ಬ್ರೇಕಿಂಗ್ ನ್ಯೂಸ್
09-02-21 12:24 pm Mangalore Correspondent ಕರಾವಳಿ
ಬಂಟ್ವಾಳ, ಫೆ.9: ತಾಯಿಯ ಅನಾರೋಗ್ಯದಿಂದ ಬೇಸತ್ತ ಯುವಕನೊಬ್ಬ ಮೊಬೈಲ್ ಸ್ಟೇಟಸ್ ಹಾಕ್ಕೊಂಡು ನೇತ್ರಾವತಿ ನದಿಗೆ ಪ್ರಾಣ ಕಳಕೊಂಡ ಘಟನೆ ಪಾಣೆಮಂಗಳೂರು ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನಿವಾಸಿ ನೀರಜ್ (30) ನಿನ್ನೆ ರಾತ್ರಿ ಬಿ.ಸಿ.ರೋಡ್ ಬಳಿಯ ಪಾಣೆರ್ ಸೇತುವೆಯಿಂದ ನದಿಗೆ ಹಾರಿದ್ದಾನೆ ಎನ್ನಲಾಗಿದ್ದು ಆತನ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.

ಯುವಕನ ತಾಯಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು ಇದರಿಂದ ನೊಂದ ಯುವಕ, ನಿನಗಿಂತ ಮೊದಲೇ ನಾನು ಸಾಯುತ್ತೇನೆಂದು ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದ. ಸಾರಿ ಅಮ್ಮಾ, ನಿನ್ನನ್ನು ಕಾಪಾಡಲು ಆಗಿಲ್ಲ. ನಿನಗಿಂತ ಮುಂಚೆನೇ ನಾನು ಹೋಗ್ತಿದೇನೆ. ಓ ಯಮ ದೇವನೇ, ಹೆತ್ತ ತಾಯಿ ಸಾಯೋ ಮುನ್ನ ಕರೆದುಕೋ ಎನ್ನ ಎಂದು ವಿಷಾದ ಪೂರ್ಣ ಮಾತುಗಳನ್ನು ಬರೆದು ನಿನ್ನೆ ರಾತ್ರಿ ನೇತ್ರಾವತಿ ನದಿಗೆ ಹಾರಿದ್ದಾನೆ ಎನ್ನಲಾಗುತ್ತಿದೆ. ಆತನ ಸ್ಟೇಟಸ್ ನೋಡಿ ಗೆಳೆಯರು ಆಪ್ತರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿಯೇ ಸ್ಥಳೀಯರು ಗಮನಿಸಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಮಂಗಳವಾರ ಬೆಳಗ್ಗೆ ಸೇತುವೆ ಬಳಿಯಲ್ಲೇ ಶವ ಪತ್ತೆಯಾಗಿದೆ. ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳ, ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
30-year-old man committed suicide by jumping into river at Bantwal after posting a WhatsApp status of his mother suffering in the hospital in Mangalore. The search is on to find his body.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm