ಬ್ರೇಕಿಂಗ್ ನ್ಯೂಸ್
18-02-21 07:50 pm Mangaluru Correspondent ಕರಾವಳಿ
ಪುತ್ತೂರು, ಫೆ.18: ಬ್ಯಾಂಕ್ ಸಾಲ ಕಟ್ಟದ ಕಾರಣ ಮನೆ ಮುಟ್ಟುಗೋಲು ಹಾಕಲು ಬಂದ ಬ್ಯಾಂಕ್ ಸಿಬಂದಿ ಎದುರಲ್ಲೇ ಮನೆ ಮಾಲಕನ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದಲ್ಲಿ ಗುರುವಾರ ನಡೆದಿದೆ.
ಪುತ್ತೂರಿನ ಹಾರಾಡಿ ರೈಲ್ವೇ ರಸ್ತೆಯ ನಿವಾಸಿ ಉದ್ಯಮಿ ರಘುವೀರ್ ಪ್ರಭು ಎಂಬವರ ಪತ್ನಿ ಪ್ರಾರ್ಥನಾ ಪ್ರಭು (52) ಆತ್ಮಹತ್ಯೆ ಮಾಡಿಕೊಂಡವರು.

ರಾಷ್ಟ್ರೀಕೃತ ಬ್ಯಾಂಕ್ನಿಂದ ಸಾಲ ಪಡೆದಿದ್ದು, ಸಾಲ ಮರುಪಾವತಿ ಮಾಡದ ಕಾರಣಕ್ಕೆ ಬ್ಯಾಂಕ್ ನೋಟೀಸ್ ಬಂದಿತ್ತು. ಬಳಿಕ ಕೋರ್ಟ್ ನೋಟೀಸ್ ಹೊರಡಿದ್ದು ಮನೆ ಮುಟ್ಟುಗೋಲು ಹಾಕಲು ಗುರುವಾರ ಬ್ಯಾಂಕ್ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ಮನೆ ಮಂದಿ ಆತಂಕಕ್ಕೊಳಾಗಿದ್ದರು. ಇದೇ ವೇಳೆ ಮನೆಯೊಳಗಿದ್ದ ಪ್ರಾರ್ಥನಾ ಪ್ರಭು ಡೆತ್ ನೋಟ್ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರಘುವೀರ ಪ್ರಭು ಕೆನರಾ ಬ್ಯಾಂಕ್ನಲ್ಲಿ ಸಾಲ ಹೊಂದಿದ್ದು ಕೋರ್ಟು ಆದೇಶದೊಂದಿಗೆ ಅಧಿಕಾರಿಗಳು ಮನೆ ಮುಟ್ಟುಗೋಲಿಗೆ ಬಂದಿದ್ದರು. ಈ ಸಂದರ್ಭ ಮುಟ್ಟುಗೋಲಿಗೆ ಭದ್ರತೆ ಒದಗಿಸಲು ಬಂದಿದ್ದ ಪೊಲೀಸರು ನೇಣು ಬಿಗಿದ ಸ್ಥಿತಿಯಲ್ಲಿದ್ದ ಪ್ರಾರ್ಥನಾ ಪ್ರಭು ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರು. ಆದರೆ ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಘಟನಾ ಸ್ಥಳಕ್ಕೆ ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಜಂಬುರಾಜ್ ಮಹಾಜ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ರಾಧಾಕೃಷ್ಣ ಭಕ್ತ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಸಚಿನ್ ಶೆಣೈ, ಸದಾಶಿವ ಪೈ ಮತ್ತಿತರರು ಆಗಮಿಸಿ ಬ್ಯಾಂಕ್ ಅಧಿಕಾರಿಗಳ ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದರು.
ಘಟನೆಯ ಕುರಿತು ಮೃತರ ಪತಿ ರಘುವೀರ್ ಪ್ರಭು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A woman in puttur ended her life after bank officials came to vacate their house over the repayment of a loan.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm