ಬ್ರೇಕಿಂಗ್ ನ್ಯೂಸ್
            
                        18-02-21 11:27 am Mangaluru Correspondent ಕರಾವಳಿ
            ಮಂಗಳೂರು, ಫೆ.18: ಮಂಗಳೂರಿನಲ್ಲಿ ಎರಡನೇ ದಿನವೂ ಐಟಿ ಅಧಿಕಾರಿಗಳ ದಾಳಿ ಮುಂದುವರಿದಿದೆ. ನಿನ್ನೆ ರಾತ್ರಿಯೂ ನಿರಂತರವಾಗಿ ಅಧಿಕಾರಿಗಳು ನಿದ್ದೆಯಿಲ್ಲದೆ ಪರಿಶೀಲನೆಯಲ್ಲಿ ತೊಡಗಿದ್ದಾರೆ. 
ಮಂಗಳೂರಿನ ನಾಲ್ಕು ಪ್ರತಿಷ್ಟಿತ ಆಸ್ಪತ್ರೆ ಹಾಗು ಮೆಡಿಕಲ್ ಕಾಲೇಜುಗಳ ಮಾಲೀಕರನ್ನು ಗುರಿಯಾಗಿಸಿ ದಾಳಿ ನಡೆದಿದ್ದು ಅಧಿಕಾರಿಗಳು ಮಹತ್ವದ ದಾಖಲೆ, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಹೊಂದಿರುವ ಯೇನಪೋಯ, ಕಣಚೂರು, ಶ್ರೀನಿವಾಸ್, ಎಜೆ ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಐಟಿ ಅಧಿಕಾರಿಗಳು ನಾಲ್ಕು ದಿನಗಳಿಗಾಗಿ ಸ್ಥಳೀಯ ಕಾರುಗಳನ್ನು ಬಾಡಿಗೆಗೆ ಪಡೆದಿದ್ದು ಈ ಹಿನ್ನೆಲೆಯಲ್ಲಿ ಮಹತ್ವದ ಮಾಹಿತಿಗಳನ್ನು ಖಚಿತಪಡಿಸಿಕೊಂಡೇ ದಾಳಿ ನಡೆಸಿರುವ ಸಾಧ್ಯತೆಯಿದೆ. ರಾತ್ರಿಯೂ ನಿರಂತರವಾಗಿ ಪರಿಶೀಲನೆಯಲ್ಲಿ ತೊಡಗಿದ್ದರಿಂದ ಆದಾಯ ತೆರಿಗೆ ವಂಚನೆಯಲ್ಲಿ ಖಚಿತ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ ಎನ್ನಲಾಗುತ್ತಿದೆ. 200 ಕ್ಕೂ ಅಧಿಕ ಮಂದಿ ಅಧಿಕಾರಿ ಮತ್ತು ಸಿಬ್ಬಂದಿಗಳಿದ್ದು ಮಂಗಳೂರಿನ ವಿವಿಧೆಡೆಗಳಲ್ಲಿ ರಹಸ್ಯವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರಿನಲ್ಲಿ ದಾಳಿಗೆ ಒಳಗಾಗಿರುವ ನಾಲ್ಕು ಸಂಸ್ಥೆಗಳು ಕುಟುಂಬ ಒಡೆತನಕ್ಕೆ ಸೇರಿದವು. ಕುಟುಂಬಸ್ಥರೇ ಪ್ರಮುಖ ಹುದ್ದೆಗಳಲ್ಲಿದ್ದು ಸಂಸ್ಥೆ ನಡೆಸುತ್ತಿದ್ದಾರೆ. ಇವರನ್ನು ಎರಡು ದಿನಗಳಿಂದ ಮನೆಯಲ್ಲೇ ಇರಿಸಿಕೊಂಡು ಪ್ರಶ್ನೆ ಮುಂದಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳು ತಾವು ಇದ್ದಲ್ಲಿಗೇ ಊಟ, ತಿಂಡಿ ತರಿಸಿಕೊಂಡು ಅಲ್ಲೇ ಸರದಿಯಂತೆ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಾಹಿತಿ ಪ್ರಕಾರ, ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಜೊತೆಗಿದ್ದು ಒಟ್ಟು ಆದಾಯ, ಆದಾಯ ತೆರಿಗೆ, ಜಿಎಸ್ಟಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
            
            
            The Income-tax raid on four Medical colleges in Mangalore continues for the second day on the owners' house, institutions and their properties. The income tax dep raided on 17th Feb, 20201 early morning.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm