ಬ್ರೇಕಿಂಗ್ ನ್ಯೂಸ್
09-02-21 03:58 pm Mangalore Correspondent ಕರಾವಳಿ
ಕೊಣಾಜೆ, ಫೆ.9: SDPI ಮುಖಂಡ ರಿಯಾಝ್ ಪರಂಗಿಪೇಟೆ ತಾಂಟ್ರೆ ಬಾ ತಾಂಟ್ ಎಂದು ಕೋಮು ಪ್ರಚೋದನಕಾರಿ ಭಾಷಣ ಮಾಡಿ ಹಿಂದು ಪರ ಸಂಘಟನೆಗಳ ಅವಹೇಳನ ಮಾಡಿ ಬೆದರಿಕೆ ಹಾಕಿದ್ದು ಈತ ಸಮಾಜದ ಸ್ವಾಸ್ಥ್ಯ ಕದಡಿ ಕೋಮು ಗಲಭೆ ನಡೆಸಲು ಹುನ್ನಾರ ನಡೆಸುತ್ತಿದ್ದು ಪೊಲೀಸರು ತಕ್ಷಣ ಆತನನ್ನು ಬಂಧಿಸಲು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಮುಡಿಪು ವಲಯಯದ ಪದಾಧಿಕಾರಿಗಳು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಭಾಷಣದ ವಿಡಿಯೋ ತುಣುಕು ಹರಿದಾಡುತ್ತಿದ್ದು ಆ ಭಾಷಣದಲ್ಲಿ ರಿಯಾಝ್ ಪರಂಗಿಪೇಟೆ RSS ಮತ್ತು ಅದರ ಪರಿವಾರ ಸಂಘಟನೆಗಳಲ್ಲಿ ತನಗೆ ಹೇಳಲಿರುವುದು ಒಂದೇ..ನಿಮ್ಮನ್ನು ಎದುರಿಸಲು ನಾವು ಯಾವತ್ತೂ ಎಲ್ಲಿಯೂ ಸಿದ್ಧ. ನೀವು ತಾಂಟಲು ಬಂದರೆ ಬನ್ನಿ ತಾಂಟುವ, ಪ್ರತೀ ಗಲ್ಲಿಗಳಲ್ಲಿಯೂ ನಮ್ಮ ಯುವ ಪಡೆಯನ್ನು ನಿರ್ಮಿಸಿ ಸಂಘ ಪರಿವಾರದ ವಿರುದ್ಧ ಛೂ ಬಿಡುತ್ತೇವೆ. ಈ ಆಟ ಇನ್ನು ಆರಂಭವಾಗಲಿದೆ ಎಂಬಿತ್ಯಾದಿ ಮಾತುಗಳನ್ನು ಆಡಿ ಹಿಂದು ಪರ ಸಂಘಟನೆಗಳನ್ನು ನೇರವಾಗಿ ಸಂಘರ್ಷಕ್ಕೆ ಆಹ್ವಾನಿಸಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸಿ ಕೋಮು ಗಲಭೆ ನಡೆಸಲು ಹುನ್ನಾರ ನಡೆಸುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕುರ್ನಾಡು ಗ್ರಾಮದ ಮಿತ್ತಕೋಡಿಯಲ್ಲಿ ಈ ಕೋಮು ಪ್ರಚೋದಕ ಭಾಷಣ ಮಾಡಿದರ ಪರಿಣಾಮ ಶಾಂತಿ ಸೌಹಾರ್ದವಾಗಿದ್ದ ಕುರ್ನಾಡು ಪರಿಸರ ಅಶಾಂತಿಗೊಳಗಾಗಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಈತನ ಕೋಮು ಪ್ರಚೋದಕ ಭಾಷಣದಿಂದಾಗಿ ಮಂಗಳೂರಿನ ಲಾಲ್ ಬಾಗ್ ನಲ್ಲಿ ಹಿಂದು ಯುವಕನಿಗೆ ಚೂರಿ ಇರಿತವಾಗಿದೆ. ಈತನು ಈ ಮೊದಲೂ ಪ್ರಚೋದನಕಾರಿ ಭಾಷಣ ಮಾಡಿದ್ದು ಈತನ ವಿರುದ್ಧ ಯಾವುದೇ ಕಠಿಣ ಕ್ರಮ ಜರಗಿಲ್ಲ. ಈತನನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದೊಂದು ದಿನ ಜಿಲ್ಲೆಯಲ್ಲಿ ಕೋಮು ಗಲಭೆ ನಡೆಯುವ ಸಾಧ್ಯತೆಗಳಿವೆ ಎಂದು ಜಾಗರಣ ವೇದಿಕೆ ಮುಖಂಡರು ಪೊಲೀಸ್ ಇಲಾಖೆಗೆ ದೂರಿದ್ದಾರೆ.
ಹಿರಿಯ ಮುಖಂಡರಾದ ಟಿ.ಜಿ ರಾಜಾರಾಂ ಭಟ್, ಜಗದೀಶ್ ಆಳ್ವ ಕುವೆತ್ತಬೈಲು, ಹಿಂ.ಜಾ.ವೇ ಮುಡಿಪು ವಲಯಾಧ್ಯಕ್ಷ ಪ್ರಶಾಂತ್ ಅನಂಗ, ಪ್ರಮುಖರಾದ ದಿವ್ಯರಾಜ್ ಶೆಟ್ಟಿ, ವಿಶ್ವನಾಥ ಕಡುವಾಯಿ, ರಂಜಿತ್ ಹೂಹಾಕುವಕಲ್ಲು ಇದ್ದರು.
The Hindu Jagarana Vedike activists of Konaje have filed a complaint against Riyaz Farangipete for his speech of communal disharmony in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm