ಬ್ರೇಕಿಂಗ್ ನ್ಯೂಸ್
            
                        18-02-21 07:50 pm Mangaluru Correspondent ಕರಾವಳಿ
            ಪುತ್ತೂರು, ಫೆ.18: ಬ್ಯಾಂಕ್ ಸಾಲ ಕಟ್ಟದ ಕಾರಣ ಮನೆ ಮುಟ್ಟುಗೋಲು ಹಾಕಲು ಬಂದ ಬ್ಯಾಂಕ್ ಸಿಬಂದಿ ಎದುರಲ್ಲೇ ಮನೆ ಮಾಲಕನ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದಲ್ಲಿ ಗುರುವಾರ ನಡೆದಿದೆ.
ಪುತ್ತೂರಿನ ಹಾರಾಡಿ ರೈಲ್ವೇ ರಸ್ತೆಯ ನಿವಾಸಿ ಉದ್ಯಮಿ ರಘುವೀರ್ ಪ್ರಭು ಎಂಬವರ ಪತ್ನಿ ಪ್ರಾರ್ಥನಾ ಪ್ರಭು (52) ಆತ್ಮಹತ್ಯೆ ಮಾಡಿಕೊಂಡವರು.

ರಾಷ್ಟ್ರೀಕೃತ ಬ್ಯಾಂಕ್ನಿಂದ ಸಾಲ ಪಡೆದಿದ್ದು, ಸಾಲ ಮರುಪಾವತಿ ಮಾಡದ ಕಾರಣಕ್ಕೆ ಬ್ಯಾಂಕ್ ನೋಟೀಸ್ ಬಂದಿತ್ತು. ಬಳಿಕ ಕೋರ್ಟ್ ನೋಟೀಸ್ ಹೊರಡಿದ್ದು ಮನೆ ಮುಟ್ಟುಗೋಲು ಹಾಕಲು ಗುರುವಾರ ಬ್ಯಾಂಕ್ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ಮನೆ ಮಂದಿ ಆತಂಕಕ್ಕೊಳಾಗಿದ್ದರು. ಇದೇ ವೇಳೆ ಮನೆಯೊಳಗಿದ್ದ ಪ್ರಾರ್ಥನಾ ಪ್ರಭು ಡೆತ್ ನೋಟ್ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರಘುವೀರ ಪ್ರಭು ಕೆನರಾ ಬ್ಯಾಂಕ್ನಲ್ಲಿ ಸಾಲ ಹೊಂದಿದ್ದು ಕೋರ್ಟು ಆದೇಶದೊಂದಿಗೆ ಅಧಿಕಾರಿಗಳು ಮನೆ ಮುಟ್ಟುಗೋಲಿಗೆ ಬಂದಿದ್ದರು. ಈ ಸಂದರ್ಭ ಮುಟ್ಟುಗೋಲಿಗೆ ಭದ್ರತೆ ಒದಗಿಸಲು ಬಂದಿದ್ದ ಪೊಲೀಸರು ನೇಣು ಬಿಗಿದ ಸ್ಥಿತಿಯಲ್ಲಿದ್ದ ಪ್ರಾರ್ಥನಾ ಪ್ರಭು ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರು. ಆದರೆ ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಘಟನಾ ಸ್ಥಳಕ್ಕೆ ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಜಂಬುರಾಜ್ ಮಹಾಜ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ರಾಧಾಕೃಷ್ಣ ಭಕ್ತ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಸಚಿನ್ ಶೆಣೈ, ಸದಾಶಿವ ಪೈ ಮತ್ತಿತರರು ಆಗಮಿಸಿ ಬ್ಯಾಂಕ್ ಅಧಿಕಾರಿಗಳ ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದರು.
ಘಟನೆಯ ಕುರಿತು ಮೃತರ ಪತಿ ರಘುವೀರ್ ಪ್ರಭು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
            
            
            A woman in puttur ended her life after bank officials came to vacate their house over the repayment of a loan.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm