ಬ್ರೇಕಿಂಗ್ ನ್ಯೂಸ್
22-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಪಿಎಫ್ಐ, ಎಸ್ಡಿಪಿಐ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿದ್ದರೂ, ಅವನ್ನು ನಿಷೇಧಿಸಲು ಬಿಜೆಪಿ ಮುಂದಾಗಲ್ಲ. ಬಿಜೆಪಿಗೆ ಎಸ್ ಡಿಪಿಐ ಬೇಕು, ಇವರದ್ದೇ 'ಬಿ' ಟೀಂ ಪಿಎಫ್ಐ, ಎಸ್ಡಿಪಿಐ ಗಳಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಉಡುಪಿಗೆ ತೆರಳಲು ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಮಾಧ್ಯಮದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಪಿಎಫ್ಐ ರ್ಯಾಲಿ ನಡೆಸಲು ಅನುಮತಿ ಕೊಟ್ಟಿದ್ದು ಯಾರು ? ಇದೇ ಬಿಜೆಪಿ ಆಡಳಿತವೇ ಅಲ್ಲವೇ..? ಈಗ ಪಿಎಫ್ಐ, ಎಸ್ ಡಿಪಿಐ ರದ್ದು ಮಾಡುತ್ತೇವೆ, ಆಕ್ಷನ್ ತಗೊಳ್ತೀವಿ ಅಂತಿದ್ದಾರೆ. ಇವ್ರು ಆ ಕೆಲಸಾನ ಮಾಡಲ್ಲ. ಯಾಕಂದ್ರೆ, ಇವರದ್ದೇ ಬಿ ಟೀಮ್ ಅವರದ್ದು ಎಂದು ಬಿಜೆಪಿ ನಾಯಕರನ್ನು ಮೂದಲಿಸಿದರು.

ಪಿಎಫ್ಐ ರದ್ದು ಮಾಡಬೇಕೆಂದಿದ್ದರೆ ಸಾಕಷ್ಟು ಸಾಕ್ಷ್ಯಗಳು ಇವರ ಮುಂದೆನೇ ಇವೆ. ನಿಷೇಧ ಮಾಡಬೇಕೂಂತ ಇದ್ದರೆ ಅದನ್ನು ಕೇಂದ್ರಕ್ಕೆ ಕಳುಹಿಸಿ ನಿಷೇಧ ಮಾಡಬಹುದು. ಇವರದೇ ಸರಕಾರ ಕೇಂದ್ರದಲ್ಲೂ ಇದೆ. ಆದರೆ, ಇವರಿಗೆ ಅದು ಬೇಕಿಲ್ಲ. ಎಸ್ಡಿಪಿಐಯನ್ನು ಬೆಳೆಸುತ್ತಿರುವುದು ಕೂಡ ಇದೇ ಬಿಜೆಪಿ. ಇವರು ತಮ್ಮ ಬೇಳೆ ಬೇಯಿಸಿಕೊಳ್ಳಲೆಂದೇ ಇಂಥವನ್ನು ಪೋಷಿಸಿಕೊಂಡು ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಪುದುಚೇರಿಯಲ್ಲಿ ಸಿಎಂ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿದ್ದು ಹೋದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾರಾಯಣಸ್ವಾಮಿ ಅವರು ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಇರಬಾರದು. ಅವರ ಅಧಿಕಾರಾವಧಿಯಲ್ಲಿ ಚುನಾವಣೆ ನಡೆಯಬಾರದು ಎಂದು ಸರ್ಕಾರ ಕಿತ್ತು ಹಾಕುತ್ತಿದ್ದಾರೆ. ಇದು ಅಸಾಂವಿಧಾನಿಕವಾಗಿದ್ದು, ಶಾಸಕರನ್ನು ಖರೀದಿಸಿ ರಾಜೀನಾಮೆ ಕೊಡಿಸುತ್ತಿದ್ದಾರೆ ಎಂದು ಆಪಾದಿಸಿದರು.
Video:
Congress leader Siddaramaiah who arrived in Mangalore slammed the BJP government for Not Banning SDPI and PFI though they are in full power in country.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm