾಜ್ಯದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಹಿಂದು ವಿರೋಧಿ ಹೇಳಿಕೆ ನೀಡುತ್ತಿದ್ದ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣದಲ್ಲಿ ವಕೀಲೆ ಮೀರಾ ರಾಘವೇಂದ್ರ ಅವರನ್ನು ಅಭಿನಂದಿಸುವುದಾಗಿ ಹೇಳಿದ ಅವರು, ಈ ಬಗ್ಗೆ ಬೆಂಗಳೂರಿನ ಹಲಸೂರು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಕೂಡಲೇ ಹಿಂಪಡೆಯಬೇಕು. ಇದು ಹಿಂದುತ್ವಕ್ಕಾಗಿ ನಡೆದ ಹೋರಾಟ. ಅಂಥ ಕೇಸನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆಯಬೇಕು ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷನಾಗಿರುವ ಜಗದೀಶ ಅಧಿಕಾರಿ ಬಿಲ್ಲವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇವೆ. ಕೋಟಿ ಚೆನ್ನಯರು ಮತ್ತು ಬಿಲ್ಲವ ಸಮುದಾಯಕ್ಕೆ ಅವಹೇಳನ ಮಾಡಿದ ಅಧಿಕಾರಿಯನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಬಿಲ್ಲವ ಸಮುದಾಯ ಹಿಂದುತ್ವಕ್ಕಾಗಿ ಅಗಾಧ ಕೊಡುಗೆ ನೀಡಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಹಿಂದು ಮಹಾಸಭಾ ಸಮಿತಿಯ ರಾಜ್ಯಾಧ್ಯಕ್ಷ ಡಾ.ಎಲ್. ಕೆ. ಸುವರ್ಣ, ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ, ಕಾರ್ಯದರ್ಶಿ ನವೀನ್ ಕುಮಾರ್ ಸುರತ್ಕಲ್, ದ.ಕ. ಜಿಲ್ಲಾಧ್ಯಕ್ಷ ಲೋಕೇಶ್ ಉಳ್ಳಾಲ, ದ.ಕ ಜಿಲ್ಲಾ ಶ್ರಮಿಕ ಸಭಾ ಕಾರ್ಯದರ್ಶಿ ಪ್ರಕಾಶ್ ಭಟ್ ಉಪಸ್ಥಿತರಿದ್ದರು.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm