ಬ್ರೇಕಿಂಗ್ ನ್ಯೂಸ್
            
                        09-02-21 03:58 pm Mangalore Correspondent ಕರಾವಳಿ
            ಕೊಣಾಜೆ, ಫೆ.9: SDPI ಮುಖಂಡ ರಿಯಾಝ್ ಪರಂಗಿಪೇಟೆ ತಾಂಟ್ರೆ ಬಾ ತಾಂಟ್ ಎಂದು ಕೋಮು ಪ್ರಚೋದನಕಾರಿ ಭಾಷಣ ಮಾಡಿ ಹಿಂದು ಪರ ಸಂಘಟನೆಗಳ ಅವಹೇಳನ ಮಾಡಿ ಬೆದರಿಕೆ ಹಾಕಿದ್ದು ಈತ ಸಮಾಜದ ಸ್ವಾಸ್ಥ್ಯ ಕದಡಿ ಕೋಮು ಗಲಭೆ ನಡೆಸಲು ಹುನ್ನಾರ ನಡೆಸುತ್ತಿದ್ದು ಪೊಲೀಸರು ತಕ್ಷಣ ಆತನನ್ನು ಬಂಧಿಸಲು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಮುಡಿಪು ವಲಯಯದ ಪದಾಧಿಕಾರಿಗಳು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಭಾಷಣದ ವಿಡಿಯೋ ತುಣುಕು ಹರಿದಾಡುತ್ತಿದ್ದು ಆ ಭಾಷಣದಲ್ಲಿ ರಿಯಾಝ್ ಪರಂಗಿಪೇಟೆ RSS ಮತ್ತು ಅದರ ಪರಿವಾರ ಸಂಘಟನೆಗಳಲ್ಲಿ ತನಗೆ ಹೇಳಲಿರುವುದು ಒಂದೇ..ನಿಮ್ಮನ್ನು ಎದುರಿಸಲು ನಾವು ಯಾವತ್ತೂ ಎಲ್ಲಿಯೂ ಸಿದ್ಧ. ನೀವು ತಾಂಟಲು ಬಂದರೆ ಬನ್ನಿ ತಾಂಟುವ, ಪ್ರತೀ ಗಲ್ಲಿಗಳಲ್ಲಿಯೂ ನಮ್ಮ ಯುವ ಪಡೆಯನ್ನು ನಿರ್ಮಿಸಿ ಸಂಘ ಪರಿವಾರದ ವಿರುದ್ಧ ಛೂ ಬಿಡುತ್ತೇವೆ. ಈ ಆಟ ಇನ್ನು ಆರಂಭವಾಗಲಿದೆ ಎಂಬಿತ್ಯಾದಿ ಮಾತುಗಳನ್ನು ಆಡಿ ಹಿಂದು ಪರ ಸಂಘಟನೆಗಳನ್ನು ನೇರವಾಗಿ ಸಂಘರ್ಷಕ್ಕೆ ಆಹ್ವಾನಿಸಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸಿ ಕೋಮು ಗಲಭೆ ನಡೆಸಲು ಹುನ್ನಾರ ನಡೆಸುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕುರ್ನಾಡು ಗ್ರಾಮದ ಮಿತ್ತಕೋಡಿಯಲ್ಲಿ ಈ ಕೋಮು ಪ್ರಚೋದಕ ಭಾಷಣ ಮಾಡಿದರ ಪರಿಣಾಮ ಶಾಂತಿ ಸೌಹಾರ್ದವಾಗಿದ್ದ ಕುರ್ನಾಡು ಪರಿಸರ ಅಶಾಂತಿಗೊಳಗಾಗಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಈತನ ಕೋಮು ಪ್ರಚೋದಕ ಭಾಷಣದಿಂದಾಗಿ ಮಂಗಳೂರಿನ ಲಾಲ್ ಬಾಗ್ ನಲ್ಲಿ ಹಿಂದು ಯುವಕನಿಗೆ ಚೂರಿ ಇರಿತವಾಗಿದೆ. ಈತನು ಈ ಮೊದಲೂ ಪ್ರಚೋದನಕಾರಿ ಭಾಷಣ ಮಾಡಿದ್ದು ಈತನ ವಿರುದ್ಧ ಯಾವುದೇ ಕಠಿಣ ಕ್ರಮ ಜರಗಿಲ್ಲ. ಈತನನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದೊಂದು ದಿನ ಜಿಲ್ಲೆಯಲ್ಲಿ ಕೋಮು ಗಲಭೆ ನಡೆಯುವ ಸಾಧ್ಯತೆಗಳಿವೆ ಎಂದು ಜಾಗರಣ ವೇದಿಕೆ ಮುಖಂಡರು ಪೊಲೀಸ್ ಇಲಾಖೆಗೆ ದೂರಿದ್ದಾರೆ.
ಹಿರಿಯ ಮುಖಂಡರಾದ ಟಿ.ಜಿ ರಾಜಾರಾಂ ಭಟ್, ಜಗದೀಶ್ ಆಳ್ವ ಕುವೆತ್ತಬೈಲು, ಹಿಂ.ಜಾ.ವೇ ಮುಡಿಪು ವಲಯಾಧ್ಯಕ್ಷ ಪ್ರಶಾಂತ್ ಅನಂಗ, ಪ್ರಮುಖರಾದ ದಿವ್ಯರಾಜ್ ಶೆಟ್ಟಿ, ವಿಶ್ವನಾಥ ಕಡುವಾಯಿ, ರಂಜಿತ್ ಹೂಹಾಕುವಕಲ್ಲು ಇದ್ದರು.
            
            
            The Hindu Jagarana Vedike activists of Konaje have filed a complaint against Riyaz Farangipete for his speech of communal disharmony in Mangalore.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm