ಬಿಲ್ಲವರಿಗೆ ಅವಹೇಳನ ; ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದ್ರೆಯಲ್ಲಿ ಎಫ್ಐಆರ್

09-02-21 01:32 pm       Mangalore Correspondent   ಕರಾವಳಿ

ಬಿಲ್ಲವ ಸಮುದಾಯಕ್ಕೆ ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಗೈದ ವಿಚಾರಕ್ಕೆ ಸಂಬಂಧಿಸಿ ಜಗದೀಶ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ. 

ಮೂಡುಬಿದ್ರೆ, ಫೆ.9: ಬಿಲ್ಲವ ಸಮುದಾಯಕ್ಕೆ ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಗೈದ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಜಗದೀಶ್ ಅಧಿಕಾರಿ ಅವಹೇಳನದ ಹೇಳಿಕೆಯ ಬಗ್ಗೆ ಮೂಡುಬಿದ್ರೆಯ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಅಧ್ಯಕ್ಷ ರಾಜು ಪಿ.ಕೆ. ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. 

ಕೋಟಿ ಚೆನ್ನಯ ಮತ್ತು ಬಿಲ್ಲವರ ಭಾವನೆಗೆ ಧಕ್ಕೆ ಬರುವ ರೀತಿ ಹೇಳಿಕೆ ನೀಡಿದ ಬಗ್ಗೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಪೊಲೀಸರು ಜಗದೀಶ್ ಅಧಿಕಾರಿ ವಿರುದ್ಧ ಸೆಕ್ಷನ್ 295 ಎ ಮತ್ತು 505 ರ ಪ್ರಕಾರ ಎಫ್ಐಆರ್ ದಾಖಲಿಸಿದ್ದಾರೆ.

ಬಿಲ್ಲವರು, ಕೋಟಿ ಚೆನ್ನಯರ ಬಗ್ಗೆ ಅವಹೇಳನ ; ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ

ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ ಒಂದು ಲಕ್ಷ ರೂ. ; ಪ್ರತಿಭಾ ಕುಳಾಯಿ ಬಹಿರಂಗ ಸವಾಲು !!

An FIR has been filed against BJP leader Jagadish Adhikari in Moodbidri for his controversial statement made on Koti Chennaya.