ಬ್ರೇಕಿಂಗ್ ನ್ಯೂಸ್
12-02-21 04:53 pm Mangalore Correspondent ಕರಾವಳಿ
ಮಂಗಳೂರು, ಫೆ.12: ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಆಗಿದ್ದ ಕನ್ನಡ ಚಿತ್ರನಟಿ ಪದ್ಮಜಾ ರಾವ್ ಇಂದು ಮಂಗಳೂರಿನ 5ನೇ ಜೆಎಂಎಫ್ ಕೋರ್ಟಿಗೆ ಹಾಜರಾಗಿ ಜಾಮೀನು ಪಡೆದಿದ್ದಾರೆ.

ಪದ್ಮಜಾ ರಾವ್ ಅವರನ್ನು ಬಂಧಿಸಿ, ಕರೆತರುವಂತೆ ಮಂಗಳೂರಿನ ಕೋರ್ಟ್ ಬೆಂಗಳೂರಿನ ಕಲಘಟ್ಟ ಪೊಲೀಸರಿಗೆ ವಾರೆಂಟ್ ನೀಡಿತ್ತು. ಅದರಂತೆ, ಪೊಲೀಸರು ಆಕೆಯನ್ನು ಬಂಧಿಸಿ ಮಾರ್ಚ್ 8ರಂದು ಕೋರ್ಟಿಗೆ ಹಾಜರು ಮಾಡಬೇಕಿತ್ತು. ಆದರೆ, ಪದ್ಮಜಾ ರಾವ್ ವಾರೆಂಟ್ ಆದೇಶದ ಪ್ರತಿ ಸಿಗುತ್ತಿದ್ದಂತೆ ತಮ್ಮ ವಕೀಲರ ಮೂಲಕ ಮಂಗಳೂರಿನ ಕೋರ್ಟಿಗೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಜಾಮೀನು ಪಡೆದಿದ್ದಾರೆ.

ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಪದ್ಮಜಾ ರಾವ್, ನನಗೆ ನಮ್ಮ ಕಾನೂನು, ನ್ಯಾಯಾಂಗದ ಬಗ್ಗೆ ಸಂಪೂರ್ಣ ಭರವಸೆ ಇದೆ. ಜೊತೆಗೆ ನನ್ನ ಮೇಲೆ ನನಗೆ ಭರವಸೆ ಇದೆ. ಈ ಪ್ರಕರಣದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ. ನೀವೆಲ್ಲಾ ಕಾದು ನೋಡಬೇಕು, ಈಗ ಏನನ್ನೂ ಹೇಳಲು ಆಗುವುದಿಲ್ಲ ಎಂದು ಹೇಳಿದರು.

ತುಳು ಚಿತ್ರನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ತನ್ನಿಂದ 41 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾಗಿ ಪದ್ಮಜಾ ವಿರುದ್ಧ ಕೋರ್ಟಿಗೆ ದೂರು ಸಲ್ಲಿಸಿದ್ದರು. 2018ರಲ್ಲಿ ಚಾಲಿಪೋಲಿಲು ಚಿತ್ರಕ್ಕಾಗಿ ನಟಿಸಲು ಬಂದಿದ್ದ ವೇಳೆ ಪರಿಚಯ ಆಗಿದ್ದ ಪದ್ಮಜಾ, ಆಬಳಿಕ ಹಂತ ಹಂತವಾಗಿ ಹಣ ಪಡೆದಿದ್ದರು. ಹಣವನ್ನು ತನ್ನ ವೀರು ಟಾಕೀಸ್ ಪ್ರೊಡಕ್ಷನ್ ಹೌಸ್ ಹೆಸರಲ್ಲಿ ಚೆಕ್ ಮೂಲಕ ನೀಡಿದ್ದಾಗಿ ವೀರೇಂದ್ರ ಹೇಳಿಕೊಂಡಿದ್ದರು.
Read: ತುಳು ಚಿತ್ರ ನಿರ್ದೇಶಕನಿಗೆ ವಂಚನೆ ; ಖ್ಯಾತ ನಟಿ ಪದ್ಮಜಾ ರಾವ್ ವಿರುದ್ಧ ಮಂಗಳೂರು ಕೋರ್ಟಿನಿಂದ ಬಂಧನ ವಾರಂಟ್
Kannada actor Padmaja Rao Actress gets anticipatory bail in Mangalore court over cheque bounce case which was issued by the Mangalore 5th Additional Court. A case was filed by Tulu Director Veerendra Shetty Kavoor.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm