ಬ್ರೇಕಿಂಗ್ ನ್ಯೂಸ್
15-02-21 06:09 pm Mangalore Correspondent ಕರಾವಳಿ
ಮಂಗಳೂರು, ಫೆ.15: ಸುರತ್ಕಲ್ (ಎನ್ಐಟಿಕೆ) ಟೋಲ್ ಕೇಂದ್ರದಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡುತ್ತಾರೆಂಬ ನೆಲೆಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಹಾಗೂ ಮುಲ್ಕಿ ನಾಗರಿಕ ಅಭಿವೃದ್ದಿ ಸಮಿತಿಯ ಮುಖಂಡರು ಸುರತ್ಕಲ್ ಟೋಲ್ ಕೇಂದ್ರದಲ್ಲಿ ಬೆಳಗ್ಗಿನಿಂದಲೇ ಜಮಾಯಿಸಿದ್ದರು. ಈ ವೇಳೆ, ಟೋಲ್ ಸಂಗ್ರಹ ಗುತ್ತಿಗೆದಾರರ ಪ್ರತಿನಿಧಿಗಳು, ಸ್ಥಳೀಯರ ವಾಹನಗಳ ರಿಯಾಯ್ತಿಯನ್ನು ರದ್ದುಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಅಂತಹ ಸೂಚನೆಯೇ ಸಂಬಂಧಪಟ್ಟ ಅಧಿಕಾರಿಗಳಿಂದ ಬಂದಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲದೆ, ಸ್ಥಳೀಯ ವಾಹನಗಳು ಸಂಚರಿಸುವ ಪಥವನ್ನು ಫಾಸ್ಟ್ ಟ್ಯಾಗ್ ಮುಕ್ತವನ್ನಾಗಿಯೇ ಸದ್ಯಕ್ಕೆ ಮುಂದುವರಿಸಲಾಗುವುದು ಎಂದು ಗುತ್ತಿಗೆದಾರರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಅಲ್ಲಿ ಸೇರಿದ್ದ ಸಂಘಟನೆಗಳ ಪ್ರಮುಖರು ಸಭೆ ನಡೆಸಿದ್ದು, ಸ್ಥಳೀಯ ವಾಹನಗಳ ಉಚಿತ ಪ್ರಯಾಣಕ್ಕೆ ಭರವಸೆ ನೀಡಿರುವುದರಿಂದ ಸದ್ಯ ಪ್ರತಿಭಟನೆ ನಡೆಸದಿರಲು ನಿರ್ಧರಿಸಿದ್ದಾರೆ. ಒಂದ್ವೇಳೆ ದಿಢೀರ್ ಶುಲ್ಕ ವಿಧಿಸಿದರೆ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದರು.


ಇದೇ ವೇಳೆ, ಸುರತ್ಕಲ್ ಟೋಲ್ ಕೇಂದ್ರವನ್ನು ಅಲ್ಲಿಂದ ತೆರವುಗೊಳಿಸುವ ಹೋರಾಟವನ್ನು ತೀವ್ರಗೊಳಿಸುವುದು, ಅದರ ಭಾಗವಾಗಿ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಇದಲ್ಲದೆ, ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವರ ಜೊತೆ ಟೋಲ್ ಕೇಂದ್ರ ತೆರವುಗೊಳಿಸುವ ಕುರಿತು ನಡೆಸಿದ ಮಾತುಕತೆಗಳು ಫಲಪ್ರದ ಆಗಲ್ಲ. ಈವರಗೆ ತಾತ್ಕಾಲಿಕ ನೆಲೆಯಲ್ಲಿ ಮೂರು ತಿಂಗಳಿಗೆ ಟೋಲ್ ಸಂಗ್ರಹದ ಗುತ್ತಿಗೆ ನೀಡುತ್ತಿದ್ದರೆ, ಈ ಬಾರಿ ಒಂದು ವರ್ಷದ ಅವಧಿಗೆ ಟೋಲ್ ಸಂಗ್ರಹದ ಗುತ್ತಿಗೆ ನೀಡಲಾಗಿದೆ. ಗುತ್ತಿಗೆ ನವೀಕರಣ, ಟೆಂಡರ್ ಪ್ರಕ್ರಿಯೆ ಜನವರಿ ತಿಂಗಳಲ್ಲಿ ನಡೆಯುವ ಮಾಹಿತಿ ಇದ್ದರೂ, ಸಂಸದರು ನಿರ್ಲಕ್ಷ್ಯ ವಹಿಸಿದ್ದಾರೆ. ಈ ನಡುವೆ, ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿರುವುದು, ತಾತ್ಕಾಲಿಕ ಟೋಲ್ ಗೇಟ್ ತೆರವಿನ ಕುರಿತು ಹೇಳಿಕೆ ನೀಡಿರುವುದು ಜನತೆಯನ್ನು ದಿಕ್ಕುತಪ್ಪಿಸುವ ಯತ್ನ ಅಷ್ಟೇ. ಸರಣಿ ಹೋರಾಟಗಳಿಂದಷ್ಟೆ ಟೋಲ್ ಗೇಟ್ ತೆರವು ಸಾಧ್ಯ ಎಂದು ಸಭೆಯಲ್ಲಿ ನಿರ್ಣಯಿಸಲಾಯ್ತು.

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಮುಲ್ಕಿ ಅಭಿವೃದ್ದಿ ನಾಗರಿಕ ಸಮಿತಿಯ ಅಧ್ಯಕ್ಷ ಹರೀಶ್ ಪುತ್ರನ್, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ವಿವಿಧ ಸಂಘಟನೆಗಳ ಮುಖಂಡರಾದ ವಸಂತ ಬರ್ನಾಡ್, ಧನಂಜಯ ಮಟ್ಟು, ಶ್ರೀನಾಥ್ ಕುಲಾಲ್, ಅಶ್ರಫ್ ಸಫಾ, ಅದ್ದಿ ಬೊಳ್ಳೂರು, ಗ್ರಾಪಂ ಸದಸ್ಯರಾದ ಅಬ್ದುಲ್ ಖಾದರ್ ಹಳೆಯಂಗಡಿ, ಧನರಾಜ್ ಸಸಿಹಿತ್ಲು ಮತ್ತಿತರರು ಉಪಸ್ಥಿತರಿದ್ದರು.
Surathkal Toll Gate gets another year contract by State BJP president Naleen Kumar Kateel amid protest and opposition by localities and organisations.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm