ಬ್ರೇಕಿಂಗ್ ನ್ಯೂಸ್
14-02-21 01:07 pm Mangalore Correspondent ಕರಾವಳಿ
ಉಳ್ಳಾಲ, ಫೆ.14; ರೈಲು ಡಿಕ್ಕಿ ಹೊಡೆದು ಬ್ಯಾಂಕ್ ಉದ್ಯೋಗಿಯೊಬ್ಬ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಬಳಿ ನಡೆದಿದೆ.
ಕೋಟೆಕಾರು, ಬೀರಿ ಭಂಡಾರಮನೆ ಬಳಿಯ ನಿವಾಸಿ ಸತೀಶ್ಚಂದ್ರ ನಾಯ್ಕ್ (28) ಮೃತ ಯುವಕನಾಗಿದ್ದು ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ರೈಲು ಹಳಿಯಿಂದ ದೂರಕ್ಕೆ ಎಸೆಯಲ್ಪಟ್ಟ ಸ್ಥಿತಿಯಲ್ಲಿದ್ದು ಶವದ ಮೈಯ ಬಟ್ಟೆ ಹರಿದು ಚಿಂದಿಯಾಗಿದೆ. ಹಳಿ ದಾಟುವಾಗ ರೈಲು ಡಿಕ್ಕಿಯಾಗಿದ್ದು ಎಳಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಮಧ್ಯಾಹ್ನ ಹೊತ್ತಿಗೆ ಶವ ನೋಡಿ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸತೀಶ್ಚಂದ್ರ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದು ಸಾಲೆತ್ತೂರು ಶಾಖೆಯಿಂದ ಇತ್ತೀಚೆಗಷ್ಟೆ ಕೊಡಗಿನ ಮಡಿಕೇರಿಗೆ ವರ್ಗಾವಣೆಗೊಂಡಿದ್ದರು. ಇಂದು ವಾರದ ರಜಾ ದಿನ ಆಗಿದ್ದರಿಂದ ನಿನ್ನೆ ಮಡಿಕೇರಿಯಿಂದ ಊರಿಗೆ ಬಂದಿದ್ದರು. ನಿನ್ನೆ ರಾತ್ರಿ 9 ಗಂಟೆಗೆ ಮನೆಗೆ ಬಂದಿದ್ದ ಸತೀಶ್ವಂದ್ರ, ತೊಕ್ಕೊಟ್ಟಿಗೆ ಹೋಗಿದ್ದವರು ಹಿಂತಿರುಗಿ ಬಂದಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.


ಸತೀಶ್ಚಂದ್ರ ಅವಿವಾಹಿತರಾಗಿದ್ದು ತೀವ್ರ ಕುಡಿತದ ಚಟ ಹೊಂದಿದ್ದರೆನ್ನಲಾಗಿದೆ. ನಿನ್ನೆ ರಾತ್ರಿ ಗೆಳೆಯರ ಜೊತೆ ಕುಡಿತದ ಪಾರ್ಟಿ ಮಾಡಿದ್ದ ಸತೀಶ್ವಂದ್ರ, ಮನೆಗೆ ತೆರಳಿರಲಿಲ್ಲ. ರಾತ್ರಿ ಎಲ್ಲಿದ್ದರು ಎನ್ನುವುದು ಗೊತ್ತಾಗಿಲ್ಲ. ಕುಡಿತದ ನಶೆಯಲ್ಲಿ ಇಂದು ಬೆಳಗ್ಗೆ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಶಂಕಿಸಲಾಗಿದೆ. ರೈಲ್ವೇ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
A Bank Employee was found dead after he was Knocked Down by a speed Train at Thokottu in Mangalore. The deceased had been identified as Satishchandra. It is said that he had consumed alcohol and was out of control.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm