ಬ್ರೇಕಿಂಗ್ ನ್ಯೂಸ್
22-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಪಿಎಫ್ಐ, ಎಸ್ಡಿಪಿಐ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿದ್ದರೂ, ಅವನ್ನು ನಿಷೇಧಿಸಲು ಬಿಜೆಪಿ ಮುಂದಾಗಲ್ಲ. ಬಿಜೆಪಿಗೆ ಎಸ್ ಡಿಪಿಐ ಬೇಕು, ಇವರದ್ದೇ 'ಬಿ' ಟೀಂ ಪಿಎಫ್ಐ, ಎಸ್ಡಿಪಿಐ ಗಳಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಉಡುಪಿಗೆ ತೆರಳಲು ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಮಾಧ್ಯಮದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಪಿಎಫ್ಐ ರ್ಯಾಲಿ ನಡೆಸಲು ಅನುಮತಿ ಕೊಟ್ಟಿದ್ದು ಯಾರು ? ಇದೇ ಬಿಜೆಪಿ ಆಡಳಿತವೇ ಅಲ್ಲವೇ..? ಈಗ ಪಿಎಫ್ಐ, ಎಸ್ ಡಿಪಿಐ ರದ್ದು ಮಾಡುತ್ತೇವೆ, ಆಕ್ಷನ್ ತಗೊಳ್ತೀವಿ ಅಂತಿದ್ದಾರೆ. ಇವ್ರು ಆ ಕೆಲಸಾನ ಮಾಡಲ್ಲ. ಯಾಕಂದ್ರೆ, ಇವರದ್ದೇ ಬಿ ಟೀಮ್ ಅವರದ್ದು ಎಂದು ಬಿಜೆಪಿ ನಾಯಕರನ್ನು ಮೂದಲಿಸಿದರು.
ಪಿಎಫ್ಐ ರದ್ದು ಮಾಡಬೇಕೆಂದಿದ್ದರೆ ಸಾಕಷ್ಟು ಸಾಕ್ಷ್ಯಗಳು ಇವರ ಮುಂದೆನೇ ಇವೆ. ನಿಷೇಧ ಮಾಡಬೇಕೂಂತ ಇದ್ದರೆ ಅದನ್ನು ಕೇಂದ್ರಕ್ಕೆ ಕಳುಹಿಸಿ ನಿಷೇಧ ಮಾಡಬಹುದು. ಇವರದೇ ಸರಕಾರ ಕೇಂದ್ರದಲ್ಲೂ ಇದೆ. ಆದರೆ, ಇವರಿಗೆ ಅದು ಬೇಕಿಲ್ಲ. ಎಸ್ಡಿಪಿಐಯನ್ನು ಬೆಳೆಸುತ್ತಿರುವುದು ಕೂಡ ಇದೇ ಬಿಜೆಪಿ. ಇವರು ತಮ್ಮ ಬೇಳೆ ಬೇಯಿಸಿಕೊಳ್ಳಲೆಂದೇ ಇಂಥವನ್ನು ಪೋಷಿಸಿಕೊಂಡು ಬರುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಪುದುಚೇರಿಯಲ್ಲಿ ಸಿಎಂ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿದ್ದು ಹೋದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾರಾಯಣಸ್ವಾಮಿ ಅವರು ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಇರಬಾರದು. ಅವರ ಅಧಿಕಾರಾವಧಿಯಲ್ಲಿ ಚುನಾವಣೆ ನಡೆಯಬಾರದು ಎಂದು ಸರ್ಕಾರ ಕಿತ್ತು ಹಾಕುತ್ತಿದ್ದಾರೆ. ಇದು ಅಸಾಂವಿಧಾನಿಕವಾಗಿದ್ದು, ಶಾಸಕರನ್ನು ಖರೀದಿಸಿ ರಾಜೀನಾಮೆ ಕೊಡಿಸುತ್ತಿದ್ದಾರೆ ಎಂದು ಆಪಾದಿಸಿದರು.
Video:
Congress leader Siddaramaiah who arrived in Mangalore slammed the BJP government for Not Banning SDPI and PFI though they are in full power in country.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm