ಬ್ರೇಕಿಂಗ್ ನ್ಯೂಸ್
07-02-21 09:45 pm Mangaluru Correspondent ಕರಾವಳಿ
ಮೂಡುಬಿದ್ರೆ, ಫೆ.7: ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಸಮಾಜದಲ್ಲಿ ದ್ವೇಷ , ಕೋಮು ಗಲಭೆಯನ್ನು ಎಬ್ಬಿಸಬೇಕೆನ್ನುವ ದೃಷ್ಟಿಯಿಂದ ತನ್ನ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಮತ್ತೊಮ್ಮೆ ತಾಂಟ್ ರೇ ತಾಂಟ್ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಇವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆಯಿಂದ ಮೂಡುಬಿದ್ರೆ ಠಾಣೆಗೆ ದೂರು ನೀಡಲಾಗಿದೆ.
ಕೊಣಾಜೆ ಬಳಿಯ ಪಜೀರಿನಲ್ಲಿ ರಿಯಾಜ್ ಮತ್ತೆ ಪ್ರಚೋದನಕಾರಿ ಭಾಷಣ ಮಾಡಿದ್ದು ಯುವಕರನ್ನು ಗಲ್ಲಿ ಗಲ್ಲಿಯಲ್ಲಿ ಛೂ ಬಿಡುತ್ತೇನೆ. ಒಂದಲ್ಲ ಹತ್ತು ಸಾರಿ ಹೇಳುತ್ತೇನೆ, ತಾಂಟ್ ರೇ ಬಾ ತಾಂಟ್ ಎನ್ನುವ ಮೂಲಕ ತನ್ನ ಪಕ್ಷದ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ರಿಯಾಜ್ ನೀಡಿರುವ ಇಂತಹ ಹೇಳಿಕೆಗಳಿಂದ ಸಮಾಜದ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ. ಕೋಮು ಗಲಭೆಯನ್ನು ಹಬ್ಬಿಸುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ರಿಯಾಜ್ ಪರಂಗಿಪೇಟೆ ವಿರುದ್ಧ ಕಲಂ 153 ಎ ಮತ್ತು 505 (1) ಮತ್ತು 505 (2) ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಜಾಗರಣ ವೇದಿಕೆ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮೂಡುಬಿದ್ರೆ ಹಿಂದು ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ , ಉಪಾಧ್ಯಕ್ಷ ನಾಗೇಶ್ ಕುಲಾಲ್, ಹಿಂದು ಯುವವಾಹಿನಿ ಸಂಯೋಜಕ ಸಂದೀಪ ಸುವರ್ಣ ಕೆಲ್ಲಪುತ್ತಿಗೆ, ಕಾರ್ಯದರ್ಶಿ ಸಂದೀಪ್ ಹೆಗ್ಡೆ, ನಗರ ಪ್ರಮುಖರಾದ ನರೇಶ್ ಶೆಟ್ಟಿ ಉಪಸ್ಥಿತರಿದ್ದರು.
Ullal Hindu Jagarana Vedike Demands sting action against Riyaz Farangipete for his provocative speech in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm