ಬ್ರೇಕಿಂಗ್ ನ್ಯೂಸ್
20-02-21 10:42 pm Udupi Correspondent ಕರಾವಳಿ
ಉಡುಪಿ, ಫೆ. 20: ಕೊರೋನಾದ 2ನೇ ಅಲೆಯ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರ ಗಡಿಯನ್ನು ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ವಿಧಿಸಲು ಉನ್ನತ ಮಟ್ಟದಲ್ಲಿ ಚರ್ಚೆಯಾಗುತ್ತಿದೆ ಎಂದು ರಾಜ್ಯ ಗೃಹ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾಪುವಿನಲ್ಲಿ ನೂತನವಾಗಿ ನಿರ್ಮಿಸಲಾದ ಪೊಲೀಸ್ ವಸತಿ ಗೃಹಗಳ ಉದ್ಘಾಟನೆಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೇರಳ ಹಾಗೂ ಮಹಾರಾಷ್ಟ್ರಗಳ ಜೊತೆ ನಮ್ಮ ಜಿಲ್ಲೆಗಳಿಗೆ ವ್ಯಾಪಾರ ಸಂಬಂಧವಿದೆ. ಕೇರಳಕ್ಕೆ ದಿನನಿತ್ಯದ ಓಡಾಟವೂ ನಡೆಯುತ್ತಿದೆ. ಹೀಗಿದ್ದರೂ ಕೊರೋನ ಭೀತಿಯ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಿಗೆ ಕೆಲವೊಂದು ನಿರ್ಬಂಧ ಹಾಕಲು ಚರ್ಚೆ ನಡೆಯುತ್ತಿದೆ ಎಂದರು.
ಕೇರಳದಿಂದ ಕರ್ನಾಟಕಕ್ಕೆ ಬರಲು 15 -16 ರಸ್ತೆಗಳಿವೆ. ಇವುಗಳಲ್ಲಿ ಪ್ರಮುಖ ಮಾರ್ಗಗಳಿಗೆ ಸೀಮಿತಗೊಳಿಸಿ ಉಳಿದ ರಸ್ತೆಗಳನ್ನು ಬಂದ್ ಮಾಡಲು ಚಿಂತನೆ ನಡೆಯುತ್ತಿದೆ. ಅಲ್ಲದೇ ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಎಲ್ಲರೂ ಕಡ್ಡಾಯವಾಗಿ ಕೋವಿಡ್ ಪರೀಕ್ಷಾ ವರದಿ ಸಲ್ಲಿಸಬೇಕು ಎಂಬ ನಿಯಮ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಅಲ್ಲದೇ ಮಹಾರಾಷ್ಟ್ರ, ಕೇರಳ ಹಾಗೂ ಆಂಧ್ರಪ್ರದೇಶ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸಂಬಂಧಪಟ್ಟ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದೂ ಸಚಿವರು ನುಡಿದರು.

ಪಿಎಫ್ಐ ವಿವಾದದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಿಎಫ್ಐ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಈಗಾಗಲೇ ಪ್ರಕರಣ ದಾಖಲಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದರು.
ಐಎಂಎ ಜುವೆಲ್ಲರಿ ಹಗರಣದ ಆರೋಪಿ ಮನ್ಸೂರ್ ಖಾನ್ ನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿಗೆ ಹಣ ಸಂದಾಯವಾಗಿರುವ ಆರೋಪದ ಬಗ್ಗೆ ವಿಚಾರಿಸಿದಾಗ, ಐಎಂಎ ಪ್ರಕರಣವನ್ನು ಸಿಬಿಐ ತನಿಖೆ ಮಾಡುತ್ತಿದೆ. ಅದನ್ನು ನಮ್ಮ ರಾಜ್ಯದ ಪೊಲೀಸರು ತನಿಖೆ ಮಾಡುತ್ತಿಲ್ಲ. ಹೀಗಾಗಿ ವಿಚಾರಣೆಯ ಅಂಶಗಳು ನನ್ನ ಗಮನಕ್ಕೆ ಬಂದಿಲ್ಲ ಎಂದು ಬೊಮ್ಮಾಯಿ ಹೇಳಿದರು.
State home minister Basavaraj Bommai on Saturday, February 20 said that restrictions will be placed on the state’s border areas with Kerala and Maharashtra due to rising cases and second wave of coronavirus.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm