ಬ್ರೇಕಿಂಗ್ ನ್ಯೂಸ್
22-02-21 11:42 am Mangalore Correspondent ಕರಾವಳಿ
ಮಂಗಳೂರು, ಫೆ.21: ಕೃಷ್ಣಾಪುರ 5ನೇ ಬ್ಲಾಕ್ ನಿವಾಸಿ ಕಾಟಿಪಳ್ಳದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ದರ್ಶನ್ (14) ಎಂಬ ಬಾಲಕನ ಆಕಸ್ಮಿಕ ಸಾವಿಗೆ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಶಿಕ್ಷಕರು ಬೆದರಿಕೆ ಹಾಕಿದ್ದೇ ಕಾರಣ ಎಂದು ಆತನ ಪೋಷಕರು ದೂರು ನೀಡಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನನ್ನ ಮಗನ ಸಾವಿನ ಬಗ್ಗೆ ತನಿಖೆ ನಡೆಸಿ ಕಾರಣಕರ್ತರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬಾಲಕ ದರ್ಶನ್ ತಂದೆ ಗೋಪಾಲ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಗೆ ಶನಿವಾರ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ಇಂದು ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಕ್ಲಾಸ್ ಟೀಚರ್ ಅನ್ನು ಠಾಣೆಗೆ ಕರೆಸಿ ಹೇಳಿಕೆ ಪಡೆದಿದ್ದಾರೆ.
ಬಾಲಕ ಫೆ.18ರಂದು ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗ್ಗದಲ್ಲಿ ಅಟವಾಡುತ್ತಿದ್ದಾಗ ಹಗ್ಗ ಕುತ್ತಿಗೆಗೆ ಬಿಗಿದು ಗಂಭೀರ ಗಾಯಗೊಂಡಿದ್ದ ಎಂದು ಆತನ ಮಾವ ಸುಧಾಕರ್ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದ ಎನ್ನಲಾಗಿದೆ.
9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಎಲ್ಲ ವಿಷಯಗಳಲ್ಲಿ ಫೇಲಾಗಿದ್ದ. ಅಲ್ಲದೆ ಕ್ಲಾಸ್ ರಿಪೋರ್ಟ್ ಕಾರ್ಡಿಗೆ ಹೆತ್ತವರ ಸಹಿಯನ್ನು ತಾನೇ ಮಾಡಿ ಶಿಕ್ಷಕರಿಗೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಚಾರ ಗೊತ್ತಾಗಿ ಶಿಕ್ಷಕರು ಬಾಲಕನನ್ನು ಬೈದಿದ್ದರು ಎನ್ನಲಾಗಿದೆ. ಅಷ್ಟಕ್ಕೇ ಆತ್ಮಹತ್ಯೆ ಮಾಡಿಕೊಂಡನೇ ಅಥವಾ ಹಗ್ಗದಲ್ಲಿ ಆಟವಾಡುವಾಗ ಕುತ್ತಿಗೆ ಬಿಗಿದು ಆಕಸ್ಮಿಕ ಸಾವು ಕಂಡಿದ್ದನೇ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a 14-year-old boy accidentally hanged himself while playing with a rope in Krishnapura, Surathkal in Mangalore. Parents demand for detailed probe on school.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm