ಬ್ರೇಕಿಂಗ್ ನ್ಯೂಸ್
09-02-21 03:58 pm Mangalore Correspondent ಕರಾವಳಿ
ಕೊಣಾಜೆ, ಫೆ.9: SDPI ಮುಖಂಡ ರಿಯಾಝ್ ಪರಂಗಿಪೇಟೆ ತಾಂಟ್ರೆ ಬಾ ತಾಂಟ್ ಎಂದು ಕೋಮು ಪ್ರಚೋದನಕಾರಿ ಭಾಷಣ ಮಾಡಿ ಹಿಂದು ಪರ ಸಂಘಟನೆಗಳ ಅವಹೇಳನ ಮಾಡಿ ಬೆದರಿಕೆ ಹಾಕಿದ್ದು ಈತ ಸಮಾಜದ ಸ್ವಾಸ್ಥ್ಯ ಕದಡಿ ಕೋಮು ಗಲಭೆ ನಡೆಸಲು ಹುನ್ನಾರ ನಡೆಸುತ್ತಿದ್ದು ಪೊಲೀಸರು ತಕ್ಷಣ ಆತನನ್ನು ಬಂಧಿಸಲು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಮುಡಿಪು ವಲಯಯದ ಪದಾಧಿಕಾರಿಗಳು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಭಾಷಣದ ವಿಡಿಯೋ ತುಣುಕು ಹರಿದಾಡುತ್ತಿದ್ದು ಆ ಭಾಷಣದಲ್ಲಿ ರಿಯಾಝ್ ಪರಂಗಿಪೇಟೆ RSS ಮತ್ತು ಅದರ ಪರಿವಾರ ಸಂಘಟನೆಗಳಲ್ಲಿ ತನಗೆ ಹೇಳಲಿರುವುದು ಒಂದೇ..ನಿಮ್ಮನ್ನು ಎದುರಿಸಲು ನಾವು ಯಾವತ್ತೂ ಎಲ್ಲಿಯೂ ಸಿದ್ಧ. ನೀವು ತಾಂಟಲು ಬಂದರೆ ಬನ್ನಿ ತಾಂಟುವ, ಪ್ರತೀ ಗಲ್ಲಿಗಳಲ್ಲಿಯೂ ನಮ್ಮ ಯುವ ಪಡೆಯನ್ನು ನಿರ್ಮಿಸಿ ಸಂಘ ಪರಿವಾರದ ವಿರುದ್ಧ ಛೂ ಬಿಡುತ್ತೇವೆ. ಈ ಆಟ ಇನ್ನು ಆರಂಭವಾಗಲಿದೆ ಎಂಬಿತ್ಯಾದಿ ಮಾತುಗಳನ್ನು ಆಡಿ ಹಿಂದು ಪರ ಸಂಘಟನೆಗಳನ್ನು ನೇರವಾಗಿ ಸಂಘರ್ಷಕ್ಕೆ ಆಹ್ವಾನಿಸಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸಿ ಕೋಮು ಗಲಭೆ ನಡೆಸಲು ಹುನ್ನಾರ ನಡೆಸುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕುರ್ನಾಡು ಗ್ರಾಮದ ಮಿತ್ತಕೋಡಿಯಲ್ಲಿ ಈ ಕೋಮು ಪ್ರಚೋದಕ ಭಾಷಣ ಮಾಡಿದರ ಪರಿಣಾಮ ಶಾಂತಿ ಸೌಹಾರ್ದವಾಗಿದ್ದ ಕುರ್ನಾಡು ಪರಿಸರ ಅಶಾಂತಿಗೊಳಗಾಗಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಈತನ ಕೋಮು ಪ್ರಚೋದಕ ಭಾಷಣದಿಂದಾಗಿ ಮಂಗಳೂರಿನ ಲಾಲ್ ಬಾಗ್ ನಲ್ಲಿ ಹಿಂದು ಯುವಕನಿಗೆ ಚೂರಿ ಇರಿತವಾಗಿದೆ. ಈತನು ಈ ಮೊದಲೂ ಪ್ರಚೋದನಕಾರಿ ಭಾಷಣ ಮಾಡಿದ್ದು ಈತನ ವಿರುದ್ಧ ಯಾವುದೇ ಕಠಿಣ ಕ್ರಮ ಜರಗಿಲ್ಲ. ಈತನನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದೊಂದು ದಿನ ಜಿಲ್ಲೆಯಲ್ಲಿ ಕೋಮು ಗಲಭೆ ನಡೆಯುವ ಸಾಧ್ಯತೆಗಳಿವೆ ಎಂದು ಜಾಗರಣ ವೇದಿಕೆ ಮುಖಂಡರು ಪೊಲೀಸ್ ಇಲಾಖೆಗೆ ದೂರಿದ್ದಾರೆ.
ಹಿರಿಯ ಮುಖಂಡರಾದ ಟಿ.ಜಿ ರಾಜಾರಾಂ ಭಟ್, ಜಗದೀಶ್ ಆಳ್ವ ಕುವೆತ್ತಬೈಲು, ಹಿಂ.ಜಾ.ವೇ ಮುಡಿಪು ವಲಯಾಧ್ಯಕ್ಷ ಪ್ರಶಾಂತ್ ಅನಂಗ, ಪ್ರಮುಖರಾದ ದಿವ್ಯರಾಜ್ ಶೆಟ್ಟಿ, ವಿಶ್ವನಾಥ ಕಡುವಾಯಿ, ರಂಜಿತ್ ಹೂಹಾಕುವಕಲ್ಲು ಇದ್ದರು.
The Hindu Jagarana Vedike activists of Konaje have filed a complaint against Riyaz Farangipete for his speech of communal disharmony in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm