ಬ್ರೇಕಿಂಗ್ ನ್ಯೂಸ್
06-02-21 05:17 pm Mangalore Correspondent ಕರಾವಳಿ
ಮಂಗಳೂರು, ಫೆ.6: ಮಂಗಳೂರು ಕಮೀಷನರೇಟ್ ಅಧೀನದ ಸಿಸಿಬಿ ಪೊಲೀಸರು ವಂಚನೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಆರೋಪಿಗಳ ಐಷಾರಾಮಿ ಕಾರುಗಳನ್ನು ಹಿರಿಯ ಅಧಿಕಾರಿಗಳು ಶಾಮೀಲಾಗಿ ಮಾರಾಟ ಮಾಡಿರುವ ಆಘಾತಕಾರಿ ಪ್ರಕರಣ ವರದಿಯಾಗಿದ್ದು, ಅಂದಿನ ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್, ನಗರದ ಎಸಿಪಿ ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿರುವುದರಿಂದ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದ ರಿಯಲ್ ಎಸ್ಟೇಟ್, ಹಣ ದ್ವಿಗುಣ ಪ್ರಕರಣದ ಆರೋಪಿಗಳಿಗೆ ಸೇರಿದ ಬಿಎಮ್ ಡಬ್ಲ್ಯೂ, ಜಾಗ್ವಾರ್ ಸಹಿತ ಮೂರು ಐಶಾರಾಮಿ ಕಾರುಗಳನ್ನು ಪೊಲೀಸರು ಮಾರಾಟ ಮಾಡಿರುವ ಪ್ರಕರಣವನ್ನು ಮಂಗಳೂರು ನಗರದ ನೂತನ ಪೊಲೀಸ್ ಕಮೀಷನರ್ ಬಯಲಿಗೆಳಿದಿದ್ದಾರೆ. ತನಿಖೆಗೂ ಆದೇಶಿಸಿದ್ದಾರೆ. ಈ ಕುರಿತು ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕರು ವರದಿ ಕೇಳಿರುವ ಕುರಿತು ಸುದ್ದಿಯಾಗಿದೆ. ಇದು ಅತ್ಯಂತ ಆಘಾತಕಾರಿ ಘಟನೆಯಾಗಿದ್ದು, ಜನಸಾಮಾನ್ಯರು ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣಗೊಂಡಿದೆ.

ಮಂಗಳೂರಿನಿಂದ ತಿಂಗಳ ಹಿಂದೆಯಷ್ಟೆ ವರ್ಗಾವಣೆಗೊಂಡಿರುವ ಆಗಿನ ಕಮೀಷನರ್ ವಿಕಾಸ್ ಕುಮಾರ್ ಮೇಲೆ ಇದೊಂದೇ ಪ್ರಕರಣ ಅಲ್ಲದೆ ಭ್ರಷ್ಟಾಚಾರದ, ಸೆಟಲ್ ಮೆಂಟ್ ಹೆಸರಿನಲ್ಲಿ ಹಣ ಸುಲಿಗೆಯ ಹಲವು ಗಂಭೀರ ಆರೋಪಗಳು ಕೇಳಿಬಂದಿದ್ದವು. ಕ್ರಿಕೆಟ್ ಬೆಟ್ಟಿಂಗ್ ದಂಧೆಯ ಹಳೆಯ ಆರೋಪಿಗಳಿಂದ, ದಂಧೆ ನಿರತರಿಂದ ಅಪಾರ ಪ್ರಮಾಣದ ಹಣ ವಸೂಲಿ ಮಾಡಿರುವ ಪ್ರಕರಣಗಳನ್ನು ಮುಚ್ಚಿ ಹಾಕಿರುವ ವದಂತಿಗಳು ನಗರದಲ್ಲಿ ಹರಿದಾಡಿದ್ದವು. ಸಿಸಿಬಿಯನ್ನು ಮುಂದಿಟ್ಟು ಇಂತಹ ಹಲವು ಅಕ್ರಮ ಡೀಲಿಂಗ್ ನಡೆಸಿರುವ ಅನುಮಾನಗಳು ಈಗ ಎಲ್ಲೆಡೆ ಹರಿದಾಡುತ್ತಿದೆ. ಇದು ಪೊಲೀಸ್ ಇಲಾಖೆಯ ವೃತ್ತಿಪರತೆಗೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ.

ಈಗಿನ ಕಮೀಷನರ್ ಶಶಿಕುಮಾರ್ ಪ್ರಕರಣದ ತನಿಖೆಗೆ ಆದೇಶಿಸಿ ಜನರಲ್ಲಿ ಭರವಸೆ ಹುಟ್ಟಿಸಿದರೂ, ಈ ಪ್ರಕರಣದಲ್ಲಿ ಐಜಿಪಿ ದರ್ಜೆಯ ಐಪಿಎಸ್ ಅಧಿಕಾರಿಯ ಹೆಸರಿರುವುದರಿಂದ, ರಾಜಕೀಯ ನಂಟಿನ ಅನುಮಾನಗಳೂ ವ್ಯಕ್ತವಾಗಿದ್ದು ಪಾರದರ್ಶಕ ತನಿಖೆಗಾಗಿ ಪ್ರಕರಣವನ್ನು ದಕ್ಷ ಅಧಿಕಾರಿಗಳಿರುವ ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಬೇಕು ಎಂದು ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ. ರಾಜಕೀಯ ಪ್ರಭಾವ ಬಳಸಿ ಈಗಿನ ಕಮೀಷನರ್ ಶಶಿ ಕುಮಾರ್ ರ ಕೈಗಳನ್ನು ಕಟ್ಟಿಹಾಕಿ, ಪ್ರಕರಣವನ್ನು ಸರಕಾರ ಮುಚ್ಚಿ ಹಾಕಲು ಯತ್ನಿಸಿದರೆ ನಾಗರಿಕರನ್ನು ಸಂಘಟಿಸಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಅವರು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.
ಕೇಡಿ ರಾಜ್, ಕಾಸ್ಕುಮಾರ್, ಜಗದೇಕ ವೀರ ; ವಂಚಕ ಉದ್ಯಮಪತಿಗಳನ್ನೇ ಬೋಳಿಸಿದ ಪೊಲೀಸ್ ಜೋಡಿ !!
ಐಷಾರಾಮಿ ಕಾರುಗಳ ಮಾರಾಟ ಪ್ರಕರಣ : ಡಿಸಿಪಿ ಗಾಂವ್ಕರ್ ಗೆ ಆಂತರಿಕ ತನಿಖೆ ಹೊಣೆ
The DFYI organisation has urged for a detailed probe in the Luxury car missing case which was under the custody of CCB police in Mangalore.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am