ಬ್ರೇಕಿಂಗ್ ನ್ಯೂಸ್
18-02-21 11:27 am Mangaluru Correspondent ಕರಾವಳಿ
ಮಂಗಳೂರು, ಫೆ.18: ಮಂಗಳೂರಿನಲ್ಲಿ ಎರಡನೇ ದಿನವೂ ಐಟಿ ಅಧಿಕಾರಿಗಳ ದಾಳಿ ಮುಂದುವರಿದಿದೆ. ನಿನ್ನೆ ರಾತ್ರಿಯೂ ನಿರಂತರವಾಗಿ ಅಧಿಕಾರಿಗಳು ನಿದ್ದೆಯಿಲ್ಲದೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮಂಗಳೂರಿನ ನಾಲ್ಕು ಪ್ರತಿಷ್ಟಿತ ಆಸ್ಪತ್ರೆ ಹಾಗು ಮೆಡಿಕಲ್ ಕಾಲೇಜುಗಳ ಮಾಲೀಕರನ್ನು ಗುರಿಯಾಗಿಸಿ ದಾಳಿ ನಡೆದಿದ್ದು ಅಧಿಕಾರಿಗಳು ಮಹತ್ವದ ದಾಖಲೆ, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಹೊಂದಿರುವ ಯೇನಪೋಯ, ಕಣಚೂರು, ಶ್ರೀನಿವಾಸ್, ಎಜೆ ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಐಟಿ ಅಧಿಕಾರಿಗಳು ನಾಲ್ಕು ದಿನಗಳಿಗಾಗಿ ಸ್ಥಳೀಯ ಕಾರುಗಳನ್ನು ಬಾಡಿಗೆಗೆ ಪಡೆದಿದ್ದು ಈ ಹಿನ್ನೆಲೆಯಲ್ಲಿ ಮಹತ್ವದ ಮಾಹಿತಿಗಳನ್ನು ಖಚಿತಪಡಿಸಿಕೊಂಡೇ ದಾಳಿ ನಡೆಸಿರುವ ಸಾಧ್ಯತೆಯಿದೆ. ರಾತ್ರಿಯೂ ನಿರಂತರವಾಗಿ ಪರಿಶೀಲನೆಯಲ್ಲಿ ತೊಡಗಿದ್ದರಿಂದ ಆದಾಯ ತೆರಿಗೆ ವಂಚನೆಯಲ್ಲಿ ಖಚಿತ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ ಎನ್ನಲಾಗುತ್ತಿದೆ. 200 ಕ್ಕೂ ಅಧಿಕ ಮಂದಿ ಅಧಿಕಾರಿ ಮತ್ತು ಸಿಬ್ಬಂದಿಗಳಿದ್ದು ಮಂಗಳೂರಿನ ವಿವಿಧೆಡೆಗಳಲ್ಲಿ ರಹಸ್ಯವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರಿನಲ್ಲಿ ದಾಳಿಗೆ ಒಳಗಾಗಿರುವ ನಾಲ್ಕು ಸಂಸ್ಥೆಗಳು ಕುಟುಂಬ ಒಡೆತನಕ್ಕೆ ಸೇರಿದವು. ಕುಟುಂಬಸ್ಥರೇ ಪ್ರಮುಖ ಹುದ್ದೆಗಳಲ್ಲಿದ್ದು ಸಂಸ್ಥೆ ನಡೆಸುತ್ತಿದ್ದಾರೆ. ಇವರನ್ನು ಎರಡು ದಿನಗಳಿಂದ ಮನೆಯಲ್ಲೇ ಇರಿಸಿಕೊಂಡು ಪ್ರಶ್ನೆ ಮುಂದಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳು ತಾವು ಇದ್ದಲ್ಲಿಗೇ ಊಟ, ತಿಂಡಿ ತರಿಸಿಕೊಂಡು ಅಲ್ಲೇ ಸರದಿಯಂತೆ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಾಹಿತಿ ಪ್ರಕಾರ, ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಜೊತೆಗಿದ್ದು ಒಟ್ಟು ಆದಾಯ, ಆದಾಯ ತೆರಿಗೆ, ಜಿಎಸ್ಟಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
The Income-tax raid on four Medical colleges in Mangalore continues for the second day on the owners' house, institutions and their properties. The income tax dep raided on 17th Feb, 20201 early morning.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm