ಬ್ರೇಕಿಂಗ್ ನ್ಯೂಸ್
16-08-20 04:49 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 16: ತುಳು ಭಾಷೆಯನ್ನು ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ರಡಿಯಲ್ಲಿ ಸೇರಿಸಲು ಒತ್ತಾಯಿಸಿ ಇಂದು ತುಳುವರು ಟ್ವೀಟ್ ಅಭಿಯಾನ ನಡೆಸಿದ್ದಾರೆ. ಜೈ ತುಳುನಾಡು ಸಂಘಟನೆ ಎಜ್ಯುಕೇಷನ್ ಎನ್ನುವ ಹ್ಯಾಷ್ಟ್ಯಾಗ್ನಲ್ಲಿ ಟ್ವೀಟ್ ಅಭಿಯಾನ ಆಯೋಜಿಸಿದ್ದು ಸಾವಿರಾರು ಜನ ಟ್ವೀಟ್ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.
5ನೇ ಅಥವಾ 8ನೇ ತರಗತಿಯ ವರೆಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಸ್ಥಳೀಯ ಅಥವಾ ಮಾತೃಭಾಷೆಯೇ ಬೋಧನ ಮಾಧ್ಯಮವಾಗಿರಬೇಕು ಎಂಬುದನ್ನು ಉಲ್ಲೇಖಿಸಲಾಗಿದೆ. ಆದರೆ, ಕರಾವಳಿಯ ಲಕ್ಷಾಂತರ ಜನರ ಮಾತೃಭಾಷೆ ತುಳು ಆಗಿರುವ ಹಿನ್ನೆಲೆಯಲ್ಲಿ ಮಾತೃಭಾಷೆಯ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಅಥವಾ ತುಳುವನ್ನು ಮೂರನೇ ಐಚ್ಛಿಕ ಭಾಷೆಯಾಗಿ ಕಲಿಸಬೇಕು ಎನ್ನುವ ಹಕ್ಕೊತ್ತಾಯ ರೂಪಿಸಲಾಗಿದೆ. ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರಿಸಬೇಕೆನ್ನುವ ಒತ್ತಾಯ ಹೆಚ್ಚಿರುವ ಸಂದರ್ಭದಲ್ಲಿಯೇ ಈಗ ಶಿಕ್ಷಣದಲ್ಲಿಯೂ ತುಳು ಭಾಷೆಗೆ ಸ್ಥಾನ ನೀಡಬೇಕೆಂಬ ಒತ್ತಾಯ ಕೇಳಿಬಂದಿದ್ದು ಇದಕ್ಕೆ ಕನ್ನಡಿಗರೂ ಬೆಂಬಲ ಸೂಚಿಸಿದ್ದಾರೆ. ಕನ್ನಡದ ನಟ ಜಗ್ಗೇಶ್ ಟ್ವೀಟ್ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದು ನಾನು ಕೂಡ ತುಳು ಭಾಷಿಗರ ಒತ್ತಾಯಕ್ಕೆ ಬೆಂಬಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಸಾವಿರಾರು ಮಂದಿ ಈಗಾಗಲೇ ಹ್ಯಾಷ್ಟ್ಯಾಗ್ ಎಜ್ಯುಕೇಷನ್ ಟ್ವೀಟ್ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ತುಳು ಭಾಷಿಕ ವಿದ್ಯಾರ್ಥಿಗಳಿಗೆ ತುಳು ಭಾಷೆಯಲ್ಲಿಯೇ ಶಿಕ್ಷಣ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗಿದ್ದು ಕೇಂದ್ರ ಮತ್ತು ರಾಜ್ಯ ಸರಕಾರದ ಕಿವಿ ತಲುಪಬಹುದೇ ಅನ್ನುವ ಕುತೂಹಲದಲ್ಲಿ ಜನರಿದ್ದಾರೆ.
ಮಲ್ಲೆ ಇಜ್ಜಿ ಯಾನ್ ಲಾ ತುಳು ಬಾಸೆಗ ನಿನ್ನೋಟ್ಟುಗು ಬರ್ಪೆ
— ನವರಸನಾಯಕ ಜಗ್ಗೇಶ್ (@Jaggesh2) August 16, 2020
ಶುಭದಿನ... https://t.co/2BB6lcZrVH
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm