ಬ್ರೇಕಿಂಗ್ ನ್ಯೂಸ್
18-02-21 11:27 am Mangaluru Correspondent ಕರಾವಳಿ
ಮಂಗಳೂರು, ಫೆ.18: ಮಂಗಳೂರಿನಲ್ಲಿ ಎರಡನೇ ದಿನವೂ ಐಟಿ ಅಧಿಕಾರಿಗಳ ದಾಳಿ ಮುಂದುವರಿದಿದೆ. ನಿನ್ನೆ ರಾತ್ರಿಯೂ ನಿರಂತರವಾಗಿ ಅಧಿಕಾರಿಗಳು ನಿದ್ದೆಯಿಲ್ಲದೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮಂಗಳೂರಿನ ನಾಲ್ಕು ಪ್ರತಿಷ್ಟಿತ ಆಸ್ಪತ್ರೆ ಹಾಗು ಮೆಡಿಕಲ್ ಕಾಲೇಜುಗಳ ಮಾಲೀಕರನ್ನು ಗುರಿಯಾಗಿಸಿ ದಾಳಿ ನಡೆದಿದ್ದು ಅಧಿಕಾರಿಗಳು ಮಹತ್ವದ ದಾಖಲೆ, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಹೊಂದಿರುವ ಯೇನಪೋಯ, ಕಣಚೂರು, ಶ್ರೀನಿವಾಸ್, ಎಜೆ ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಐಟಿ ಅಧಿಕಾರಿಗಳು ನಾಲ್ಕು ದಿನಗಳಿಗಾಗಿ ಸ್ಥಳೀಯ ಕಾರುಗಳನ್ನು ಬಾಡಿಗೆಗೆ ಪಡೆದಿದ್ದು ಈ ಹಿನ್ನೆಲೆಯಲ್ಲಿ ಮಹತ್ವದ ಮಾಹಿತಿಗಳನ್ನು ಖಚಿತಪಡಿಸಿಕೊಂಡೇ ದಾಳಿ ನಡೆಸಿರುವ ಸಾಧ್ಯತೆಯಿದೆ. ರಾತ್ರಿಯೂ ನಿರಂತರವಾಗಿ ಪರಿಶೀಲನೆಯಲ್ಲಿ ತೊಡಗಿದ್ದರಿಂದ ಆದಾಯ ತೆರಿಗೆ ವಂಚನೆಯಲ್ಲಿ ಖಚಿತ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ ಎನ್ನಲಾಗುತ್ತಿದೆ. 200 ಕ್ಕೂ ಅಧಿಕ ಮಂದಿ ಅಧಿಕಾರಿ ಮತ್ತು ಸಿಬ್ಬಂದಿಗಳಿದ್ದು ಮಂಗಳೂರಿನ ವಿವಿಧೆಡೆಗಳಲ್ಲಿ ರಹಸ್ಯವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮಂಗಳೂರಿನಲ್ಲಿ ದಾಳಿಗೆ ಒಳಗಾಗಿರುವ ನಾಲ್ಕು ಸಂಸ್ಥೆಗಳು ಕುಟುಂಬ ಒಡೆತನಕ್ಕೆ ಸೇರಿದವು. ಕುಟುಂಬಸ್ಥರೇ ಪ್ರಮುಖ ಹುದ್ದೆಗಳಲ್ಲಿದ್ದು ಸಂಸ್ಥೆ ನಡೆಸುತ್ತಿದ್ದಾರೆ. ಇವರನ್ನು ಎರಡು ದಿನಗಳಿಂದ ಮನೆಯಲ್ಲೇ ಇರಿಸಿಕೊಂಡು ಪ್ರಶ್ನೆ ಮುಂದಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳು ತಾವು ಇದ್ದಲ್ಲಿಗೇ ಊಟ, ತಿಂಡಿ ತರಿಸಿಕೊಂಡು ಅಲ್ಲೇ ಸರದಿಯಂತೆ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಾಹಿತಿ ಪ್ರಕಾರ, ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಜೊತೆಗಿದ್ದು ಒಟ್ಟು ಆದಾಯ, ಆದಾಯ ತೆರಿಗೆ, ಜಿಎಸ್ಟಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
The Income-tax raid on four Medical colleges in Mangalore continues for the second day on the owners' house, institutions and their properties. The income tax dep raided on 17th Feb, 20201 early morning.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm