ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಬಿಎ ಉದ್ಯಮ ಸಂಸ್ಥೆಗಳ ಸ್ಥಾಪಕ ಡಾ.ಬಿ.ಎ. ಮೊಹಿದ್ದೀನ್ ನಿಧನ 

16-08-20 03:43 pm       Mangalore Reporter   ಕರಾವಳಿ

ಬಿಎ ಗ್ರೂಪ್ ಉದ್ಯಮ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ.ಬಿ.ಎ. ಮೊಹಿದ್ದೀನ್ (86) ಅಲ್ಪಕಾಲದ ಅಸೌಖ್ಯದ ಬಳಿಕ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

ಮಂಗಳೂರು, ಆಗಸ್ಟ್ 16: ಬಿಎ ಗ್ರೂಪ್ ಉದ್ಯಮ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ.ಬಿ.ಎ. ಮೊಹಿದ್ದೀನ್ (86) ಅಲ್ಪಕಾಲದ ಅಸೌಖ್ಯದ ಬಳಿಕ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

ಮೊಹಿದ್ದೀನ್ ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು ತುಂಬೆ ಮಸೀದಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. 

ತುಂಬೆಯಲ್ಲಿ 1957ರಲ್ಲಿ ಬಿಎ ಗ್ರೂಪ್ ಹೆಸರಲ್ಲಿ ಟಿಂಬರ್ ವ್ಯಾಪಾರ ಸಂಸ್ಥೆ ಹುಟ್ಟುಹಾಕಿದ್ದ ಅಹ್ಮದ್ ಹಾಜಿಯವರು ಐದು ದಶಕಗಳ ಕಾಲ ಮರದ ವ್ಯಾಪಾರಿಯಾಗಿ, ಹಲವೆಡೆ ಮರದ ಕಾರ್ಖಾನೆಗಳನ್ನು ಸ್ಥಾಪಿಸಿದ್ದರು.  ಇದೇ ವೇಳೆ, ರಿಯಲ್ ಎಸ್ಟೇಟ್, ಶಿಕ್ಷಣ ಸಂಸ್ಥೆಗಳಲ್ಲಿಯೂ ತೊಡಗಿಸಿಕೊಂಡ ಅಹ್ಮದ್ ಹಾಜಿ, ಕುಗ್ರಾಮವಾಗಿದ್ದ ತುಂಬೆಯಲ್ಲಿ ಐಟಿಐ, ಇಂಗ್ಲಿಷ್ - ಕನ್ನಡ ಮೀಡಿಯಂ ಸ್ಕೂಲ್, ಇಂಜಿನಿಯರಿಂಗ್ ಕಾಲೇಜು ಆರಂಭಿಸಿ ಹೆಸರು ಮಾಡಿದ್ದಾರೆ. ಮಂಗಳೂರಿನಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿ, ಅಧ್ಯಕ್ಷರಾಗಿದ್ದ ಅಹ್ಮದ್ ಹಾಜಿಯವರ ಬಿಎ ಗ್ರೂಪ್ ಈಗ ದುಬೈ ಮತ್ತು ಭಾರತದಲ್ಲಿ ದೊಡ್ಡ ಉದ್ಯಮ ಸಂಸ್ಥೆಯಾಗಿ ಬೆಳೆದಿದೆ. ಹಾಜಿಯವರ ನಾಲ್ವರು ಮಕ್ಕಳು ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.