ಬ್ರೇಕಿಂಗ್ ನ್ಯೂಸ್
16-08-20 07:41 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 16: ಕರಾವಳಿಯಲ್ಲಿ ಗಣೇಶೋತ್ಸವ ಅಂದರೆ ಅದು ಸಾರ್ವಜನಿಕರ ಹಬ್ಬ. ಹಿಂದು - ಮುಸ್ಲಿಂ ಭೇದ ಇಲ್ಲದೆ ವಿಜೃಂಭಿಸುವ ಹಬ್ಬವೂ ಹೌದು. ಎಲ್ಲರಿಗೂ ವ್ಯಾಪಾರ, ಆದಾಯ ತರುವ ಹಬ್ಬವೂ ಹೌದು. ಆದರೆ, ಈ ಬಾರಿ ಮಾತ್ರ ಕೊರೊನಾ ಪೀಡೆ ಎಲ್ಲವನ್ನೂ ತಿಂದು ಹಾಕಿದೆ. ಗಣೇಶನ ಹಬ್ಬಕ್ಕೂ ಜನರು ಸಾರ್ವಜನಿಕವಾಗಿ ಉತ್ಸವ ನಡೆಸಲು ರಾಜ್ಯ ಸರಕಾರ ಆಸ್ಪದ ಕೊಟ್ಟಿಲ್ಲ.
ಈಗ ಬಹುತೇಕ ವ್ಯಾಪಾರ ವಹಿವಾಟು ತೆರೆದುಕೊಂಡಿದ್ದರೂ, ಶಿಕ್ಷಣ ಸಂಸ್ಥೆಗಳು ಮತ್ತು ಧಾರ್ಮಿಕ ಸಂಸ್ಥೆಗಳ ಮೇಲಿನ ನಿರ್ಬಂಧ ಮುಂದುವರಿದಿದೆ. ಆಗಸ್ಟ್ 31ರ ವರೆಗೂ ಅನ್ ಲಾಕ್ - 3 ನಿರ್ಬಂಧ ಇರುವುದರಿಂದ ಅಲ್ಲೀ ವರೆಗೂ ಯಾವುದೇ ಹಬ್ಬ ಸಾರ್ವಜನಿಕ ಆಚರಿಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ರಾಜ್ಯ ಸರಕಾರ ಹೇಳ್ತಾ ಇದೆ. ಆದರೆ, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಣೇಶನ ಹಬ್ಬ ಸ್ವಾತಂತ್ರ್ಯ ಸಿಗುವುದಕ್ಕೂ ಮೊದಲೇ ಸಾರ್ವಜನಿಕ ಗಣೇಶೋತ್ಸವ ಆಗಿ ಆಚರಿಸಿಕೊಂಡು ಬಂದ ಹಿನ್ನೆಲೆ ಹೊಂದಿದೆ. ಹೀಗಾಗಿ ಭಾವನಾತ್ಮಕ ನೆಲೆಯಲ್ಲಿ ಬೆಸೆದುಕೊಂಡಿರುವ ಗಣೇಶನ ಹಬ್ಬ ಆಚರಿಸದೆ ನಿಲ್ಲಿಸುವುದು ಈ ಭಾಗದ ಮಂದಿಗೆ ಸಾಧ್ಯವೇ ಇಲ್ಲ ಎನ್ನುವಂಥ ಸ್ಥಿತಿ. ಆದರೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತೊಮ್ಮೆ ಸಾರ್ವಜನಿಕ ಗಣೇಶೋತ್ಸವ ಕಟ್ಟುನಿಟ್ಟಾಗಿ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಸಂಸದರು, ಶಾಸಕರಲ್ಲಿ ಒಂದು ದಿನವಾದ್ರೂ ಗಣೇಶನ ಪೂಜೆಗೆ ಅವಕಾಶ ಕೊಡಿ ಎಂದು ಈ ಭಾಗದ ಗಣೇಶೋತ್ಸವ ಸಮಿತಿಗಳು ಮನವಿ ಮಾಡಿವೆ. ಜಿಲ್ಲಾಡಳಿತಕ್ಕೂ ಅಂಥದ್ದೇ ಮನವಿಯನ್ನು ಮುಂದಿಟ್ಟಿದ್ದವು. ರಿಯಾಯ್ತಿ ಕೊಡಬಹುದು ಎಂಬ ನಿರೀಕ್ಷೆ ಇತ್ತಾದರೂ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಖಡಕ್ ಆದೇಶ ನೀಡಿರುವುದು ನಿರಾಸೆ ಮೂಡಿಸಿದೆ.


ದೇವಸ್ಥಾನ, ಮನೆಗಳಲ್ಲಿ ಗಣೇಶೋತ್ಸವ ಆಚರಣೆ ಮಾಡಬಹುದು. ಆದರೆ ಯಾವುದೇ ಬೀದಿ, ರಸ್ತೆ , ಮೈದಾನದಲ್ಲಿ ಗಣೇಶನ ಪೂಜೆ ಮಾಡುವಂತಿಲ್ಲ. ಗಣೇಶನ ವಿಸರ್ಜನೆಯ ಸಂದರ್ಭದಲ್ಲಿಯೂ ಮೆರವಣಿಗೆ ನಡೆಸುವಂತಿಲ್ಲ. ಆಯಾ ದೇವಸ್ಥಾನದ ಕೆರೆಗಳಲ್ಲಿ ಮತ್ತು ಮನೆಗಳ ಬಾವಿಯಲ್ಲೇ ಗಣೇಶನ ಮೂರ್ತಿ ವಿಸರ್ಜನೆ ಮಾಡುವಂತೆ ನಿರ್ದೇಶನ ನೀಡಲಾಗಿದೆ.
ಹೀಗಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ಒಂದು ದಿನ ಗಣೇಶನ ಪೂಜೆಯನ್ನು ಮಾಡುವುದಕ್ಕೂ ಆಸ್ಪದ ಇಲ್ಲದಂತಾಗಿದೆ. ಅಲ್ಲದೆ, ನೂರು ವರ್ಷಗಳಿಂದಲೂ ಗಣೇಶನ ಪೂಜೆ ನಡೆಸಿಕೊಂಡು ಬಂದವರು ಈಗ ಚಿಂತೆಗೆ ಒಳಗಾಗಿದ್ದಾರೆ. ಹಿಂದು ಪರ ಪೋಸು ನೀಡುವ ಬಿಜೆಪಿ ಆಡಳಿತದಲ್ಲಿದ್ದರೂ ಸರಕಾರ ಗಣೇಶೋತ್ಸವಕ್ಕೆ ಅವಕಾಶ ನೀಡದಿರುವುದು ಕೆಲವು ಹಿಂದು ಸಂಘಟನೆಗಳ ಆಕ್ರೋಶಕ್ಕೂ ಕಾರಣವಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm