ಬ್ರೇಕಿಂಗ್ ನ್ಯೂಸ್
09-02-21 03:58 pm Mangalore Correspondent ಕರಾವಳಿ
ಕೊಣಾಜೆ, ಫೆ.9: SDPI ಮುಖಂಡ ರಿಯಾಝ್ ಪರಂಗಿಪೇಟೆ ತಾಂಟ್ರೆ ಬಾ ತಾಂಟ್ ಎಂದು ಕೋಮು ಪ್ರಚೋದನಕಾರಿ ಭಾಷಣ ಮಾಡಿ ಹಿಂದು ಪರ ಸಂಘಟನೆಗಳ ಅವಹೇಳನ ಮಾಡಿ ಬೆದರಿಕೆ ಹಾಕಿದ್ದು ಈತ ಸಮಾಜದ ಸ್ವಾಸ್ಥ್ಯ ಕದಡಿ ಕೋಮು ಗಲಭೆ ನಡೆಸಲು ಹುನ್ನಾರ ನಡೆಸುತ್ತಿದ್ದು ಪೊಲೀಸರು ತಕ್ಷಣ ಆತನನ್ನು ಬಂಧಿಸಲು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಮುಡಿಪು ವಲಯಯದ ಪದಾಧಿಕಾರಿಗಳು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಭಾಷಣದ ವಿಡಿಯೋ ತುಣುಕು ಹರಿದಾಡುತ್ತಿದ್ದು ಆ ಭಾಷಣದಲ್ಲಿ ರಿಯಾಝ್ ಪರಂಗಿಪೇಟೆ RSS ಮತ್ತು ಅದರ ಪರಿವಾರ ಸಂಘಟನೆಗಳಲ್ಲಿ ತನಗೆ ಹೇಳಲಿರುವುದು ಒಂದೇ..ನಿಮ್ಮನ್ನು ಎದುರಿಸಲು ನಾವು ಯಾವತ್ತೂ ಎಲ್ಲಿಯೂ ಸಿದ್ಧ. ನೀವು ತಾಂಟಲು ಬಂದರೆ ಬನ್ನಿ ತಾಂಟುವ, ಪ್ರತೀ ಗಲ್ಲಿಗಳಲ್ಲಿಯೂ ನಮ್ಮ ಯುವ ಪಡೆಯನ್ನು ನಿರ್ಮಿಸಿ ಸಂಘ ಪರಿವಾರದ ವಿರುದ್ಧ ಛೂ ಬಿಡುತ್ತೇವೆ. ಈ ಆಟ ಇನ್ನು ಆರಂಭವಾಗಲಿದೆ ಎಂಬಿತ್ಯಾದಿ ಮಾತುಗಳನ್ನು ಆಡಿ ಹಿಂದು ಪರ ಸಂಘಟನೆಗಳನ್ನು ನೇರವಾಗಿ ಸಂಘರ್ಷಕ್ಕೆ ಆಹ್ವಾನಿಸಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸಿ ಕೋಮು ಗಲಭೆ ನಡೆಸಲು ಹುನ್ನಾರ ನಡೆಸುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕುರ್ನಾಡು ಗ್ರಾಮದ ಮಿತ್ತಕೋಡಿಯಲ್ಲಿ ಈ ಕೋಮು ಪ್ರಚೋದಕ ಭಾಷಣ ಮಾಡಿದರ ಪರಿಣಾಮ ಶಾಂತಿ ಸೌಹಾರ್ದವಾಗಿದ್ದ ಕುರ್ನಾಡು ಪರಿಸರ ಅಶಾಂತಿಗೊಳಗಾಗಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಈತನ ಕೋಮು ಪ್ರಚೋದಕ ಭಾಷಣದಿಂದಾಗಿ ಮಂಗಳೂರಿನ ಲಾಲ್ ಬಾಗ್ ನಲ್ಲಿ ಹಿಂದು ಯುವಕನಿಗೆ ಚೂರಿ ಇರಿತವಾಗಿದೆ. ಈತನು ಈ ಮೊದಲೂ ಪ್ರಚೋದನಕಾರಿ ಭಾಷಣ ಮಾಡಿದ್ದು ಈತನ ವಿರುದ್ಧ ಯಾವುದೇ ಕಠಿಣ ಕ್ರಮ ಜರಗಿಲ್ಲ. ಈತನನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದೊಂದು ದಿನ ಜಿಲ್ಲೆಯಲ್ಲಿ ಕೋಮು ಗಲಭೆ ನಡೆಯುವ ಸಾಧ್ಯತೆಗಳಿವೆ ಎಂದು ಜಾಗರಣ ವೇದಿಕೆ ಮುಖಂಡರು ಪೊಲೀಸ್ ಇಲಾಖೆಗೆ ದೂರಿದ್ದಾರೆ.
ಹಿರಿಯ ಮುಖಂಡರಾದ ಟಿ.ಜಿ ರಾಜಾರಾಂ ಭಟ್, ಜಗದೀಶ್ ಆಳ್ವ ಕುವೆತ್ತಬೈಲು, ಹಿಂ.ಜಾ.ವೇ ಮುಡಿಪು ವಲಯಾಧ್ಯಕ್ಷ ಪ್ರಶಾಂತ್ ಅನಂಗ, ಪ್ರಮುಖರಾದ ದಿವ್ಯರಾಜ್ ಶೆಟ್ಟಿ, ವಿಶ್ವನಾಥ ಕಡುವಾಯಿ, ರಂಜಿತ್ ಹೂಹಾಕುವಕಲ್ಲು ಇದ್ದರು.
The Hindu Jagarana Vedike activists of Konaje have filed a complaint against Riyaz Farangipete for his speech of communal disharmony in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm