ಬ್ರೇಕಿಂಗ್ ನ್ಯೂಸ್
15-02-21 05:41 pm Mangalore Correspondent ಕರಾವಳಿ
ಉಳ್ಳಾಲ: ಫೆ.15 : ನರಿಂಗಾನ ಗ್ರಾಮ ಪಂಚಾಯತಿಯ 17 ಸ್ಥಾನಗಳಲ್ಲಿ 17 ಸ್ಥಾನಗಳನ್ನೂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಗೆದ್ದಿದ್ದು ಮಂಗಳೂರು ಕ್ಷೇತ್ರದಲ್ಲಿ ಹೊಸ ದಾಖಲೆಯಾಗಿತ್ತು. ಇದೀಗ ಪಂಚಾಯತಿ ಆಡಳಿತದ ಗಾದಿಗೆ ಇಬ್ಬರು ಆಯ್ಕೆಯಾಗಿದ್ದು ನೂತನ ಅಧ್ಯಕ್ಷರಾಗಿ ಶೈಲಜಾ ಶೆಟ್ಟಿ, ಉಪಾಧ್ಯಕ್ಷರಾಗಿ ನವಾಝ್ ಅವಿರೋಧ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಪಂ ಅಧ್ಯಕ್ಷ , ಉಪಾಧ್ಯಕ್ಷರುಗಳಾಗಿ ಶೈಲಜಾ ಶೆಟ್ಟಿ ಹಾಗೂ ನವಾಝ್ ಸೋಮವಾರ ಅಧಿಕಾರ ಸ್ವೀಕರಿಸಿದರು. ನರಿಂಗಾನ ಗ್ರಾಮ ಪಂಚಾಯಿತಿಯ ಒಟ್ಟು 17 ಸದಸ್ಯರ ಪೈಕಿ 17 ಮಂದಿಯೂ ಕಾಂಗ್ರೆಸ್ ಬೆಂಬಲಿತರೇ ಆಯ್ಕೆಯಾಗಿರುವುದು ಮಂಗಳೂರು ಕ್ಷೇತ್ರದಲ್ಲಿ ದಾಖಲೆಯಾಗಿದೆ. ಈ ವೇಳೆ ಮಾತನಾಡಿದ ಉಪಾಧ್ಯಕ್ಷ ನವಾಝ್, ತಮ್ಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಶಾಶ್ವತ ಯೋಜನೆಯ ಅನುಷ್ಠಾನ, ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ, ನಿವೇಶನ ರಹಿತರಿಗೆ ನಿವೇಶನ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋಣಯ್ಯ ನಾಯಕ್ ಚುನಾವಣಾ ಅಧಿಕಾರಿಯಾಗಿದ್ದರು.ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಂಚಾಯಿತಿ ಸಮಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಅಬೂಬಕ್ಕರ್ ಸಿದ್ದಿಕ್ ಪಾರೆ ಹಾಗೂ ಜೋಸೆಫ್ ಕುಟಿನ್ಹಾ, ವಲಯಾಧ್ಯಕ್ಷ ಹನೀಫ್ ಚಂದಹಿತ್ಲು, ಪಜೀರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಫೀಕ್, ಮಾಜಿ ಉಪಾದ್ಯಕ್ಷ ಇಮ್ತಿಯಾಝ್, ನರಿಂಗಾನ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಜಯಂತಿ, ಸಬೀರ್, ಶಾಂತಿ ಡಿಸೋಜ, ಮೊಹಮ್ಮದ್ ನವಾಝ್, ಲತೀಫ್ ಎಂ, ಸುನೀತಾ ಡಿಸೋಜ, ಗಿರಿಜಾ, ಅಬ್ದುಲ್ ರಹಿಮಾನ್ ಸಿ.ಎಚ್, ಮಹಮ್ಮದ್ ಫಯಾಝ್, ತಾಹಿರಾ, ಸಲೀಂ ಎ, ಮಲ್ಲಿಕಾ, ಮುರಲೀಧರ ಶೆಟ್ಟಿ, ಶೇಖಬ್ಬ, ಜ್ಯೋತಿ ಡಿಸೋಜ, ಸುಂದರ ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm